AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಿಗಳ ಕಾಟ! ಮಂಗಳೂರು ಏರ್‌ಪೋರ್ಟ್‌ಗೆ ಬರ್ತಿದೆ ಕೋಟ್ಯಂತರ ಮೌಲ್ಯದ ಚಿನ್ನ, ಸಾಥ್​ ನೀಡ್ತಿದಾರೆ ಕೇರಳ ಯುವಕರು! ಏನಿದರ ಒಳಸುಳಿ?

Gold smuggling: ಜ್ಯುವೆಲ್ಲರಿಗಳ ಮಾಫಿಯಾದ ಪ್ರಭಾವಕ್ಕೆ ಒಳಗಾಗಿ ಕೇರಳದ ಕಾಸರಗೋಡು ಭಾಗದ ಯುವಕರು ಚಿನ್ನ ತರೋದಕ್ಕೆಂದೇ ವಿದೇಶಕ್ಕೆ ಹೋಗ್ತಿದ್ದಾರಾ? ಎಂಬ ಅನುಮಾನ ಮೂಡಿದೆ.

ಮಲಯಾಳಿಗಳ ಕಾಟ! ಮಂಗಳೂರು ಏರ್‌ಪೋರ್ಟ್‌ಗೆ ಬರ್ತಿದೆ ಕೋಟ್ಯಂತರ ಮೌಲ್ಯದ ಚಿನ್ನ, ಸಾಥ್​ ನೀಡ್ತಿದಾರೆ ಕೇರಳ ಯುವಕರು! ಏನಿದರ ಒಳಸುಳಿ?
ಮಲೆಯಾಳಿಗಳ ಕಾಟ! ಮಂಗಳೂರು ಏರ್‌ಪೋರ್ಟ್‌ಗೆ ಬರ್ತಿದೆ ಕೋಟ್ಯಂತರ ಮೌಲ್ಯದ ಚಿನ್ನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 24, 2023 | 12:54 PM

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Mangaluru Airport) ಇತ್ತೀಚೆಗೆ ಹೆಚ್ಚು ಹೆಚ್ಚು ಅಕ್ರಮ ಚಿನ್ನ ಸಾಗಾಟಕ್ಕೆ ಸಾಕ್ಷಿಯಾಗ್ತಿದೆ. ತಿಂಗಳಿಗೆ ನಾಲ್ಕೈದು ಅಕ್ರಮ ಚಿನ್ನ ಸಾಗಾಟದ ಕೇಸ್‌ಗಳು ಪತ್ತೆಯಾಗ್ತಿದ್ದು, ದುಬೈನಿಂದ ಭಾರೀ ಪ್ರಮಾಣದಲ್ಲಿ ಚಿನ್ನವನ್ನ ತರಲಾಗುತ್ತಿದೆ. ಈ ಚಿನ್ನ ಸಾಗಾಟದ ಹಿಂದೆ (Gold smuggling) ಜ್ಯುವೆಲ್ ಮಾಫಿಯಾ ಕೈವಾಡದ ಅನುಮಾನ ಮೂಡಿದೆ. ಹೌದು.. ಅದು ಮಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್. ಪ್ರತಿ ನಿತ್ಯ ಹತ್ತಾರು ವಿದೇಶಿ ವಿಮಾನಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತವೆ. ಕರ್ನಾಟಕದ ಕರಾವಳಿ, ಮಲೆನಾಡು ಭಾಗದ ಪ್ರಯಾಣಿಕರಿಗಿಂತಲೂ ಹೆಚ್ಚಾಗಿ ಕೇರಳ ಭಾಗದ ಕಾಸರಗೋಡು, ಕೊಚ್ಚಿ ಭಾಗದ ಪ್ರಯಾಣಿಕರೇ ಹೆಚ್ಚಾಗಿ ಮಂಗಳೂರಿನಲ್ಲಿ ಇಳಿಯುತ್ತಿದ್ದಾರೆ. ಅದರಲ್ಲೂ ದುಬೈನಿಂದ ನಿತ್ಯ ನೂರಾರು ಕೇರಳ ಪ್ರಯಾಣಿಕರು (Malayalis) ಬರ್ತಾ ಇದ್ದು, ಮಂಗಳೂರು ಏರ್‌ಪೋರ್ಟ್ ಇವರಿಗೆ ಪ್ರಮುಖ ಕೇಂದ್ರ.

ಆದ್ರೆ ಹೀಗೆ ದುಬೈನಿಂದ ಬರೋ ಪ್ರಯಾಣಿಕರ ತಪಾಸಣೆಯ ವೇಳೆ ಹಲವು ಪ್ರಯಾಣಿಕರ ಬಳಿ ಅಕ್ರಮ ಚಿನ್ನ ಪತ್ತೆಯಾಗಿದೆ. ಕೇವಲ ಅಕ್ಟೋಬರ್‌ನಿಂದ ಈ ಜನವರಿವರೆಗೆ ಹತ್ತಕ್ಕೂ ಹೆಚ್ಚು ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗಳು ಮಂಗಳೂರು ಏರ್‌ಪೋರ್ಟ್ ನಲ್ಲಿ ಪತ್ತೆಯಾಗಿವೆ. ಇದರ ಹಿಂದೆ ಜ್ಯುವೆಲ್ಲರಿ ಮಾಫಿಯಾ ಕೈವಾಡದ ಅನುಮಾನವಿದೆ ಎಂದು ಧರ್ಮೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ, ಅಖಿಲಾ ಭಾರತ ಹಿಂದೂ ಮಹಾಸಭಾ ಅವರು ಹೇಳಿದ್ದಾರೆ.

ಏರ್‌ಪೋರ್ಟ್‌ನ ಕಸ್ಟಮ್ ಅಧಿಕಾರಿಗಳ ತಪಾಸಣೆ ವೇಳೆ ನಾನಾ ವಿಧದಲ್ಲಿ ಚಿನ್ನ ಸಾಗಿಸೋದು ಬೆಳಕಿಗೆ ಬಂದಿದೆ. ಕೆಲವರು ಚಿನ್ನವನ್ನು ಪೇಸ್ಟ್, ಪೌಡರ್ ರೂಪದಲ್ಲಿ ತಂದರೆ, ಇನ್ನು ಕೆಲವರು ಗುದದ್ವಾರ, ಕುಕ್ಕರ್, ಎಲ್.ಇ.ಡಿ ಬಲ್ಬ್, ವಾಚ್, ಕೀಪ್ಯಾಡ್ ಮೊಬೈಲ್ ಫೋನ್, ಅಂಡರ್‌ವೇರ್, ಸಾಕ್ಸ್‌ನ ಒಳಗೆ ಸೇರಿ ಹತ್ತಾರು ವಿಧದಲ್ಲಿ ಚಿನ್ನವನ್ನ ಸಾಗಾಟ ಮಾಡಿರೋದು ಬೆಳಕಿಗೆ ಬಂದಿದೆ.

ಆದ್ರೆ ಹೀಗೆ ಅಕ್ರಮ ಚಿನ್ನ ಸಾಗಾಟದಲ್ಲಿ ಕೇರಳದ ಕಾಸರಗೋಡು ಭಾಗದ ಪ್ರಯಾಣಿಕರೇ ಅರೆಸ್ಟ್ ಆಗ್ತಿದ್ದು, ಲಕ್ಷದಿಂದ ಕೋಟಿ ಮೌಲ್ಯದ ಚಿನ್ನವನ್ನು ಸಾಗಿಸಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಹೀಗೆ ಕಳೆದ ಮೂರೂವರೆ ತಿಂಗಳ ಅವಧಿಯಲ್ಲಿ ಬರೋಬ್ಬರಿ 9 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಕ್ರಮ ಚಿನ್ನ ಮಂಗಳೂರು ಏರ್‌ಪೋರ್ಟ್‌‌ನಲ್ಲಿ ಪತ್ತೆಯಾಗಿದೆ. ಅದರಲ್ಲೂ ಜನವರಿ ತಿಂಗಳ ಕೇವಲ 18 ದಿನದಲ್ಲಿ 2 ಕೋಟಿ ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶವಾಗಿದೆ.

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿತರಾದ ಬಹುತೇಕರು ವರ್ಷಗಳ ಹಿಂದಷ್ಟೇ ದುಬೈಗೆ ಹೋಗಿ ವಾಪಸ್ ಬಂದಿರೋದು ಗೊತ್ತಾಗಿದೆ. ಹೀಗಾಗಿ ಜ್ಯುವೆಲ್ಲರಿಗಳ ಮಾಫಿಯಾದ ಪ್ರಭಾವಕ್ಕೆ ಒಳಗಾಗಿ ಯುವಕರು ಚಿನ್ನ ತರೋದಕ್ಕೆಂದೇ ವಿದೇಶಕ್ಕೆ ಹೋಗ್ತಿದ್ದಾರಾ? ಎಂಬ ಅನುಮಾನ ಮೂಡಿದೆ.

ವರದಿ: ಅಶೋಕ್, ಟಿವಿ 9, ಮಂಗಳೂರು

Published On - 12:09 pm, Tue, 24 January 23

ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ