AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್! ಯುವಕನಿಗೆ ಗಂಭೀರ ಗಾಯ

2020 ರಲ್ಲಿ ಬರ್ಕೆಯಲ್ಲಿ ಇಂದ್ರಜಿತ್ ಎಂಬಾತನ ಕೊಲೆ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರನಾಗಿದ್ದ. ಅಂದು ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ಯತ್ನ ನಡೆದಿದೆ ಅಂತ ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್! ಯುವಕನಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Nov 30, 2021 | 11:30 AM

Share

ಮಂಗಳೂರು: ಕಡಲತಡಿ ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್ ನಡೆದಿದೆ. ಇಷ್ಟು ದಿನ ಸೈಲೆಂಟಾಗಿದ್ದ ಮಂಗಳೂರು ಮತ್ತೆ ಬೆಚ್ಚಿಬಿದ್ದಿದೆ. ಎರಡು ಗುಂಪುಗಳ ನಡುವೆ ತಲ್ವಾರ್ ದಾಳಿ ನಡೆದಿದೆ. ಕಳೆದ ವರ್ಷ ನಡೆದ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ಗ್ಯಾಂಗ್​ವಾರ್ ನಡೆದಿದೆ. ಲಾಂಗು, ಮಚ್ಚು ಸೇರಿದಂತೆ ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿದ್ದರಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಗಳೂರಿನ ಅಳಕೆ ಗ್ಯಾಂಗ್​ಗೆ ಸೇರಿದ ಶ್ರವಣ್ ಎಂಬಾತ ಗ್ಯಾಂಗ್​ವಾರ್​ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.

2020 ರಲ್ಲಿ ಬರ್ಕೆಯಲ್ಲಿ ಇಂದ್ರಜಿತ್ ಎಂಬಾತನ ಕೊಲೆ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರನಾಗಿದ್ದ. ಅಂದು ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ಯತ್ನ ನಡೆದಿದೆ ಅಂತ ಪೊಲೀಸರು ತಿಳಿಸಿದ್ದಾರೆ. ಸುಮಾರು 8 ಮಂದಿಯ ತಂಡವೊಂದು ಈ ದುಷ್ಕೃತ್ಯ ಎಸಗಿದ್ದು, ಗಾಯಾಳು ಪರಿಸ್ಥಿತಿ ಗಂಭೀರವಾಗಿದೆ. ಆತನಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರಂಭದಲ್ಲಿ ಇದೊಂದು ಕೊಲೆ ಯತ್ನ ಎಂದು ಭಾವಿಸಲಾಗಿತ್ತು. ಆದರೆ ಈಗ ಗ್ಯಾಂಗ್​ವಾರ್ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ ಅಂತಾ ನಗರ ಹಿರಿಯ ಪೊಲೀಸ್ ಅಧಿಕಾರಿಗಳು ಟಿವಿ9 ಡಿಜಿಟಲ್​ಗೆ ತಿಳಿಸಿದ್ದಾರೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2020 ರಲ್ಲಿ ನಡೆದಿದ್ದ ಇಂದ್ರಜಿತ್ ಕೊಲೆ ಕೃತ್ಯವನ್ನು ತಲವಾರ್ ಜಗ್ಗ ನೇತೃತ್ವದ ಬೋಳೂರು ಗ್ಯಾಂಗ್ ನಡೆಸಿತ್ತು. ಅದರ ಪ್ರತಿಕಾರಕ್ಕೆ ನಡೆದಿರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಘಟನೆಯ ಹಿಂದೆ ಯಾವುದೇ ಕೋಮು ದ್ವೇಷ ಇರುವುದಿಲ್ಲ. ಬಹುತೇಕ ಎಲ್ಲರೂ ಒಂದೇ ಕೋಮಿನವರು ಅಂತ ತಿಳಿದುಬಂದಿದೆ.

ಇದನ್ನೂ ಓದಿ

ರಾಜ್ಯಸಭಾ ಸಂಸದರ ಅಮಾನತು: 12 ಸಂಸದರು ಕ್ಷಮೆಯಾಚಿಸಿದರೆ, ನಾವು ಪರಿಗಣಿಸಬಹುದು ಎಂದ ಸರ್ಕಾರ

Bank Holidays in December 2021: ಡಿಸೆಂಬರ್​ನಲ್ಲಿ ಬ್ಯಾಂಕ್​ಗಳಿಗೆ ಒಟ್ಟು ಎಷ್ಟು ದಿನ ರಜಾ ಗೊತ್ತೆ?

Published On - 11:29 am, Tue, 30 November 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ