AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ vs ಕೇಸರಿ ಶಾಲು: ಶಾಲಾ-ಕಾಲೇಜ್​ ಆರಂಭದ ಹೊತ್ತಿನಲ್ಲೇ ದಕ್ಷಣ ಕನ್ನಡದಲ್ಲಿ ಧರ್ಮ ದಂಗಲ್ ಆತಂಕ!

ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ತಲೆದೋರಿದ್ದು, ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿದೆ. ಇದಕ್ಕೆ ಪ್ರತಿಯಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೇಸರಿ ಶಾಲು ಧರಿಸುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವುದಾಗಿ ಘೋಷಿಸಿವೆ. ಇದರಿಂದ ಮಂಗಳೂರು ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಮತ್ತೊಮ್ಮೆ ಧರ್ಮ ದಂಗಲ್ ಉಂಟಾಗುವ ಭೀತಿ ಎದುರಾಗಿದೆ.

ಹಿಜಾಬ್ vs ಕೇಸರಿ ಶಾಲು: ಶಾಲಾ-ಕಾಲೇಜ್​ ಆರಂಭದ ಹೊತ್ತಿನಲ್ಲೇ ದಕ್ಷಣ ಕನ್ನಡದಲ್ಲಿ ಧರ್ಮ ದಂಗಲ್ ಆತಂಕ!
ವಿಶ್ವ ಹಿಂದೂ ಪರಿಷತ್ ಸುದ್ದಿಗೋಷ್ಠಿImage Credit source: tv9 kannada
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 20, 2026 | 3:23 PM

Share

ಮಂಗಳೂರು, ಮೇ 20: ಹಿಜಾಬ್​ ವಿವಾದ (Hijab controversy) ರಾಜ್ಯರಾಜಕಾರಣ ಮಾತ್ರವಲ್ಲ ಇಡೀ ವಿಶ್ವವೇ ಒಮ್ಮೆ ರಾಜ್ಯದತ್ತ ತಿರುಗಿ ನೋಡುವಂತೆ ಮಾಡಿದ ವಿವಾದ. ಇದೀಗ ಮತ್ತೆ ಹಿಜಾಬ್​ಗೆ ಅವಕಾಶ ಕೊಟ್ಟಿರುವುದು ಸಾಕಷ್ಟು ಜಟಾಪಟಿಗೆ ಕಾರಣವಾಗಿದೆ. ಇದಕ್ಕೆ ಹಿಂದೂ ಸಂಘಟನೆಗಳು (Hindu organisations) ಕಿಡಿಕಾರಿದ್ದು, ಕಾಲೇಜು ಆರಂಭವಾಗುತ್ತಿದ್ದಂತೆ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡುತ್ತೇವೆ ಅಂತಾ ಘೋಷಣೆ ಮಾಡಿದೆ. ಆ ಮೂಲಕ ಅವರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಹೇಳಲಾಗಿದ್ದು, ಇದು ನಗರದಲ್ಲಿ ಮತ್ತೆ ಧರ್ಮ ದಂಗಲ್​​ಗೆ ಎಡೆಮಾಡಿ ಕೊಡುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಮುಖ್ಯಾಂಶಗಳು

  • ಹಿಜಾಬ್ ದಂಗಲ್​ಗೆ ರಣಕಹಳೆ ಮೊಳಗಿಸಿದ ಹಿಂದೂ ಸಂಘಟನೆ
  • ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸುವಂತೆ ಸೂಚನೆ
  • ಮಂಗಳೂರಿನಲ್ಲಿ ಶಾಂತಿ ಕದಡುವ ಆತಂಕ?

ರಾಜ್ಯ ಸರ್ಕಾರ ಶಾಲಾ-ಕಾಲೇಜ್​​ಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದಲ್ಲದೇ, ಕೇಸರಿ ಶಾಲು ಧರಿಸುವಂತಿಲ್ಲ ಎಂಬ ಆದೇಶ ನೀಡಿತ್ತು. ಸದ್ಯ ಇದೀಗ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಇದರ ಎಫೆಕ್ಟ್ ಎಲ್ಲೂ ಆಗಿಲ್ಲ. ಇನ್ನೇನು ಕೆಲ ವಾರಗಳಲ್ಲಿ ಶಾಲಾ-ಕಾಲೇಜುಗಳು ರಿಓಪನ್ ಆಗುತ್ತಿವೆ. ಅಂದಿನಂತೆ ಈ ವರ್ಷ ಕೂಡ ಹಿಜಾಬ್ ವರ್ಸಸ್ ಕೇಸರಿ ಶಾಲು ದಂಗಲ್​​​ ಉಂಟಾಗುವ ಲಕ್ಷಣಗಳು ಕಾಣಿಸುತ್ತಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಶುರುವಾಯ್ತು ಹಿಜಾಬ್ ಕಿಚ್ಚು: ಮುತಾಲಿಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಇನ್ನು ಈ ಬಗ್ಗೆ ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಸುದ್ದಿಗೋಷ್ಠಿಯಲ್ಲಿ ಧರ್ಮ ದಂಗಲ್​​ನ ಎಚ್ಚರಿಕೆ ನೀಡಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿರುದ್ಧ ಕೇಸರಿ ಶಾಲು ಹಾಕುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವುದಾಗಿ ಹೇಳಿದೆ. ಅಲ್ಲದೆ ವಿದ್ಯಾರ್ಥಿಗಳ ಹೋರಾಟಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸಂಪೂರ್ಣ ಸಹಕಾರ ನೀಡಿ ಬೀದಿಗೆ ಇಳಿದು ಹೋರಾಡಲು ಸಜ್ಜಾಗಿದೆ. ವಿ.ಎಚ್.ಪಿ ಮತ್ತು ಭಜರಂಗದಳ ಸಂಘಟನೆಗಳ ಹೇಳಿಕೆಗಳು  ವಿದ್ಯಾರ್ಥಿ ಸಮೂಹದ ಮೇಲೆ ಪ್ರಭಾವ ಬೀರುವ ಮತ್ತು ಶಾಲಾ-ಕಾಲೇಜ್​ಗಳಲ್ಲಿ ಆರೋಗ್ಯಕರ ವಾತಾವರಣ ಹಾಳು ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆ ಆದರೆ ರಾಜ್ಯ ಸರ್ಕಾರ ನೇರ ಹೊಣೆ ಎಂದ ಶರಣ್ ಪಂಪ್ ವೆಲ್

ಇನ್ನು ಕಾನೂನು ಸುವ್ಯವಸ್ಥೆಗೆ ಧಕ್ಕೆ ಆದರೆ ಅದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ. ಈ ವಿವಾದ ತಣ್ಣಗಾಗಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶಗಳು ಬರುತ್ತಿವೆ. ಆದರೆ ಇಂತಹ ಆದೇಶದಿಂದ ತಣ್ಣಗಿರುವ ಕಡೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆದರೆ ಅದಕ್ಕೆ ಸರ್ಕಾರ ಹೊಣೆ ಎಂದು ವಿಹೆಚ್​ಪಿ ಮುಖಂಡ ಶರಣ್ ಪಂಪ್ ವೆಲ್​​ ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಮಧುಬಂಗಾರಪ್ಪ ಹೇಳಿದ್ದೇನು ಗೊತ್ತಾ?

ಸದ್ಯ ಕರಾವಳಿ ಶಾಂತವಾಗಿದೆ. ಇನ್ನು ಇಂತಹ ಧರ್ಮ ದಂಗಲ್​ಗಳು ನಡೆದರೆ ಮತ್ತೆ ಸಾಮರಸ್ಯಕ್ಕೆ ಧಕ್ಕೆ ಆಗುವ ಸಾಧ್ಯತೆಗಳಿವೆ. ತಕ್ಷಣ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಬಗ್ಗೆ ಗಮನಹರಿಸಬೇಕಾದ ಅವಶ್ಯಕತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More