AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಟ್ವಾಳದ ದೇವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣ ದರೋಡೆ

ದಕ್ಷಿಣ ಕನ್ನಡ ಜಿಲ್ಲೆಯ ಪುದು ಗ್ರಾಮದಲ್ಲಿನ ದೇವಸ್ಥಾನವೊಂದರಲ್ಲಿ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣವನ್ನು ಕಳ್ಳರು ಕದ್ದಿದ್ದಾರೆ. ಮೂವರು ಕಳ್ಳರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರ ಬಗ್ಗೆ ನಾಯಿ ಸುಳಿವು ಕೊಟ್ಟಿದೆ. ಅವರ ಕೈಯಲ್ಲಿ ಮಾರಕಾಸ್ತ್ರಗಳನ್ನು ನೋಡಿ ಅರ್ಚಕರು ಆತಂಕಗೊಂಡಿದ್ದಾರೆ.

ಬಂಟ್ವಾಳದ ದೇವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣ ದರೋಡೆ
ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Nov 05, 2024 | 9:04 PM

Share

ಮಂಗಳೂರು: ದಕ್ಷಿಣ ಕನ್ನಡದ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿ‌ ಈ ಘಟನೆ ನಡೆದಿದೆ. ಪುದುವಿನ ಶ್ರೀ ದೇವಕಿ ಕೃಷ್ಣ ರವಳನಾಥ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ಪ್ರಕರಣ ನಡೆದಿದೆ. ದೇವಸ್ಥಾನದ ಬಾಗಿಲು ಮುರಿದು ದೇವರ ಗರ್ಭಗುಡಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ.

ದೇವಸ್ಥಾನದ ಹಿಂಬಾಗಿಲು ಮುರಿದು ಒಳನುಗ್ಗಿದ್ದ ಮೂವರು ಆಗಂತುಕರು ಈ ದರೋಡೆಯನ್ನು ಮಾಡಿದ್ದಾರೆ. ಗರ್ಭಗುಡಿಯೊಳಗೆ ನುಗ್ಗಿ ದೇವರ ಬೆಳ್ಳಿಯ ಪೀಠ ಹಾಗೂ ಬಂಗಾರದ ವಸ್ತುಗಳನ್ನು ತೆಗೆದು ಹೊರತಂದು ಗೋಣಿಯಲ್ಲಿ ತುಂಬಿದ ಆಗಂತುಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೋಣಿ ಹೆಗಲಿಗೇರಿಸಿ ಹೋಗುತ್ತಿರವ ಆಗಂತುಕರ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೇವಾಲಯದೊಳಗೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಸುತ್ತಾಡಿದ ಆಗಂತುಕರನ್ನು ವಿಡಿಯೋದಲ್ಲಿ ನೋಡಬಹುದು. ಘಟನೆ ನಡೆದಿ ಸ್ಥಳಕ್ಕೆ ಆಗಮಿಸಿ ಬಂಟ್ವಾಳ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರ್ ಎಂಬಲ್ಲಿ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನದ ಬಾಗಿಲು ಮುರಿದು ದೇವರ ಗರ್ಭಗುಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳರು ದರೋಡೆ ಮಾಡಿದ್ದಾರೆ. ನೂರಾರು ವರ್ಷ ಹಳೆಯದಾದ ಸುಮಾರು ಒಂದೂವರೆ ಕೇಜಿ ತೂಕದ ದೇವರ ಬೆಳ್ಳಿಯ ಪೀಠ, ಚಿನ್ನದ ಮೂಗುತಿ, ದೇವರಿಗೆ ಸಂಬಂಧಿಸಿದ ಕೊಡ, 2 ಕೆಜಿ ತೂಕದ ಬೆಳ್ಳಿಯ ಆಭರಣಗಳು ಹಾಗೂ 3 ಪವನ್ ತೂಕದ ಚಿನ್ನದ ಆಭರಣ ಕಳ್ಳತನವಾಗಿದೆ.

ಇದನ್ನೂ ಓದಿ: ಹಾಸನಾಂಬೆ ದೇವಸ್ಥಾನದಲ್ಲಿ ಡಿಸಿ ಮತ್ತು ಎಂಎಲ್​ಎ ಮಧ್ಯೆ ವಾಗ್ವಾದ

ಅಕ್ಟೋಬರ್ 4ರ ಸೋಮವಾರ ಈ ಘಟನೆ ನಡೆದಿದೆ. ಮೂವರು ಆಗಂತುಕರು ದೇವಸ್ಥಾನದ ಹಿಂಬಾಗಿಲನ್ನು ಮುರಿದು ಒಳಗೆ ನುಗ್ಗಿದ್ದಾರೆ. ದೇವಸ್ಥಾನದೊಳಗೆ ಸುತ್ತಾಡಿ ಗರ್ಭಗುಡಿಯೊಳಗೆ ನುಗ್ಗಿ ದೇವರ ಬೆಳ್ಳಿಯ ಪೀಠ ಹಾಗೂ ಚಿನ್ನದ ವಸ್ತುಗಳನ್ನು ಗೋಣಿಯಲ್ಲಿ ತುಂಬಿಸಿದ್ದಾರೆ. ಕಳ್ಳರು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ದೇವಸ್ಥಾನದ ಅರ್ಚಕರ ಮನೆಯ ಸಾಕುನಾಯಿ ಜೋರಾಗಿ ಬೊಗಳಲಾರಂಭಿಸಿದೆ. ಅದನ್ನು ನೋಡಿದ ಅರ್ಚಕರು ಹೊರಬಂದು ನೋಡಿದಾಗ ಮುಸುಕುಧಾರಿಗಳು ಕಂಡಿದ್ದಾರೆ. ಆದರೆ, ಅವರಿಗೆ ದರೋಡೆಯನ್ನು ತಡೆಯಲು ಸಾಧ್ಯವಾಗಿಲ್ಲ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?