AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಮಳಲಿ ದರ್ಗಾದಲ್ಲಿ ದೇವಾಲಯ ಪತ್ತೆ ವಿಚಾರ; ತಾಂಬೂಲ ಪ್ರಶ್ನೆ ಇಟ್ಟು ಸಮಸ್ಯೆ ಬಗೆಹರಿಸಲು ಮುಂದಾದ ವಿಶ್ವ ಹಿಂದೂ ಪರಿಷತ್

ಮಂಗಳೂರು ಹೊರವಲಯದ ಮಳಲಿಯಲ್ಲಿ ಸಭೆ ನಡೆಸಿದ ಪ್ರಮುಖರು ತಾಂಬೂಲ ಪ್ರಶ್ನೆ ಹಾಗೂ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೇರಿ ಹಿಂದೂ ಪ್ರಮುಖರು ಭಾಗಿಯಾಗಿದ್ದಾರೆ. ಮಳಲಿಯಲ್ಲಿ ತಾಂಬೂಲ ಪ್ರಶ್ನೆ ಇಟ್ಟು ದೈವ ಸಾನಿಧ್ಯ ಪತ್ತೆಗೆ ಹಿಂದೂ ಪ್ರಮುಖರು ನಿರ್ಧರಿಸಿದ್ದಾರೆ.

ಮಂಗಳೂರಿನ ಮಳಲಿ ದರ್ಗಾದಲ್ಲಿ ದೇವಾಲಯ ಪತ್ತೆ ವಿಚಾರ; ತಾಂಬೂಲ ಪ್ರಶ್ನೆ ಇಟ್ಟು ಸಮಸ್ಯೆ ಬಗೆಹರಿಸಲು ಮುಂದಾದ ವಿಶ್ವ ಹಿಂದೂ ಪರಿಷತ್
ತಾಂಬೂಲ ಪ್ರಶ್ನೆ ಇಟ್ಟು ಸಮಸ್ಯೆ ಬಗೆಹರಿಸಲು ಮುಂದಾದ ವಿಶ್ವ ಹಿಂದೂ ಪರಿಷತ್
TV9 Web
| Edited By: |

Updated on: May 22, 2022 | 3:08 PM

Share

ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ (Malali) ಎಂಬಲ್ಲಿನ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾವನ್ನು (Dargah) ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನದ (Temple) ಮಾದರಿ ಪತ್ತೆಯಾಗಿತ್ತು. ಈ ಸಂಬಂಧ ಕೋರ್ಟ್ ನಿಂದ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಸದ್ಯ ಅಲ್ಲಿ ಪತ್ತೆಯಾಗಿರೊದು ದರ್ಗಾನಾ, ದೇವಸ್ಥಾನನಾ, ಬಸದಿನಾ ಅನ್ನೊ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರವಾಗಿ ಹಿಂದು ಸಂಘಟನೆಗಳು ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಿದ್ದರು. ಆದ್ರೆ ಅಷ್ಟಮಂಗಳ ಪ್ರಶ್ನೆಯ ಬದಲಿಗೆ ತಾಂಬೂಲ ಪ್ರಶ್ನೆ ಇಡಲು ನಿರ್ಧಾರ ಮಾಡಿದ್ದಾರೆ. ಮೇ.25ಕ್ಕೆ ತಾಂಬೂಲ ಪ್ರಶ್ನೆಗೆ ವಿಶ್ವ ಹಿಂದೂ ಪರಿಷತ್ ನಿಂದ ದಿನಾಂಕ ನಿಗದಿಯಾಗಲಿದೆ.

ಈ ಬಗ್ಗೆ ಮಂಗಳೂರು ಹೊರವಲಯದ ಮಳಲಿಯಲ್ಲಿ ಸಭೆ ನಡೆಸಿದ ಪ್ರಮುಖರು ತಾಂಬೂಲ ಪ್ರಶ್ನೆ ಹಾಗೂ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೇರಿ ಹಿಂದೂ ಪ್ರಮುಖರು ಭಾಗಿಯಾಗಿದ್ದಾರೆ. ಮಳಲಿಯಲ್ಲಿ ತಾಂಬೂಲ ಪ್ರಶ್ನೆ ಇಟ್ಟು ದೈವ ಸಾನಿಧ್ಯ ಪತ್ತೆಗೆ ಹಿಂದೂ ಪ್ರಮುಖರು ನಿರ್ಧರಿಸಿದ್ದಾರೆ. ಇದನ್ನೂ ಓದಿ: ‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ

ತಾಂಬೂಲ ಪ್ರಶ್ನೆ ಎಂದರೇನು? ತಾಂಬೂಲದ (ವೀಳ್ಯದೆಲೆ) ಸಹಾಯದಿಂದ ತನ್ವಾದಿ ದ್ವಾದಶ ಭಾವಗಳ ಸಮಸ್ತ ಶುಭಾ ಶುಭಫಲಗಳನ್ನು ಪತ್ತೆ ಹಚ್ಚುವುದು. ಪ್ರಶ್ನೆಶಾಸ್ತ್ರದಲ್ಲಿ ಚಕ್ರಗಳು, ಕವಡೆಗಳು, ತಾಂಬೂಲಗಳ ಸಂಖ್ಯೆ, ಸ್ವರೂಪ ಇತ್ಯಾದಿಗಳ ಆಧಾರದಿಂದ ಪ್ರಶ್ನೆಫಲ ಹೇಳಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಘಟನೆ ಮಾಹಿತಿ ಈಗಾಗಲೇ ಹಳೆಯ ಭೂ ದಾಖಲೆಗಳನ್ನು ದಕ್ಷಿಣಕನ್ನಡ ಜಿಲ್ಲಾಡಳಿತ ಪರಿಶೀಲನೆ ನಡೆಸುತ್ತಿದೆ. ಏಪ್ರಿಲ್ 21 ರಂದು ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದ ನವೀಕರಣದ ಸಲುವಾಗಿ ಮುಂಭಾಗ ಕೆಡವಲಾಗಿತ್ತು. ಆಗ ದರ್ಗಾದ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿತ್ತು. ಮಾಹಿತಿ ತಿಳಿದು ಮಂಗಳೂರು ತಹಶೀಲ್ದಾರ್ ಪುರಂದರ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತಹಶೀಲ್ದಾರ್ ಮುಂದಾಗಿದ್ದಾರೆ. ಸದ್ಯಕ್ಕೆ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶಿಲ್ದಾರ್ ಸೂಚನೆ ನೀಡಿದ್ದಾರೆ. ಪ್ರಸ್ತುತ ದರ್ಗಾದ ನವೀಕರಣ ಕಾಮಗಾರಿ‌ ಸ್ಥಗಿತಗೊಂಡಿದೆ.

ವಿಶ್ವ ಹಿಂದೂ ಪರಿಷತ್ ಪ್ರಮುಖರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಸಹ ಸ್ಥಳಕ್ಕೆ ಭೇಟಿ ನೀಡಿದ್ದರು. ಇಲ್ಲಿ ದೇವಸ್ಥಾನವಿತ್ತು ಎಂದು ಹಿಂದೂಪರ ಸಂಘಟನೆ ಮುಖಂಡರು ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ. ಇನ್ನು, ದರ್ಗಾ ಆಡಳಿತ ಮಂಡಳಿಯು ಕೆಲಸ ಸ್ಥಗಿತಗೊಳಿಸಿ ಜಿಲ್ಲಾಡಳಿತದ ನಡೆಗೆ ಸಮ್ಮತಿ ಸೂಚಿಸಿದೆ. ಇದನ್ನೂ ಓದಿ: Narendra Modi: ಇಡೀ ಭಾರತವೇ ನಿಮ್ಮ ಸಾಧನೆ ಕೊಂಡಾಡಿದೆ: ಥಾಮಸ್ ಕಪ್ ಆಟಗಾರರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ