AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್! ಯುವಕನಿಗೆ ಗಂಭೀರ ಗಾಯ

2020 ರಲ್ಲಿ ಬರ್ಕೆಯಲ್ಲಿ ಇಂದ್ರಜಿತ್ ಎಂಬಾತನ ಕೊಲೆ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರನಾಗಿದ್ದ. ಅಂದು ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ಯತ್ನ ನಡೆದಿದೆ ಅಂತ ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್! ಯುವಕನಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Nov 30, 2021 | 11:30 AM

Share

ಮಂಗಳೂರು: ಕಡಲತಡಿ ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್ ನಡೆದಿದೆ. ಇಷ್ಟು ದಿನ ಸೈಲೆಂಟಾಗಿದ್ದ ಮಂಗಳೂರು ಮತ್ತೆ ಬೆಚ್ಚಿಬಿದ್ದಿದೆ. ಎರಡು ಗುಂಪುಗಳ ನಡುವೆ ತಲ್ವಾರ್ ದಾಳಿ ನಡೆದಿದೆ. ಕಳೆದ ವರ್ಷ ನಡೆದ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ಗ್ಯಾಂಗ್​ವಾರ್ ನಡೆದಿದೆ. ಲಾಂಗು, ಮಚ್ಚು ಸೇರಿದಂತೆ ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿದ್ದರಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಗಳೂರಿನ ಅಳಕೆ ಗ್ಯಾಂಗ್​ಗೆ ಸೇರಿದ ಶ್ರವಣ್ ಎಂಬಾತ ಗ್ಯಾಂಗ್​ವಾರ್​ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.

2020 ರಲ್ಲಿ ಬರ್ಕೆಯಲ್ಲಿ ಇಂದ್ರಜಿತ್ ಎಂಬಾತನ ಕೊಲೆ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರನಾಗಿದ್ದ. ಅಂದು ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ಯತ್ನ ನಡೆದಿದೆ ಅಂತ ಪೊಲೀಸರು ತಿಳಿಸಿದ್ದಾರೆ. ಸುಮಾರು 8 ಮಂದಿಯ ತಂಡವೊಂದು ಈ ದುಷ್ಕೃತ್ಯ ಎಸಗಿದ್ದು, ಗಾಯಾಳು ಪರಿಸ್ಥಿತಿ ಗಂಭೀರವಾಗಿದೆ. ಆತನಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರಂಭದಲ್ಲಿ ಇದೊಂದು ಕೊಲೆ ಯತ್ನ ಎಂದು ಭಾವಿಸಲಾಗಿತ್ತು. ಆದರೆ ಈಗ ಗ್ಯಾಂಗ್​ವಾರ್ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ ಅಂತಾ ನಗರ ಹಿರಿಯ ಪೊಲೀಸ್ ಅಧಿಕಾರಿಗಳು ಟಿವಿ9 ಡಿಜಿಟಲ್​ಗೆ ತಿಳಿಸಿದ್ದಾರೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2020 ರಲ್ಲಿ ನಡೆದಿದ್ದ ಇಂದ್ರಜಿತ್ ಕೊಲೆ ಕೃತ್ಯವನ್ನು ತಲವಾರ್ ಜಗ್ಗ ನೇತೃತ್ವದ ಬೋಳೂರು ಗ್ಯಾಂಗ್ ನಡೆಸಿತ್ತು. ಅದರ ಪ್ರತಿಕಾರಕ್ಕೆ ನಡೆದಿರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಘಟನೆಯ ಹಿಂದೆ ಯಾವುದೇ ಕೋಮು ದ್ವೇಷ ಇರುವುದಿಲ್ಲ. ಬಹುತೇಕ ಎಲ್ಲರೂ ಒಂದೇ ಕೋಮಿನವರು ಅಂತ ತಿಳಿದುಬಂದಿದೆ.

ಇದನ್ನೂ ಓದಿ

ರಾಜ್ಯಸಭಾ ಸಂಸದರ ಅಮಾನತು: 12 ಸಂಸದರು ಕ್ಷಮೆಯಾಚಿಸಿದರೆ, ನಾವು ಪರಿಗಣಿಸಬಹುದು ಎಂದ ಸರ್ಕಾರ

Bank Holidays in December 2021: ಡಿಸೆಂಬರ್​ನಲ್ಲಿ ಬ್ಯಾಂಕ್​ಗಳಿಗೆ ಒಟ್ಟು ಎಷ್ಟು ದಿನ ರಜಾ ಗೊತ್ತೆ?

Published On - 11:29 am, Tue, 30 November 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!