AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆರೋಸಾ ಶಾಲೆಯಲ್ಲಿ ಹಿಂದೂ ಅವಹೇಳನ ಪ್ರಕರಣ; ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ FIR

ಮಂಗಳೂರಿನ ಜೆರೋಸಾ ಶಾಲೆಯ ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಒಟ್ಟು 5 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಜೆರೋಸಾ ಶಾಲೆಯಲ್ಲಿ ಹಿಂದೂ ಅವಹೇಳನ ಪ್ರಕರಣ; ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ FIR
ಶಾಸಕ ಭರತ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು

Updated on:Feb 15, 2024 | 6:59 AM

ಮಂಗಳೂರು, ಫೆ.15: ಮಂಗಳೂರಿನ ಜೆರೋಸಾ ಶಾಲೆಯಲ್ಲಿ (Gerosa School) ಹಿಂದೂ ಅವಹೇಳನ ಪ್ರಕರಣ ಸಂಬಂಧ ಬಿಜೆಪಿಯ ಇಬ್ಬರು ಶಾಸಕರ (BJP MLA) ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ FIR ದಾಖಲಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Vedavyasa Kamath) ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ (Bharath Shetty) ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಅಲ್ಲದೆ ಅನಿಲ್ ಜೆರಾಲ್ಡ್ ಲೋಬೋ ಎಂಬುವವರ ದೂರಿನ ಮೇರೆಗೆ VHP ಮುಖಂಡ ಶರಣ್ ಪಂಪ್​ವೆಲ್, ಪಾಲಿಕೆ ಸದಸ್ಯ ಸಂದೀಪ್ ಗರೋಡಿ, ಭರತ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 153A, 295A, 505(2), 506, 149ರಡಿ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ A1 ಬಿಜೆಪಿ ಶಾಸಕ ವೇದವ್ಯಾಸ ಕಾಮತ್, A2 ಬಿಜೆಪಿ ಶಾಸಕ ಭರತ್ ಶೆಟ್ಟಿ, A3 ಶರಣ್ ಪಂಪ್​ವೆಲ್, A4 ಸಂದೀಪ್ ಗರೋಡಿ, A5 ಭರತ್ ಕುಮಾರ್ ಎಂದು ಹೆಸರು ಉಲ್ಲೇಖಿಸಲಾಗಿದೆ. ಆರೋಪಿಗಳು ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರೆಂದು FIRನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಶಾಲೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.

ಶಾಲೆ ಆಡಳಿತ ಮಂಡಳಿ ನಿಯಮ ಉಲ್ಲಂಘಿಸುವಂತೆ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡಿದ್ದಾರೆ. ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದ್ದು. ದಕ್ಷಿಣ ಕನ್ನಡ ಜಿಲ್ಲೆ ಶಾಂತಿ, ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ್ದರು ಎಂದು ಪಾಂಡೇಶ್ವರ ಠಾಣೆ ಪೊಲೀಸರು ದಾಖಲಿಸಿರುವ ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಿಂದ ಧರ್ಮದ ಅವಹೇಳನ ಆರೋಪ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ವಿರುದ್ದ ಮಾಜಿ ಎಂ.ಎಲ್.ಸಿ ಐವನ್ ಡಿಸೋಜಾ ಕಿಡಿಕಾರಿಕಾರಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ ಜೊತೆ ಸೇರಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಶಾಸಕರು ಶಾಲೆಯ ಒಳಗೆ ಹೋಗಿ ವಿಚಾರಿಸಬಹುದಿತ್ತು. ಅದು ಬಿಟ್ಟು ಗೇಟು ಮುಂದೆ ನಿಂತು ಬೊಬ್ಬೆ ಹೊಡೆದ್ರೆ ಅವರ ಜವಬ್ದಾರಿ ಏನು. ಬೀದಿಯಲ್ಲಿ ನಿಂತು ಬಂದವರ ಬಳಿ ಬೊಬ್ಬೆ ಹಾಕಿಸಿ, ಗಲಾಟೆ ಮಾಡಿ ವಿದ್ಯಾದೇಗುಲಕ್ಕೆ ಅವಮಾನ ಮಾಡಿದ್ದಾರೆ. ಇದನ್ನ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು. ಚುನಾಹಿತ ಪ್ರತಿನಿಧಿಯ ಗೌರವವನ್ನು ವೇದವ್ಯಾಸ್ ಕಾಮತ್ ಹಾಳು ಮಾಡಿದ್ದಾರೆ. ಈ ಬಗ್ಗೆ ಸ್ಪೀಕರ್, ಮುಖ್ಯಮಂತ್ರಿಗಳಿಗೆ ದೂರು ನೀಡುತ್ತೇನೆ ಎಂದರು. ಎಲ್ಲಾ ದಾಖಲೆಗಳನ್ನು ಇಟ್ಟು ದೂರು ನೀಡುತಿದ್ದು ಹಕ್ಕುಬಾಧ್ಯತ ಸಮಿತಿ ಈ ಬಗ್ಗೆ ತನಿಖೆ ಮಾಡಲಿ. ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿ. ಶಾಸಕರ ವಿರುದ್ದ ಕ್ರಮ ಕೈಗೊಳಲಿ ಎಂದವರು ಒತ್ತಾಯಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:56 am, Thu, 15 February 24

ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ