AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ನೋಂದಣಿ ವೇಳೆ ‘ಥಂಬ್’ ನೀಡುವಾಗ ಎಚ್ಚರ: ಸರ್ಕಾರಿ ಕಚೇರಿಯಲ್ಲೇ ನಿಮ್ಮ ಬ್ಯಾಂಕ್​​​​ ಖಾತೆಗೆ ಬೀಳಬಹುದು ಕನ್ನ!

ಜನರ ಬ್ಯಾಂಕ್​​ ಖಾತೆಗೆ ಕನ್ನ ಹಾಕಲು ಖದೀಮರು ನಾನಾ ತಂತ್ರ ಉಪಯೋಗಿಸೋದು ಕೇಳಿರುತ್ತೀರಿ. ಆದ್ರೆ, ಆಸ್ತಿ ನೋಂದಣಿ ಮಾಡಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬರುವ ಜನರ ಖಾತೆಗೇ ಕನ್ನ ಹಾಕಲಾಗುತ್ತಿದೆ. ಹೌದು ಅಚ್ಚರಿ ಅನ್ನಿಸಿದರೂ ಸತ್ಯ. ಬಯೋಮೆಟ್ರಿಕ್ ಥಂಬ್​ ನೀಡಿದರೆ ಸಾಕು ನಿಮ್ಮ ಬ್ಯಾಂಕ್​​ ಖಾತೆಯಲ್ಲಿರುವ ಹಣ ಡಮಾರ್ ಆಗುತ್ತೆ. ಅದೂ ಸರ್ಕಾರಿ ಕಚೇರಿಯಲ್ಲೇ ಈ ರೀತಿ ನಡೆಯುತ್ತಿದ್ದು, ಜನ ಸಾವಿರಾರು ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಅದ್ಯಾಗೆ ಅಂತೀರಾ? ಈ ಸ್ಟೋರಿ ನೋಡಿ..

ಆಸ್ತಿ ನೋಂದಣಿ ವೇಳೆ ‘ಥಂಬ್’ ನೀಡುವಾಗ ಎಚ್ಚರ: ಸರ್ಕಾರಿ ಕಚೇರಿಯಲ್ಲೇ ನಿಮ್ಮ ಬ್ಯಾಂಕ್​​​​ ಖಾತೆಗೆ ಬೀಳಬಹುದು ಕನ್ನ!
ಸಾಂದರ್ಭಿಕ ರಜೆ
ಅಶೋಕ್​ ಪೂಜಾರಿ, ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on: Sep 24, 2023 | 11:31 AM

Share

ಮಂಗಳೂರು, (ಸೆಪ್ಟೆಂಬರ್ 24): ಹಲವು ಕಾರಣ ಹೇಳಿ ಫೋನ್​ ಮಾಡಿ ಒಟಿಪಿ ಪಡೆದು, ಹಣ ಲಪಟಾಯಿಸುವುದನ್ನು ನೋಡಿರುತ್ತೀರಾ.. ಆದ್ರೆ, ಇಲ್ಲಿ ಫೋನ್ ಬರುವುದಿಲ್ಲ. ಒಟಿಪಿನೂ ಕೊಡಂಗಿಲ್ಲ. ಬಯೋಮೆಟ್ರಿಕ್ ಥಂಬ್​ ನೀಡಿದರೆ ಸಾಕು ನಿಮ್ಮ ಬ್ಯಾಂಕ್​​ ಖಾತೆಯಲ್ಲಿರುವ ಹಣ ಡಮಾರ್ ಆಗುತ್ತೆ. ಅದೂ ಸರ್ಕಾರಿ ಕಚೇರಿಯಲ್ಲೇ ಈ ರೀತಿ ನಡೆಯುತ್ತಿದ್ದು, ಜನ ಸಾವಿರಾರು ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಹೌದು..ಮಂಗಳೂರಿನ(Manlauru) ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೀಗೆ ಥಂಬ್​ ನೀಡಿದ ಜನರ ಬ್ಯಾಂಕ್​​ ಖಾತೆಯಿಂದ(Bank Account) 10 ರಿಂದ 40 ಸಾವಿರದವರೆಗೂ ಹಣ ವರ್ಗಾವಣೆ ಆಗಿದೆ.

ಅಕ್ಟೋಬರ್ 1 ರಿಂದ ಆಸ್ತಿ ನೊಂದಣಿ ಶುಲ್ಕ ಏರಿಕೆ ಆಗುತ್ತಿದೆ. ಇದರಿಂದ ಜನರು ಮುಗಿಬಿದ್ದು ಆಸ್ತಿ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಖದೀಮರೂ ಕೂಡ ಹಣ ಮಾಡುವುದಕ್ಕೆ ಸರ್ಕಾರಿ ಕಚೇರಿಯನ್ನೇ ಟಾರ್ಗೆಟ್​​ ಮಾಡ್ಕೊಂಡಿದ್ದಾರೆ. ಆಸ್ತಿ ನೋಂದಣಿಗೆ ಆಧಾರ್​ ಪಡೆಯಲು ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ-2 ಸಾಫ್ಟ್​ವೇರ್​ಗೆ ಥಂಬ್ ನೀಡಬೇಕಾಗುತ್ತದೆ. ಹೀಗೇ ಥಂಬ್ ನೀಡಿದ ಬಳಿಕ ಕಂಪ್ಯೂಟರ್​ನಲ್ಲಿ ಆಧಾರ್ ದಾಖಲೆಗಳು ಪಡೆದು ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಂದುವರೆಯುತ್ತದೆ. ಆದ್ರೆ, ಮಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೀಗೆ ಥಂಬ್​ ನೀಡಿದ ಜನರ ಬ್ಯಾಂಕ್​​ ಖಾತೆಯಿಂದ 10 ರಿಂದ 40ಸಾವಿರದವರೆಗೂ ಹಣ ವರ್ಗಾವಣೆ ಆಗಿದೆ. ಈ ಬಗ್ಗೆ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಆದ್ರೆ, ಪೊಲೀಸರು ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದು, ಏನೂ ಸುಳಿವು ಸಿಕ್ಕಿಲ್ಲ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಪೊಲೀಸರ ಹೆಸರಿನಲ್ಲಿ ನಕಲಿ ರೈಡ್ ಮಾಡಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್

ಆಸ್ತಿ ನೋಂದಣಿ ಮಾಡಬೇಕಾದ್ರೆ 2 ಬಾರಿ ಥಂಬ್​ ನೀಡಬೇಕಾಗಿದೆ. ಮೊದಲು ಕಾವೇರಿ-2 ಸಾಫ್ಟವೇರ್​ನಲ್ಲಿ. ನಂತರ ಮುದ್ರಾಂಕ ಶುಲ್ಕ ಕಟ್ಟಲು. ಆದ್ರೆ, ಜನರು ಕಾವೇರಿ-2 ಸಾಫ್ಟವೇರ್​ನಲ್ಲಿ ಥಂಬ್ ನೀಡಿದ ತಕ್ಷಣವೇ ಅವರ ಬ್ಯಾಂಕ್​​​ ಖಾತೆಯಿಂದ ಹಣ ವರ್ಗಾವಣೆ ಆಗುತ್ತಿದೆಯಂತೆ. ನಿತ್ಯ ಹತ್ತಾರು ಜನರು ಹಣ ಕಳೆದುಕೊಳ್ಳುತ್ತಿದ್ರೂ ಸಬ್ ರಿಜಿಸ್ಟ್ರಾರ್ ಅಧಿಕಾರಿಯಿಂದಾಗಲಿ, ಪೊಲೀಸರಿಂದಾಗಲಿ ಪರಿಹಾರ ಸಿಕ್ಕಿಲ್ಲ.

ಕಾವೇರಿ 2 ಸಾಫ್ಟ್​ವೇರ್​ ಸಂಪೂರ್ಣ ಕಂಟ್ರೋಲ್​ ಸರ್ಕಾರದ ಕೈಲೇ ಇದ್ದು, ಬೆಂಗಳೂರಿನಿಂದಲೇ ಎಲ್ಲ ನಿಯಂತ್ರಣ ಮಾಡಲಾಗುತ್ತಿದೆ. ಹೀಗಾಗಿ ಸರ್ಕಾರದ ಸರ್ವರ್​ಗೇ ಖದೀಮರು ಕನ್ನ ಹಾಕಿದ್ದಾರಾ ಅನ್ನೋ ಅನುಮಾನ ಕಾಡಿದ್ದು.. ತಕ್ಷಣ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!