AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 10 ದಿನ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ; ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜನೆ

ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಬಹುದು. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಉದ್ಭವಿಸಬಹುದು ಎಂದು ಕೆಎಸ್‌ಎನ್‌ಡಿಎಂಸಿ ಪ್ರಕಟಣೆ ತಿಳಿಸಿದೆ.

ಮುಂದಿನ 10 ದಿನ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ; ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜನೆ
ಮಳೆ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jun 29, 2023 | 10:32 PM

Share

ಮಂಗಳೂರು: ಮುಂದಿನ 10 ದಿನಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ (ಅಂದಾಜು 64.5 ಮಿಮೀ ನಿಂದ 115 ಮಿಮೀ). ಕರಾವಳಿಯ ವಿವಿಧ ಸ್ಥಳಗಳಲ್ಲಿ ಈ ಅವಧಿಯಲ್ಲಿ ಅತಿ ಹೆಚ್ಚು (244.4 ಮಿಮೀ ವರೆಗೆ) ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ಪ್ರಕಟಣೆ ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಬಹುದು. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಉದ್ಭವಿಸಬಹುದು ಎಂದು ಕೆಎಸ್‌ಎನ್‌ಡಿಎಂಸಿ ಪ್ರಕಟಣೆ ತಿಳಿಸಿದೆ.

ಅಗತ್ಯ ಎದುರಾದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಅಂತಹ ಪ್ರದೇಶಗಳಲ್ಲಿ ಮುಂಚಿತವಾಗಿ ಡಿ-ವಾಟರಿಂಗ್ ಪಂಪ್‌ಗಳು ಮತ್ತು ಇತರ ಉಪಕರಣಗಳನ್ನು ನಿಯೋಜಿಸಲು ಜಿಲ್ಲಾಡಳಿತಗಳಿಗೆ ತಿಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಡಿಆರ್‌ಎಫ್) ಸಿಬ್ಬಂದಿಯನ್ನು ಸಂಭಾವ್ಯ ಅಪಾಯದ ಪ್ರದೇಶಗಳಲ್ಲಿ ಸೂಚನೆ ನೀಡಲಾಗಿದೆ. ಯಾವುದೇ ರೀತಿಯ ಅನಾಹುತಗಳನ್ನು ಎದುರಿಸಲು ಸಿದ್ಧರಾಗಿರುವಂತೆ ಕೆಎಸ್‌ಎನ್‌ಡಿಎಂಸಿ ಸ್ಥಳೀಯ ಆಡಳಿತಗಳನ್ನು ಕೇಳಿದೆ.

ಇದನ್ನೂ ಓದಿ: Mangalore Rains: ಮಂಗಳೂರಿನ ಕೋಟೆಕಾರಿನಲ್ಲಿ ಒಂದೇ ದಿನ 245 ಮಿಮೀ ಮಳೆ, ಕರಾವಳಿ ಕರ್ನಾಟಕದಲ್ಲಿ ವರ್ಷಧಾರೆ ಸಾಧ್ಯತೆ

ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಜುಲೈ 2 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 45 ಕಿಮೀ ಯಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸಮುದ್ರದಲ್ಲಿ 3 ರಿಂದ 3.2 ಮೀಟರ್ ವ್ಯಾಪ್ತಿಯಲ್ಲಿ ಹೆಚ್ಚಿನ ಅಲೆಗಳನ್ನು ಏಳುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ