AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು

ದಕ್ಷಿಣ ಕನ್ನಡ ಜಿಲ್ಲೆ ಅತ್ಯಂತ ಸೂಕ್ಷ್ಮ ಪ್ರದೇಶ. ಕೊಲೆ, ಅಪಹರಣ, ಹಿಂದೂ ಮುಸ್ಲಿಂ ಗಲಾಟೆ, ನೈತಿಕ ಪೊಲೀಸ್​​ಗಿರಿಯಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಯುವತಿಯ ಪೋಷಕರು ಮಂಗಳೂರಿಗೆ ಆಗಮಿಸಿದ್ದು, ಮಗಳ ಸುಳಿವು ಸಿಗದಿದ್ದರಿದ ಆತಂಕಗೊಂಡಿದ್ದಾರೆ.

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು
ಪ್ರಾತಿನಿಧಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 10, 2026 | 11:07 PM

Share

ಮಂಗಳೂರು, (ಫೆಬ್ರವರಿ 10): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮನೆಯವರೆಗೆ ತಿಳಿಸದೇ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ ಮಿದ್ಲಾಜ್ ರಿಜಿಸ್ಟರ್ ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ವಿಷಯ ತಿಳಿದ ಪೋಷಕರು, ಆಕೆ ಇದ್ದ ಪಿಜಿಗೆ ಬಂದು ವಿಚಾರಿಸಿದ್ದು, ಫೆಬ್ರವರಿ‌ 9ರಂದು ಪಿಜಿಯಿಂದ ತೆರಳಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಅಷ್ಟೇ. ಆದ್ರೆ, ಆಕೆ ಎಲ್ಲಿ ಹೋಗಿದ್ದಾಳೆ ಎನ್ನುವುದು ಗೊತ್ತಾಗಿಲ್ಲ. ಇದರಿಂದ ಭಯಗೊಂಡ ವೈಶಾಲಿ ಪೋಷಕರು, ನೀಡಿದ ದೂರಿನ ಮೇರೆಗೆ ಸುರತ್ಕಲ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ

ಬೇರೆ ಕಾಲೇಜಿಗೆ ಸೇರಲು ವಿದ್ಯಾರ್ಥಿನಿ ಕಿಡ್ನಾಪ್ ನಾಟಕ

ಇನ್ನೊಂದು ಕಡೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಸುದೇಮುಗೇರು ಬಳಿ ನಿನ್ನೆ ಶಾಕಿಂಗ್ ಸುದ್ದಿ ಬಂದಿತ್ತು.. ಕಾಶಿಬೆಟ್ಟುನಲ್ಲಿರುವ ಕಾಲೇಜಿನಲ್ಲಿ ಪ್ರಥಮ ಪಿಯು ಓದ್ತಿದ್ದ ವಿದ್ಯಾರ್ಥಿನಿ, ನನ್ನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ರು ಅಂತೇಳಿದ್ಳು. ಪೊಲೀಸರು, ಶಾಸಕರೆಲ್ಲ ಸ್ಥಳಕ್ಕೆ ದೌಡಾಯಿಸಿದ್ರು.. ಸ್ಕೂಟಿಯಲ್ಲಿ ನಾನು ಕಾಲೇಜಿಗೆ ಹೋಗ್ತಿದ್ದಾಗ, ಓಮ್ನಿ ಕಾರಿನಲ್ಲಿ ಮೂವರು ಮಾಸ್ಕ್​​ ಧಾರಿಗಳು ನನ್ನ ಅಪಹರಿಸಲು ಯತ್ನಿಸಿದ್ರು. ನಾನು ಕಿರುಚಿಕೊಂಡಾಗ ಚೂರಿ ಇರಿದ್ರು. ನಾನು ಅವರಿಂದ ತಪ್ಪಿಸಿಕೊಂಡೇ, ನನ್ನ ಬ್ಯಾಗ್​​​ ಅವರೇ ಕೊಂಡೊಯ್ದರು ಅಂತೇಳಿದ್ದಳು. ಬಳಿಕ ತಂಡ ತಂಡವಾಗಿ ಪೊಲೀಸರು ತನಿಖೆಗೆ ಇಳಿದಾಗ, ಘಟನಾ ಸ್ಥಳದ ಅನತಿ ದೂರದಲ್ಲೇ ಬ್ಯಾಗ್ ಸಿಕ್ಕಿತ್ತು. ಅದರಲ್ಲಿ ನೀರಿನ ಬಾಟೆಲ್​ ಬಿಟ್ಟು ಪುಸ್ತಕಗಳು ನಾಪತ್ತೆ ಆಗಿದ್ದವು.

ಪೊಲೀಸರು ಯಾವ ಆ್ಯಂಗಲ್​​ನಲ್ಲಿ ಹುಡುಕಾಡಿದ್ರೂ ಕಿಡ್ನ್ಯಾಪರ್ಸ್​ ಸುಳಿವು ಸಿಗಲಿಲ್ಲ. ನಂತರ ಬಾಲಕಿಯನ್ನೇ ವಿಶ್ವಾಸಕ್ಕೆ ತೆಗೊಂಡು ವಿಚಾರಿಸಿದಾಗ, ಕಿಡ್ನಾಪ್ ನಡೆದೇ ಇಲ್ಲ ಅನ್ನೋದು ಗೊತ್ತಾಗಿದೆ. ಬೆಳ್ತಂಗಡಿ ಕಾಲೇಜಿನ ಬದಲು ಮಂಗಳೂರು ಕಾಲೇಜಿಗೆ ಸೇರಿಸುವಂತೆ ಬಾಲಕಿ ಕೇಳಿದ್ದಕ್ಕೆ ತಂದೆ ಒಪ್ಪಿರಲಿಲ್ವಂತೆ. ಹೀಗಾಗಿ ಬಾಲಕಿಯೇ ಕಿಡ್ನ್ಯಾಪ್​ ಕಥೆ ಕಟ್ಟಿರೋದು ಗೊತ್ತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ