AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Airport: ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್: ಎಫ್​ಐಆರ್ ದಾಖಲು

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್​ ಸಂದೇಶಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿದೆ. ಐಪಿಸಿ 507 ಅಡಿ‌ ಬಜಪೆ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Mangaluru Airport: ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್: ಎಫ್​ಐಆರ್ ದಾಖಲು
ಮಂಗಳೂರು ವಿಮಾನ ನಿಲ್ದಾಣ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Dec 28, 2023 | 10:34 PM

ಮಂಗಳೂರು, (ಡಿಸೆಂಬರ್ 28): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Mangaluru Airport) ಹುಸಿ ಬಾಂಬ್ ಇ-ಮೇಲ್​ ಸಂದೇಶಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿದೆ. ಡಿಸೆಂಬರ್ 26ರಂದು ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ xonocikonoci10@beeble.com ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ಅದಾನಿ ಆಡಳಿತದ ಮಂಗಳೂರು ಏರ್ಪೋರ್ಟ್ ಸಂಸ್ಥೆ ಬಜಪೆ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿ ಪಡೆದುಕೊಂಡು ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದೆ.

ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ xonocikonoci10@beeble.com ಮೇಲ್ ಐಡಿಯಿಂದ ಡಿಸೆಂಬರ್ 26ರಂದು ಬೆದರಿಕೆ ಸಂದೇಶ ಬಂದಿತ್ತು. ‘FUNING’ ಎಂಬ ಉಗ್ರಗಾಮಿ ಸಂಘಟನೆ ಎಂದು ಘೋಷಿಸಿಕೊಂಡು ಬೆದರಿಕೆ ಹಾಕಲಾಗಿತ್ತು. ಆದ್ರೆ, ಮಂಗಳೂರು ಏರ್​​ಪೋರ್ಟ್ ಆಡಳಿತ ಮಂಡಳಿ ಡಿಸೆಂಬರ್ .27ರಂದು ಇ-ಮೇಲ್ ಗಮನಿಸಿ ಅಲರ್ಟ್ ಆಗಿದ್ದು, ಭದ್ರತಾ ತಂಡ ಏರ್ಪೋರ್ಟ್ ನಲ್ಲಿ ತೀವ್ರ ತಪಾಸಣೆ ನಡೆಸಿತ್ತು. ಅಲ್ಲದೇ ಸಿಐಎಸ್ ಎಫ್ ಹಾಗೂ ಬಜಪೆ ಪೊಲೀಸರು ಸಹ ತೀವ್ರ ಶೋಧ ನಡೆಸಿದ್ದರು.

ಇದನ್ನೂ ಓದಿ: Mangalore Airport: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರು ಪಾರ್ಕಿಂಗ್​ಗೆ ವಿನೂತನ ಯೋಜನೆ ಜಾರಿ

ಕೊನೆಗೆ ಇದರೊಂದು ಹುಸಿ ಬಾಂಬ್ ಕರೆ ಎಂದು ಖಾತ್ರಿಯಾಗಿತ್ತು. ಬಳಿಕ ಮಂಗಳೂರು ವಿಮಾನ ನಿಲ್ದಾಣ ಆಡಳಿ ಮಂಡಳಿ ಈ ಬಗ್ಗೆ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿಯಿಂದ ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

ಮಂಗಳೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 10:32 pm, Thu, 28 December 23

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ