AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ‌: ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ

ನಿರಂತರ ಸುರಿದ ಭಾರೀ ಮಳೆ ಹಿನ್ನಲೆ, ದೇವಸ್ಥಾನದೊಳಗೆ ಮಳೆ ನೀರು ನುಗ್ಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಪುರಸಭೆಯ ಅವೈಜ್ಞಾನಿಕ ಚರಂಡಿ ನಿರ್ವಹಣೆಯಿಂದ ರಘುನಾಥ ದೇವಸ್ಥಾನದೊಳಗೆ ನೀರು ನುಗ್ಗಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ‌: ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ‌
TV9 Web
| Edited By: |

Updated on: Jun 30, 2022 | 10:32 AM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ‌ (Rain) ಹಿನ್ನೆಲೆ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಶಾಲೆಗೆ ಬರಲು ತೊಂದರೆಯಾದಲ್ಲಿ ಅಂತಹ ಕಡೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದ್ದು, ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಬಗ್ಗೆ ಕಟ್ಟೆಚ್ಚರ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು, ಬೆಳಗ್ಗೆಯಿಂದ ಆರಿದ್ರಾ ಮಳೆ ಅಬ್ಬರಿಸುತ್ತಿದೆ. ಸೋಮವಾರಪೇಟೆ, ಮಡಿಕೇರಿ ತಾಲೂಕಿನ ಜೋಡುಪಾಲ, ಮದೆನಾಡು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಜನರು ಪರದಾಡುವಂತ್ತಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಕೂಡ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ರಾತ್ರಿಯಿಂದಲೇ ಮಳೆ ಸುರಿಯುತ್ತಿದೆ. ಇಂದು ದಟ್ಟ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Hasan Ali: ಔಟ್ ಕೊಟ್ಟಿಲ್ಲವೆಂದು ಅಂಪೈರ್ ಕೈಯನ್ನು ಬಲವಂತವಾಗಿ ಎತ್ತಿದ ಪಾಕ್ ಕ್ರಿಕೆಟಿಗ: ವಿಡಿಯೋ

ಭಾರಿ ಮಳೆಯಿಂದಾಗಿ ದೇವಸ್ಥಾನದೊಳಗೆ ನುಗ್ಗಿದ ಮಳೆ ನೀರು

ಕಾರವಾರ: ನಿರಂತರ ಸುರಿದ ಭಾರೀ ಮಳೆ ಹಿನ್ನಲೆ, ದೇವಸ್ಥಾನದೊಳಗೆ ಮಳೆ ನೀರು ನುಗ್ಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಪುರಸಭೆಯ ಅವೈಜ್ಞಾನಿಕ ಚರಂಡಿ ನಿರ್ವಹಣೆಯಿಂದ ರಘುನಾಥ ದೇವಸ್ಥಾನದೊಳಗೆ ನೀರು ನುಗ್ಗಿದೆ. ಸುಮಾರು 400 ವರ್ಷಗಳ ಇತಿಹಾಸವಿರುವ ದೇವಸ್ಥಾನ ಇದಾಗಿದ್ದು, ಪ್ರತಿ ಭಾರಿ ಮಳೆ ಹೆಚ್ಚು ಪ್ರಮಾಣದಲ್ಲಿ ಬಂದಾಗ  ನೀರು ಒಳ ನುಗ್ಗುತ್ತದೆ. ಪುರಾತತ್ವ ಇಲಾಖೆಗೆ ಸಮಸ್ಯೆ ಬಗ್ಗೆ ಸಾಕಷ್ಟು ಭಾರೀ ಮನವಿ ಮಾಡಿದರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ಧಾರ್ಮಿಕ ಪೂಜಾ ಕೈಂಕರ್ಯಕ್ಕೂ ಮಳೆ ನೀರು ಅಡ್ಡಿ ಪಡಿಸಿದೆ. ಆದಷ್ಟು ಬೇಗ ಈ ಸಮಸ್ಯೆಯಿಂದ ಮುಕ್ತಿ ನೀಡುವಂತೆ ಜನರ ಒತ್ತಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ; Pranitha Subhash: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿದ ಪ್ರಣಿತಾ; ‘ಹಿಂದೂಗಳ ಜೀವ ಮುಖ್ಯ’ ಎಂದು ಫಲಕ ಹಿಡಿದ ನಟಿ

Follow Us
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ