AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ಠಾಣೆಗೆ ಟಾರ್ಪಲ್ ಹೊದಿಕೆ: ಎಂಜಿನಿಯರ್​ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತರಾಟೆ

ಈ ವೇಳೆ ಸೋರುತ್ತಿದ್ದ ಠಾಣೆಗೆ ಟಾರ್ಪಾಲ್​ ಹೊದಿಕೆ ಇದ್ದುದು ಕಂಡು ಗೃಹ ಸಚಿವ ಆರಗ ಜ್ಞಾನೇಂದ್ರ ಅವಾಕ್ಕಾದರು.

ಕುಕ್ಕೆ ಸುಬ್ರಹ್ಮಣ್ಯ ಠಾಣೆಗೆ ಟಾರ್ಪಲ್ ಹೊದಿಕೆ: ಎಂಜಿನಿಯರ್​ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತರಾಟೆ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on: Jun 27, 2022 | 1:49 PM

Share

ಮಂಗಳೂರು: ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ಠಾಣೆಗೆ ಸಚಿವ ಆರಗ ಜ್ಞಾನೇಂದ್ರ (Araga Jnanendra) ಸೋಮವಾರ ಭೇಟಿ ನೀಡಿದರು. ಈ ವೇಳೆ ಸೋರುತ್ತಿದ್ದ ಠಾಣೆಗೆ ಟಾರ್ಪಾಲ್​ ಹೊದಿಕೆ ಇದ್ದುದು ಕಂಡು ಅವಾಕ್ಕಾದರು. ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬವಾಗಿರುವುದು ಗಮನಿಸಿ ಸಚಿವರು ಕಿಡಿಕಾರಿದರು. ಕಟ್ಟಡ ನಿರ್ಮಾಣ ಎಂಜಿನಿಯರ್​ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ತಕ್ಷಣ ಸ್ಥಳಕ್ಕೆ ಬಂದು ಅಂದಾಜು ಪಟ್ಟಿ ತಯಾರಿಸಿ ಎಂದು ಸೂಚಿಸಿದರು. ಠಾಣೆಗೆ ಹೊಸ ಕಟ್ಟಡ ನಿರ್ಮಿಸಲು 2017ರಲ್ಲೇ ₹ 1.23 ಕೋಟಿ ಮೊತ್ತವನ್ನು ಸರ್ಕಾರ ಮೀಸಲಿಟ್ಟಿತ್ತು. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಹಣ ಸಾಲದ ನೆಪವೊಡ್ಡಿ ಕಾಮಗಾರಿ ವಿಳಂಬ ಮಾಡಲಾಗುತ್ತಿತ್ತು. ಠಾಣೆಗೆ ಟಾರ್ಪಾಲ್ ಹೊದಿಸಿದ್ದು ಗಮನಿಸಿದ ನಂತರ ‘ನನಗೆ ನಾಚಿಕೆಯಾಗುತ್ತಿದೆ’ ಎಂದು ಹೇಳಿದ ಸಚಿವರು, ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಆರಂಭಿಸಬೇಕು ಎಂದು ತಾಕೀತು ಮಾಡಿದರು. ಇರುವ ಕಟ್ಟಡ ಕೆಡವಿ ಹೊಸ ಕಟ್ಟಡ ಕಟ್ಟುತ್ತೀರೋ, ಹೊಸ ಜಾಗದಲ್ಲಿಯೇ ಕಟ್ಟಡ ಕಟ್ಟುತ್ತೀರೋ ಏನು ಮಾಡ್ತೀರೋ ಮಾಡಿ ಎಂದು ತಾಕೀತು ಮಾಡಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು, ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿಯ ಪುರುಷೋತ್ತಮ ಕೃಷಿ ಸಂಶೋಧನಾ ಪ್ರತಿಷ್ಠಾನ ವತಿಯಿಂದ ಆಶ್ಲೇಷ ಬಲಿ ಪೂಜೆ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಈ ಪ್ರತಿಷ್ಠಾನದ ಉಪಾಧ್ಯಕ್ಷರಾಗಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ಗೃಹ ಸಚಿವರಿಗೆ ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಸ್ವಾಗತಿಸಿದರು.

ಉದ್ಧವ್ ಉದ್ಧಟತನ

ಮಹಾರಾಷ್ಟ್ರದಲ್ಲಿ ಉದ್ಧವ್​ ಠಾಕ್ರೆ ಉದ್ಧಟತನದಿಂದ ಎಂವಿಎ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಅದು ಅಲ್ಪಾಯುಷಿ ಮಗು ಎನ್ನುವುದು ಗೊತ್ತಿತ್ತು. ಈಗ ಹಾಗೆಯೇ ಆಗುತ್ತಿದೆ ಎಂದು ಹೇಳಿದರು. ಪ್ರತ್ಯೇಕ ರಾಜ್ಯದ ಕುರಿತು ಉಮೇಶ್​ ಕತ್ತಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಉಮೇಶ್​ ಕತ್ತಿ ಏಕೆ ಹೀಗೆ ಹೇಳಿದ್ದಾರೋ ಗೊತ್ತಿಲ್ಲ. ಇಂಥ ಹೇಳಿಕೆಗಳನ್ನು ಕೊಡಬಾರದು. ಉತ್ತರ ಕರ್ನಾಟಕ ಭಾಗದ ಸಚಿವರು ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿ ಅವಧಿಯಲ್ಲಿ ಸಾಕಷ್ಟು ಅನುದಾನ ಪಡೆದಿದ್ದಾರೆ. ಎಲ್ಲರೂ ಆಶ್ವರ್ಯ ಅಭಿವೃದ್ಧಿ ಕಾಮಗಾರಿಗಳು ಆ ಭಾಗದಲ್ಲಿ ಆಗಿದೆ. ಹೀಗಾಗಿ‌ ಉಮೇಶ್​ ಕತ್ತಿ ತಮ್ಮ ‌ಮಾತು ಮರುಪರಿಶೀಲಿಸಲಿ ಎಂದು ಹೇಳಿದರು.

ಅಗ್ನಿಪಥ್ ಯೋಜನೆಗೆ ಈಗಾಗಲೇ 50 ಲಕ್ಷ ಅರ್ಜಿ ಸಲ್ಲಿಕೆ ಆಗಿದೆ. ಯುವಕರು ಯಾರ ಹೇಳಿಕೆಗಳನ್ನೂ ಕೇಳದೆ ಯುವಕರು ಬರುತ್ತಿದ್ದಾರೆ. ಪಿಎಸ್​ಐ ಅಕ್ರಮದಲ್ಲಿ ಪಾರದರ್ಶಕ ತನಿಖೆ ಆಗ್ತಿದೆ, ಬೇಗ ಮುಗಿಯುತ್ತದೆ. ಎಫ್ಎಸ್ಎಲ್ ವರದಿ ಬರುತ್ತದೆ, ಜೊತೆಗೆ ಬ್ಲೂಟೂತ್ ವಿಚಾರ ಪತ್ತೆ ಸ್ವಲ್ಪ ತಡವಾಗುತ್ತಿದೆ. ಅನ್ನು ಪತ್ತೆ ಮಾಡುವುದು ಕಷ್ಟ. ಟವರ್ ಲೊಕೇಶನ್ ಪರಿಶೀಲಿಸಬೇಕಿದೆ. 54 ಸಾವಿರ ಜನರಿಗೆ ಹೊಸದಾಗಿ ಪರೀಕ್ಷೆ ಮಾಡುತ್ತೇವೆ. ತಪ್ಪು ಮಾಡಿದ ಡಿವೈಎಸ್​ಪಿ ಯೂನಿಫಾರಂ ಕಳಚಿ ಲಾಕಪ್​ಗೆ ತಳ್ಳಿದ್ದೇವೆ ಎಂದರು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ