AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿದೆ, ಶಿವರಾಜ ತಂಗಡಗಿ ಹೇಳಿಕೆಯೇ ಉದಾಹರಣೆ: ಹರೀಶ್ ಪೂಂಜಾ

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೀಡಿರುವ ವಿವಾದಾತ್ಮ ಹೇಳಿಕೆ ವಿರುದ್ಧ ಬೆಳ್ತಂಗಡಿ ಶಾಸಕ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಕಾಂಗ್ರೆಸ್ ಪಕ್ಷದ ಹತಾಶೆಯನ್ನು ಬಿಂಬಿಸಿದೆ ಎಂದಿದ್ದಾರೆ.

ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿದೆ, ಶಿವರಾಜ ತಂಗಡಗಿ ಹೇಳಿಕೆಯೇ ಉದಾಹರಣೆ: ಹರೀಶ್ ಪೂಂಜಾ
ಹರೀಶ್ ಪೂಂಜಾ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Mar 27, 2024 | 11:52 AM

Share

ಮಂಗಳೂರು, ಮಾರ್ಚ್ 27: ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು ಎಂಬ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿಕೆಗೆ ಬೆಳ್ತಂಗಡಿ ಶಾಸಕ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ (Harish Poonja) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​​ನ ಹತಾಶೆಯ ಭಾವನೆ ರಾಜ್ಯದಲ್ಲಿ ವ್ಯಕ್ತವಾಗಿದೆ. ಶಿವರಾಜ ತಂಗಡಗಿ ಹೇಳಿಕೆಯೇ ಇದಕ್ಕೆ ಉದಾಹರಣೆ. 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ. ಇದು ತಂಗಡಗಿ ಅವರ ಬಾಯಲ್ಲಿ ಬಂದಿದೆ ಎಂದು ಹೇಳಿದರು.

ಕಾಂಗ್ರೆಸ್ ಮೇಲಿನಿಂದ ಕೆಳಗಿನವರೆಗೂ ಒಂದೇ ಮಾನಸಿಕತೆ ಇರುವ ಪಕ್ಷ. ಒಬ್ಬ ಒಳ್ಳೆಯ ಮನುಷ್ಯನನ್ನು ಹೆಕ್ಕಿ ತೆಗೆಯಲು ಸಾಧ್ಯ ಇಲ್ಲದಂತ ಪಕ್ಷ. ಯಾರು ಯಾವ ಮಾತನ್ನು ಹೇಳಿದರೂ ಡಿಕೆ ಶಿವಕುಮಾರ್ ಆದಿಯಾಗಿ ರಾಹುಲ್ ಗಾಂಧಿವರೆಗೂ ಅದನ್ನು ಸಮರ್ಥನೆ ಮಾಡುತ್ತಾರೆ. ಆದರೆ, ಬಿಜೆಪಿಯ ಯಾವನೇ ನಾಯಕ ತಪ್ಪು ಹೇಳಿಕೆ ಕೊಟ್ಟರೆ ಅದು ವೈಯಕ್ತಿಕ ಹೇಳಿಕೆ ಎಂದು ಹೇಳುತ್ತದೆ. ಪಕ್ಷಕ್ಕೂ ಅದಕ್ಕೂ ಸಂಬಂಧ ಇಲ್ಲ ಎಂದು ಹೇಳಿ ತಿದ್ದಿಕೊಳ್ಳುತ್ತದೆ. ಮನೆ ಮಕ್ಕಳ ಚಾಲಿ ಊರಿಗೆಲ್ಲಾ ಎಂಬಂತೆ ಕಾಂಗ್ರೆಸ್​ನ ಎಲ್ಲಾ ನಾಯಕರಿಗೂ ಇದು ಅನ್ವಯವಾಗುತ್ತದೆ ಎಂದು ಹರೀಶ್ ಪೂಂಜಾ ಕಿಡಿ ಕಾರಿದರು.

ಕಾಂಗ್ರೆಸ್ ದ್ವೇಷ, ಅಸಹಿಷ್ಣುತೆಯ ಮಾತುಗಳನ್ನಾಡಿರುವುದು ಇದೇ ಮೊದಲೇನಲ್ಲ. ಬಿಜೆಪಿ ಮತ್ತು ಮೋದಿಯನ್ನು ಎದುರಿಸಲಾಗದೆ ಅನೇಕ ನಾಯಕರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಈ ದೇಶದ ಇತಿಹಾಸವನ್ನು ತಂಗಡಗಿ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್​​ನ ದುರಾಡಳಿತ ಮುಚ್ಚಿ ಹಾಕಲು ಈ ರೀತಿ ಹೇಳಿದ್ದಾರೆ ಎಂದು ಹರೀಶ್ ಪೂಂಜಾ ಹೇಳಿದರು.

ಇದನ್ನೂ ಓದಿ: ಮೋದಿ…ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ದೇಶದಲ್ಲಿ ಮೋದಿ ಸರ್ಕಾರ ಭರವಸೆ ನೀಡಿದ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡಿಲ್ಲ. ಹೀಗಾಗಿ ಯುವಕರು, ವಿದ್ಯಾರ್ಥಿಗಳು ‘ಮೋದಿ ಮೋದಿ’ ಎಂದು ಘೋಷಣೆ ಕೂಗಿದರೆ ಅವ ಕಪಾಳಕ್ಕೆ ಹೊಡೆಯಬೇಕು ಎಂದು ಶಿವರಾಜ ತಂಗಡಗಿ ಕೆಲವು ದಿನಗಳ ಹಿಂದೆ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ