AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಹರೀಶ್ ಪೂಂಜಾ ಕಾರ್ ಅಡ್ಡಕಟ್ಟಿ ಬೆದರಿಕೆ: ಸಿಐಡಿಗೆ ತನಿಖೆ ಹೊಣೆ ವಹಿಸಿ ಆದೇಶ

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಶಾಸಕ ಹರೀಶ್ ಪೂಂಜಾ ಕಾರ್ ಅಡ್ಡಕಟ್ಟಿ ಬೆದರಿಕೆ: ಸಿಐಡಿಗೆ ತನಿಖೆ ಹೊಣೆ ವಹಿಸಿ ಆದೇಶ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 18, 2022 | 11:55 AM

Share

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರ್ ಅಡ್ಡಗಟ್ಟಿ ಜೀವ ಬೆದರಿಕೆ ಹಾಕಿದ ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಜಿಲ್ಲೆಯ ಫರಂಗಿಪೇಟೆ ಬಳಿ ಕಾರು ಅಡ್ಡಗಟ್ಟಿ ಶಾಸಕರಿಗೆ ಬೆದರಿಕೆ ಹಾಕಿದ್ದ ಬಗ್ಗೆ ಶಾಸಕರ ಕಾರು ಚಾಲಕ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಆರೋಪಿ ರಿಯಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಇದು ಕೊಲೆ ಯತ್ನ ಪ್ರಕರಣವಲ್ಲ. ಕಾರು ಹಿಂದಿಕ್ಕುವಾಗ ಈ ಘಟನೆ ನಡೆದಿದೆ ಎಂದು ಎಸ್​ಪಿ ಸ್ಪಷ್ಟನೆ ನೀಡಿದ್ದರು. ಇದೀಗ ರಾಜ್ಯ ಸರ್ಕಾರವು ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ತನಿಖಾಧಿಕಾರಿ ಕಚೇರಿಯಲ್ಲಿರುವ ದಾಖಲೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೇ ಸಿಐಡಿ ಕಚೇರಿಗೆ ಹಸ್ತಾಂತರಿಸಬೇಕು ಎಂದು ಡಿಜಿಪಿ ಪರವಾಗಿ ಆದೇಶ ಹೊರಡಿಸಿರುವ ಆರ್.ಹಿತೇಂದ್ರ ಆದೇಶದಲ್ಲಿ ಹೇಳಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಕಳೆದ ಅ 13ರ ರಾತ್ರಿ ವಿಮಾನದಲ್ಲಿ ಬಂದಿದ್ದ ಶಾಸಕರು ರಾತ್ರಿ 11.15 ಸಮಯದಲ್ಲಿ ಮನೆಗೆ ತೆರಳುವ ವೇಳೆ ಆರೋಪಿಗಳು ಫರಂಗಿಪೇಟೆ ಬಳಿ ಕಾರು ಅಡ್ಡಗಟ್ಟಿದ್ದರು. ಮಾರಕಾಸ್ತ್ರ ಝಳಪಿಸಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯ ನಂತರ ಬಿಳಿ ಬಣ್ಣದ ಸ್ಕಾರ್ಪಿಯೊ ಕಾರ್ ಒಂದು ಮಂಗಳೂರಿನಿಂದ ಫರಂಗಿಪೇಟೆವರೆಗೆ ಶಾಸಕರ ಕಾರನ್ನು ಹಿಂಬಾಲಿಸಿಕೊಂಡು ಬಂದಿತ್ತು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್