AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ: 6 ಲಕ್ಷ ರೂ. ಮೌಲ್ಯದ ಚಿನ್ನ ವಶ

Gold smuggling: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಣೆ ಪ್ರಕರಣ ಮತ್ತೆ ವರದಿಯಾಗಿದೆ. ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಭಟ್ಕಳದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು ಚಿನ್ನ ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ: 6 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Follow us
Ganapathi Sharma
|

Updated on: Mar 20, 2024 | 3:33 PM

ಮಂಗಳೂರು, ಮಾರ್ಚ್ 20: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mangaluru international airport) ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು (Gold smuggling) ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ (Bhatkal) ಮೂಲದ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು 6,19,200 ರೂಪಾಯಿ ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು. ಇದನ್ನು ಕಳ್ಳಸಾಗಣೆ ಮಾಡುವುದಕ್ಕಾಗಿ ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿ ಇಡಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಂಜಾ ಮಾರಾಟ: ಇಬ್ಬರ ಬಂಧನ

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಿಎಸ್‌ಐ ಪ್ರತಿಭಾ ಅವರಿಗೆ ಮಾರ್ಚ್ 17ರಂದು ಸಿಕ್ಕ ಮಾಹಿತಿ ಮೇರೆಗೆ ಬೀಜೈ ಮೂಲದ ಕಿಶನ್ (30), ಮಲ್ಲಿಕಟ್ಟೆಯ ಹಿತೇಶ್ (29) ಎಂಬುವರನ್ನು ಬಂಧಿಸಲಾಗಿತ್ತು. ಗುಪ್ತಚರ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಶಂಕಿತ ಆರೋಪಿಗಳು ಪಂಪ್‌ವೆಲ್‌ನಿಂದ ನಂತೂರು ಮಾರ್ಗವಾಗಿ ಸ್ಕೂಟರ್‌ನಲ್ಲಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದಾಗ ಅಡ್ಡಗಟ್ಟಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಅಧಿಕಾರಿಗಳು ಶಂಕಿತರನ್ನು ವಶಕ್ಕೆ ಪಡೆದು ಸುಮಾರು 155 ಗ್ರಾಂ ತೂಕದ ಸುಮಾರು 10,000 ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಜತೆಗೆ ಅಕ್ರಮಕ್ಕೆ ಬಳಸಿದ್ದ ಸ್ಕೂಟರ್ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಮಂಗಳೂರು ಪೊಲೀಸರಿಂದ 19 ರೌಡಿ ಶೀಟರ್‌ಗಳ ಗಡಿಪಾರು

ಈ ಕಾರ್ಯಾಚರಣೆಯನ್ನು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಉಪ ಪೊಲೀಸ್ ಆಯುಕ್ತರಾದ ಸಿದ್ಧಾರ್ಥ ಗೋಯಲ್ ಮತ್ತು ಬಿಪಿ ದಿನೇಶ್ ಕುಮಾರ್ ಮತ್ತು ಎಸಿಪಿ ಪ್ರತಾಪ್ಸಿಂಗ್ ತೋರಟ್ ನೇತೃತ್ವದಲ್ಲಿ ನಡೆಸಲಾಗಿದೆ. ತಂಡದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸೋಮಶೇಖರ್ ಜೆಸಿ, ಪಿಎಸ್ ಐ ಪ್ರತಿಭಾ, ಸಿಐಡಿ ಸಿಬ್ಬಂದಿ ಇದ್ದರು.

ಮಂಗಳೂರಿನಲ್ಲಿ ಇತ್ತೀಚೆಗೆ ಗಾಂಜಾ ಹಾಗೂ ಇತರ ಡ್ರಗ್ಸ್ ಮಾರಾಟ ಜಾಲ ಹೆಚ್ಚಾಗಿದೆ. ಇದರ ವಿರುದ್ಧ ನಿರಂತರ ನಗರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದಾಗ್ಯೂ ಹಲವೆಡೆ ಗಾಂಜಾ, ಕೊಕೇನ್ ಮಾರಾಟ ವರದಿಯಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ