AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಬೆಳ್ತಂಗಡಿಯಲ್ಲಿ ನವ ಗುಳಿಗ ದೈವಗಳಿಗೆ ನಡೆಯಿತು ಬಹಳ ಅಪರೂಪದ ಗಗ್ಗರ ಸೇವೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಗುಳಿಗ ದೈವಕ್ಕೆ ಗಗ್ಗರ ಸೇವೆ ನಡೆಯುವುದು ಸಾಮಾನ್ಯ. ಆದರೆ, ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆಯಲ್ಲಿರುವ ದುರ್ಗಾಪರಮೇಶ್ವರಿ & ನವಗುಳಿಗ ಕ್ಷೇತ್ರದಲ್ಲಿ ಏಕಕಾಲದಲ್ಲಿ ಒಂಬತ್ತು ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆದಿದೆ. ಅಲ್ಲದೆ, ನವ ಗುಳಿಗ ದೈವಗಳಿಗೆ ಸೇವೆಯ ಜೊತೆಗೆ ಹರಕೆಯ ಸೇವೆಯೂ ಸಂಪನ್ನಗೊಂಡಿದೆ.

ಮಂಗಳೂರು: ಬೆಳ್ತಂಗಡಿಯಲ್ಲಿ ನವ ಗುಳಿಗ ದೈವಗಳಿಗೆ ನಡೆಯಿತು ಬಹಳ ಅಪರೂಪದ  ಗಗ್ಗರ ಸೇವೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆಯಿತು ಬಹಳ ಅಪರೂಪದ ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ
ಅಶೋಕ್​ ಪೂಜಾರಿ, ಮಂಗಳೂರು
| Edited By: Rakesh Nayak Manchi|

Updated on:Feb 05, 2024 | 3:20 PM

Share

ಮಂಗಳೂರು, ಫೆ.5: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಗುಳಿಗ ದೈವಕ್ಕೆ (Guliga Daiva) ಗಗ್ಗರ ಸೇವೆ ನಡೆಯುವುದು ಸಾಮಾನ್ಯ. ಆದರೆ, ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆಯಲ್ಲಿ ಏಕಕಾಲದಲ್ಲಿ ಒಂಬತ್ತು ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆದಿದೆ. ಅಲ್ಲದೆ, ನವ ಗುಳಿಗ ದೈವಗಳಿಗೆ ಸೇವೆಯ ಜೊತೆಗೆ ಹರಕೆಯ ಸೇವೆಯೂ ಸಂಪನ್ನಗೊಂಡಿದೆ.

ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆಯಲ್ಲಿರುವ ದುರ್ಗಾಪರಮೇಶ್ವರಿ ಮತ್ತು ನವ ಗುಳಿಗ ಕ್ಷೇತ್ರದಲ್ಲಿ ಒಂಬತ್ತು ಗುಳಿಗ ದೈವಗಳು ನೆಲೆ ನಿಂತಿವೆ. ವಾರ್ಷಿಕ ಉತ್ಸವದ ಹಿನ್ನೆಲೆಯಲ್ಲಿ ನವ ಗುಳಿಗ ದೈವಗಳಿಗೆ ಒಂದೇ ದಿನ ಎರಡು ಬಾರಿ (ಒಟ್ಟು 18) ಗಗ್ಗರ ಸೇವೆ ನಡೆದಿದೆ. ಆರಂಭದಲ್ಲಿ ಒಂಬತ್ತು ಗುಳಿಗ ದೈವಗಳಿಗೆ ಗಗ್ಗರದ ಸೇವೆ ನಡೆಯಿತು. ಬಳಿಕ ಹರಕೆಯ ಸೇವೆಯಾಗಿ ಮತ್ತೊಮ್ಮೆ ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆಯಿತು.

ಇದನ್ನೂ ಓದಿ: ದೈವಗಳ ಹರಕೆ ಕೋಲ ನೆರವೇರಿಸಿದ ಯು ಟಿ ಖಾದರ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡನ ಆಕ್ರೋಶ

ಒಟ್ಟು 18 ಬಾರಿ ಗುಳಿಗ ದೈವಗಳ ರೋಷಾವೇಷ ವೀಕ್ಷಣೆಯೊಂದಿಗೆ ದೈವಗಳ ಕೃಪೆಗೆ ಪಾತ್ರರಾದರು. ಸಾಮಾನ್ಯವಾಗಿ ಒಂದು ಗುಳಿಗ ದೈವಕ್ಕೆ ಗಗ್ಗರ ಸೇವೆ ನಡೆಯುತ್ತದೆ. ಆದರೆ ಇಲ್ಲಿ ಏಕಕಾಲದಲ್ಲಿ ಒಂಬತ್ತು ಗುಳಿಗ ದೈವಗಳಿಗೆ ಸೇವೆ ನಡೆಯುವುದು ವಿಶೇಷವಾಗಿದೆ. ದುರ್ಗಾಪರಮೇಶ್ವರಿ ದೇವಿಯ ಮುಂಭಾಗದಲ್ಲಿರುವ ನವ ಗುಳಿಗನ ಸಾನಿಧ್ಯದಲ್ಲಿ ಗಗ್ಗರದ ಸೇವೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Mon, 5 February 24

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು