AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮದ ಒಂದು ಸಮಾಜದ ಹೆಣ್ಣುಮಕ್ಕಳನ್ನು ವೇಶ್ಯೆಯರು ಎಂದ ಸರ್ಕಾರಿ ಅಧಿಕಾರಿ: ಆಕ್ರೋಶ

ದಕ್ಷಿಣ ಕನ್ನಡದ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯಯರು ಇದ್ದಾರೆ ಎಂದು ಹೇಳಿದ್ದಾನೆ.

ಹಿಂದೂ ಧರ್ಮದ ಒಂದು ಸಮಾಜದ ಹೆಣ್ಣುಮಕ್ಕಳನ್ನು ವೇಶ್ಯೆಯರು ಎಂದ ಸರ್ಕಾರಿ ಅಧಿಕಾರಿ: ಆಕ್ರೋಶ
ಸಂಜೀವ ಪೂಜಾರಿ, ದೂರು ಪ್ರತಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 17, 2024 | 1:13 PM

Share

ಮಂಗಳೂರು, ಅಕ್ಟೋಬರ್​​ 17: ಸರ್ಕಾರಿ ಅಧಿಕಾರಿಯೊಬ್ಬ (Government Officer) ಹಿಂದೂ (Hindu) ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟದ್ದಾನೆ. ಹಿಂದೂ ಧರ್ಮದ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಿದ್ದಾರೆ ಅಂತ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹೇಳಿರುವ ಆಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್​​ ಆಗಿದೆ. ಆಡಿಯೋ ವೈರಲ್ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಪೊಲೀಸ್​ ಠಾಣೆ ಸೇರಿದಂತೆ ಎರಡು ಕಡೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ನಾಲಿಗೆ ಹರಿಬಿಟ್ಟಿದ್ದಾನೆ.

ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎರಡು ದಿನಗಳ ಹಿಂದೆ ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಸ್ಲಿಮರ ಪರವಾಗಿ ಪೋಸ್ಟ್ ಹಾಕಿದ್ದನು. ಸಹಾಯ ಮಾಡುವುದರಲ್ಲಿ ಮುಸ್ಲಿಮರು ಎತ್ತಿದ ಕೈ ಎಂದು ಪೋಸ್ಟ್ ಹಾಕಿದ್ದನು. ಈ ಪೋಸ್ಟ್ ವಿರೋಧಿಸಿ ಹಿಂದೂ ಕಾರ್ಯಕರ್ತ ಸುರೇಶ್ ಕಾಸರಗೋಡು ಅವರು ಸಂಜೀವ್​ ಪೂಜಾರಿಗೆ ಕರೆ ಮಾಡಿದ್ದರು.

ಇದನ್ನೂ ಓದಿ: ನದಿ, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

ದೂರವಾಣಿಯಲ್ಲಿ ಮಾತನಾಡುವಾಗ “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ.  ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣರಾಗಿದ್ದಾರೆ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು” ಎಂದು ಹಿಂದೂ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ.

ಅಧಿಕಾರಿ ಸಂಜೀವ ಪೂಜಾರಿ ಈ ಹಿಂದೆಯೂ ವಿವಾದ ಸೃಷ್ಟಿಸಿ ಸೇವೆಯಿಂದ ಅಮಾನತ್ತಾಗಿದ್ದನು. ಇದೀಗ, ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದಿದ್ದರೆ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ತಕ್ಷಣ ಆತನನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಅಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:08 pm, Thu, 17 October 24

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ