AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಬೆಲೆಯಲ್ಲಿ ಕುಚಲಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ನಿರ್ಧಾರ

ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಲ್​​ ಕುಚಲಕ್ಕಿ ಅವಶ್ಯಕತೆ ಇದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬೆಂಬಲ ಬೆಲೆಯಲ್ಲಿ ಕುಚಲಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ನಿರ್ಧಾರ
ಸಚಿವ ಕೋಟ ಶ್ರೀನಿವಾಸ ಪೂಜಾರಿ
TV9 Web
| Edited By: |

Updated on:Nov 10, 2022 | 2:35 PM

Share

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿತರಿಸಲೆಂದು ಕುಚಲಕ್ಕಿ ಖರೀದಿಸಲು ಕರ್ನಾಟಕ ನಿರ್ಧರಿಸಿದೆ. ಇದಕ್ಕಾಗಿ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಡಿ 1ರಿಂದ ಕುಚಲಕ್ಕಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್​ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು. ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಲ್​​ ಕುಚಲಕ್ಕಿ ಅವಶ್ಯಕತೆ ಇದೆ ಎಂದು ಅವರು ತಿಳಿಸಿದರು.

ಪ್ರತಿ ಕ್ವಿಂಟಲ್​ ಕುಚಲಕ್ಕಿಗೆ ₹ 2,540 ನೀಡಲಾಗುವುದು. ಪಡಿತರದಲ್ಲಿ ಕುಚಲಕ್ಕಿ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ಈ ಮೂರೂ ಜಿಲ್ಲೆಗಳಿಗೆ ಅಕ್ಕಿ ವಿತರಿಸಲು ತಿಂಗಳಿಗೆ 1 ಲಕ್ಷ ಕ್ವಿಂಟಲ್ ಅಕ್ಕಿ ಬೇಕಿದೆ. ಇದಕ್ಕಾಗಿ 18 ಲಕ್ಷ ಕ್ವಿಂಟಲ್ ಭತ್ತ ಸಂಸ್ಕರಿಸಬೇಕಾಗಿದೆ. ಇದನ್ನು ಬೇರೆಡೆಯಿಂದ ಕೊಳ್ಳುವ ಬದಲು ಕರಾವಳಿ ಜಿಲ್ಲೆಗಳಲ್ಲಿಯೇ ಖರೀದಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಕರಾವಳಿಗರ ಬೇಡಿಕೆ ಈಡೇರಿಕೆ: ಬೊಮ್ಮಾಯಿ

ಕರಾವಳಿ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಹೊಂದಿರುವವರಿಗೆ ಕುಚಲಕ್ಕಿ ವಿತರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಸಮೀಪದ ಕಾಪುವಿನಲ್ಲಿ ಇತ್ತೀಚೆಗೆ ನಡೆದ ಜನಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪಡಿತರದಲ್ಲಿ ಕುಚಲಕ್ಕಿ ಕೊಡಬೇಕು ಎಂಬ ಕರಾವಳಿಗರ ಬಹುದಿನಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸುತ್ತಿದೆ ಎಂದು ಘೋಷಿಸಿದರು.

ಬೆಂಗಳೂರಿನಲ್ಲಿ ಈ ಸಂಬಂಧ ಶೀಘ್ರವೇ ಸಭೆಯೊಂದನ್ನು ನಡೆಸಲಾಗುವುದು. ಮುಂದಿನವಾರ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದರು.

Published On - 2:35 pm, Thu, 10 November 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್