ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು

ದಕ್ಷಿಣ ಕನ್ನಡ ಜಿಲ್ಲೆ ಅತ್ಯಂತ ಸೂಕ್ಷ್ಮ ಪ್ರದೇಶ. ಕೊಲೆ, ಅಪಹರಣ, ಹಿಂದೂ ಮುಸ್ಲಿಂ ಗಲಾಟೆ, ನೈತಿಕ ಪೊಲೀಸ್​​ಗಿರಿಯಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಯುವತಿಯ ಪೋಷಕರು ಮಂಗಳೂರಿಗೆ ಆಗಮಿಸಿದ್ದು, ಮಗಳ ಸುಳಿವು ಸಿಗದಿದ್ದರಿದ ಆತಂಕಗೊಂಡಿದ್ದಾರೆ.

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು
ಪ್ರಾತಿನಿಧಿಕ ಚಿತ್ರ
Edited By:

Updated on: Feb 10, 2026 | 11:07 PM

ಮಂಗಳೂರು, (ಫೆಬ್ರವರಿ 10): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮನೆಯವರೆಗೆ ತಿಳಿಸದೇ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ ಮಿದ್ಲಾಜ್ ರಿಜಿಸ್ಟರ್ ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ವಿಷಯ ತಿಳಿದ ಪೋಷಕರು, ಆಕೆ ಇದ್ದ ಪಿಜಿಗೆ ಬಂದು ವಿಚಾರಿಸಿದ್ದು, ಫೆಬ್ರವರಿ‌ 9ರಂದು ಪಿಜಿಯಿಂದ ತೆರಳಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಅಷ್ಟೇ. ಆದ್ರೆ, ಆಕೆ ಎಲ್ಲಿ ಹೋಗಿದ್ದಾಳೆ ಎನ್ನುವುದು ಗೊತ್ತಾಗಿಲ್ಲ. ಇದರಿಂದ ಭಯಗೊಂಡ ವೈಶಾಲಿ ಪೋಷಕರು, ನೀಡಿದ ದೂರಿನ ಮೇರೆಗೆ ಸುರತ್ಕಲ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ

ಬೇರೆ ಕಾಲೇಜಿಗೆ ಸೇರಲು ವಿದ್ಯಾರ್ಥಿನಿ ಕಿಡ್ನಾಪ್ ನಾಟಕ

ಇನ್ನೊಂದು ಕಡೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಸುದೇಮುಗೇರು ಬಳಿ ನಿನ್ನೆ ಶಾಕಿಂಗ್ ಸುದ್ದಿ ಬಂದಿತ್ತು.. ಕಾಶಿಬೆಟ್ಟುನಲ್ಲಿರುವ ಕಾಲೇಜಿನಲ್ಲಿ ಪ್ರಥಮ ಪಿಯು ಓದ್ತಿದ್ದ ವಿದ್ಯಾರ್ಥಿನಿ, ನನ್ನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ರು ಅಂತೇಳಿದ್ಳು. ಪೊಲೀಸರು, ಶಾಸಕರೆಲ್ಲ ಸ್ಥಳಕ್ಕೆ ದೌಡಾಯಿಸಿದ್ರು.. ಸ್ಕೂಟಿಯಲ್ಲಿ ನಾನು ಕಾಲೇಜಿಗೆ ಹೋಗ್ತಿದ್ದಾಗ, ಓಮ್ನಿ ಕಾರಿನಲ್ಲಿ ಮೂವರು ಮಾಸ್ಕ್​​ ಧಾರಿಗಳು ನನ್ನ ಅಪಹರಿಸಲು ಯತ್ನಿಸಿದ್ರು. ನಾನು ಕಿರುಚಿಕೊಂಡಾಗ ಚೂರಿ ಇರಿದ್ರು. ನಾನು ಅವರಿಂದ ತಪ್ಪಿಸಿಕೊಂಡೇ, ನನ್ನ ಬ್ಯಾಗ್​​​ ಅವರೇ ಕೊಂಡೊಯ್ದರು ಅಂತೇಳಿದ್ದಳು. ಬಳಿಕ ತಂಡ ತಂಡವಾಗಿ ಪೊಲೀಸರು ತನಿಖೆಗೆ ಇಳಿದಾಗ, ಘಟನಾ ಸ್ಥಳದ ಅನತಿ ದೂರದಲ್ಲೇ ಬ್ಯಾಗ್ ಸಿಕ್ಕಿತ್ತು. ಅದರಲ್ಲಿ ನೀರಿನ ಬಾಟೆಲ್​ ಬಿಟ್ಟು ಪುಸ್ತಕಗಳು ನಾಪತ್ತೆ ಆಗಿದ್ದವು.

ಪೊಲೀಸರು ಯಾವ ಆ್ಯಂಗಲ್​​ನಲ್ಲಿ ಹುಡುಕಾಡಿದ್ರೂ ಕಿಡ್ನ್ಯಾಪರ್ಸ್​ ಸುಳಿವು ಸಿಗಲಿಲ್ಲ. ನಂತರ ಬಾಲಕಿಯನ್ನೇ ವಿಶ್ವಾಸಕ್ಕೆ ತೆಗೊಂಡು ವಿಚಾರಿಸಿದಾಗ, ಕಿಡ್ನಾಪ್ ನಡೆದೇ ಇಲ್ಲ ಅನ್ನೋದು ಗೊತ್ತಾಗಿದೆ. ಬೆಳ್ತಂಗಡಿ ಕಾಲೇಜಿನ ಬದಲು ಮಂಗಳೂರು ಕಾಲೇಜಿಗೆ ಸೇರಿಸುವಂತೆ ಬಾಲಕಿ ಕೇಳಿದ್ದಕ್ಕೆ ತಂದೆ ಒಪ್ಪಿರಲಿಲ್ವಂತೆ. ಹೀಗಾಗಿ ಬಾಲಕಿಯೇ ಕಿಡ್ನ್ಯಾಪ್​ ಕಥೆ ಕಟ್ಟಿರೋದು ಗೊತ್ತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us