AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್! ಯುವಕನಿಗೆ ಗಂಭೀರ ಗಾಯ

2020 ರಲ್ಲಿ ಬರ್ಕೆಯಲ್ಲಿ ಇಂದ್ರಜಿತ್ ಎಂಬಾತನ ಕೊಲೆ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರನಾಗಿದ್ದ. ಅಂದು ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ಯತ್ನ ನಡೆದಿದೆ ಅಂತ ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್! ಯುವಕನಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 30, 2021 | 11:30 AM

Share

ಮಂಗಳೂರು: ಕಡಲತಡಿ ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್ ನಡೆದಿದೆ. ಇಷ್ಟು ದಿನ ಸೈಲೆಂಟಾಗಿದ್ದ ಮಂಗಳೂರು ಮತ್ತೆ ಬೆಚ್ಚಿಬಿದ್ದಿದೆ. ಎರಡು ಗುಂಪುಗಳ ನಡುವೆ ತಲ್ವಾರ್ ದಾಳಿ ನಡೆದಿದೆ. ಕಳೆದ ವರ್ಷ ನಡೆದ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ಗ್ಯಾಂಗ್​ವಾರ್ ನಡೆದಿದೆ. ಲಾಂಗು, ಮಚ್ಚು ಸೇರಿದಂತೆ ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿದ್ದರಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಗಳೂರಿನ ಅಳಕೆ ಗ್ಯಾಂಗ್​ಗೆ ಸೇರಿದ ಶ್ರವಣ್ ಎಂಬಾತ ಗ್ಯಾಂಗ್​ವಾರ್​ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.

2020 ರಲ್ಲಿ ಬರ್ಕೆಯಲ್ಲಿ ಇಂದ್ರಜಿತ್ ಎಂಬಾತನ ಕೊಲೆ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರನಾಗಿದ್ದ. ಅಂದು ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ಯತ್ನ ನಡೆದಿದೆ ಅಂತ ಪೊಲೀಸರು ತಿಳಿಸಿದ್ದಾರೆ. ಸುಮಾರು 8 ಮಂದಿಯ ತಂಡವೊಂದು ಈ ದುಷ್ಕೃತ್ಯ ಎಸಗಿದ್ದು, ಗಾಯಾಳು ಪರಿಸ್ಥಿತಿ ಗಂಭೀರವಾಗಿದೆ. ಆತನಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರಂಭದಲ್ಲಿ ಇದೊಂದು ಕೊಲೆ ಯತ್ನ ಎಂದು ಭಾವಿಸಲಾಗಿತ್ತು. ಆದರೆ ಈಗ ಗ್ಯಾಂಗ್​ವಾರ್ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ ಅಂತಾ ನಗರ ಹಿರಿಯ ಪೊಲೀಸ್ ಅಧಿಕಾರಿಗಳು ಟಿವಿ9 ಡಿಜಿಟಲ್​ಗೆ ತಿಳಿಸಿದ್ದಾರೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2020 ರಲ್ಲಿ ನಡೆದಿದ್ದ ಇಂದ್ರಜಿತ್ ಕೊಲೆ ಕೃತ್ಯವನ್ನು ತಲವಾರ್ ಜಗ್ಗ ನೇತೃತ್ವದ ಬೋಳೂರು ಗ್ಯಾಂಗ್ ನಡೆಸಿತ್ತು. ಅದರ ಪ್ರತಿಕಾರಕ್ಕೆ ನಡೆದಿರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಘಟನೆಯ ಹಿಂದೆ ಯಾವುದೇ ಕೋಮು ದ್ವೇಷ ಇರುವುದಿಲ್ಲ. ಬಹುತೇಕ ಎಲ್ಲರೂ ಒಂದೇ ಕೋಮಿನವರು ಅಂತ ತಿಳಿದುಬಂದಿದೆ.

ಇದನ್ನೂ ಓದಿ

ರಾಜ್ಯಸಭಾ ಸಂಸದರ ಅಮಾನತು: 12 ಸಂಸದರು ಕ್ಷಮೆಯಾಚಿಸಿದರೆ, ನಾವು ಪರಿಗಣಿಸಬಹುದು ಎಂದ ಸರ್ಕಾರ

Bank Holidays in December 2021: ಡಿಸೆಂಬರ್​ನಲ್ಲಿ ಬ್ಯಾಂಕ್​ಗಳಿಗೆ ಒಟ್ಟು ಎಷ್ಟು ದಿನ ರಜಾ ಗೊತ್ತೆ?

Published On - 11:29 am, Tue, 30 November 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?