AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಕುಳಿತು ಸುಳ್ಯದಲ್ಲಿರುವ ಹೆಂಡತಿಗೆ ಮೂರು ಬಾರಿಯ ತಲಾಖ್ ಸಂದೇಶ ನೀಡಿದ್ದ, ಸಾಲದು ಅಂತಾ, ಮತ್ತೆ ಕರೆ ಮಾಡಿ ಪುನರುಚ್ಚರಿಸಿದ್ದ!

ಮೊದಲ ಮಗುವಾದ ಬಳಿಕ ಮಿಸ್ರೀಯಾ ವಿದೇಶದಲ್ಲಿ ಪತಿ ಜೊತೆ ನೆಲೆಸಿದ್ದರು. ಎರಡನೇ ಮಗುವಿನ ಹೆರಿಗೆಗೆ ಬಂದಾಗ ಮನಸ್ತಾಪ ತಲೆದೋರಿದೆ ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ವಿದೇಶದಲ್ಲಿ ಕುಳಿತು ಸುಳ್ಯದಲ್ಲಿರುವ ಹೆಂಡತಿಗೆ ಮೂರು ಬಾರಿಯ ತಲಾಖ್ ಸಂದೇಶ ನೀಡಿದ್ದ, ಸಾಲದು ಅಂತಾ, ಮತ್ತೆ ಕರೆ ಮಾಡಿ ಪುನರುಚ್ಚರಿಸಿದ್ದ!
ವಿದೇಶದಲ್ಲಿ ಕುಳಿತು ಸುಳ್ಯದಲ್ಲಿರುವ ಹೆಂಡತಿಗೆ ತ್ರಿವಳಿ ತಲಾಖ್ ನೀಡಿದ ಭೂಪ!
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಸಾಧು ಶ್ರೀನಾಥ್​

Updated on:Sep 20, 2023 | 1:16 PM

ಮಂಗಳೂರು, ಸೆಪ್ಟೆಂಬರ್​ 20: ಭಾರತದಲ್ಲಿ ತಲಾಖು ಇಲ್ಲ; ತ್ರವಳಿ ತಲಾಖೂ ಇಲ್ಲ; ಆದರೂ ವಿದೇಶದಲ್ಲಿರುವ ಪತಿರಾಯನೊಬ್ಬ ಡೆಲಿವರಿಗೆಂದು ಭಾರತಕ್ಕೆ ಬಂದಿರುವ ತನ್ನ ಹೆಂಡತಿಗೆ ತಲಾಖ್ ನೀಡಿದ್ದಾನೆ.  ಅಂದ್ರೆ ವಿವಾಹ ವಿಚ್ಛೇದನ (Divorce) ನೀಡಿದ್ದಾನೆ. ತನ್ನ ಗಂಡ ವಾಟ್ಸಾಪ್ ನಲ್ಲಿ ತ್ರಿವಳಿ ತಲಾಖ್ ನೀಡಿದ್ದು, ಕಾನೂನು ಕ್ರಮ ಕೈಗೊಳ್ಳಿ ಎಂದು ಗಂಡನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಏಳು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿ ಮಧ್ಯೆ ಇತ್ತೀಚೆಗೆ ಕೌಟುಂಬಿಕ ಕಲಹ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಹೆಂತಿ ಮಿಸ್ರೀಯಾ (Misriya, Jayanagar in Sullia) ಎರಡನೇ ಮಗುವಿನ ಹೆರಿಗೆಗೆ ಭಾರತಕ್ಕೆ ಬಂದಿದ್ದು, 6 ತಿಂಗಳಿಂದ ಇಲ್ಲೇ ನೆಲೆಸಿದ್ದಾರೆ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಈ ಮಧ್ಯೆ ಆಕೆಯ ವಿರುದ್ಧ ವೈಮನಸ್ಯ ಬೆಳೆಸಿಕೊಂಡ ಗಂಡ ಅಬ್ದುಲ್ ರಷೀದ್ (Abdul Rasheed) ದಿಢೀರನೆ ತಲಾಕ್ ಸಂದೇಶ (triple talaq message on WhatsApp) ರವಾನಿಸಿದ್ದಾನೆ. ತ್ರಿವಳಿ ತಲಾಖ್​ಗೆ ದೇಶಾದ್ಯಂತ ನಿಷೇಧವಿದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಷೀದ್ ಎಂಬಾತ ಇಸ್ಲಾಂ ನಿಯಮವನ್ನು ಪತ್ನಿಯ ಮೇಲೆ ಹೇರಲು ಯತ್ನಿಸಿದ್ದಾನೆ. ಅಬ್ದುಲ್ ರಷೀದ್ ಮೂಲತಃ ಕೇರಳದ ತ್ರಿಶೂರ್​ ನಿವಾಸಿ (Thrissur, Kerala)

ಇದನ್ನೂ ಓದಿ: ಕೋಲಾರ: ಅಂತರಗಂಗೆ ಬೆಟ್ಟದ ಮೇಲೆ ಪಾಕ್ ಧ್ವಜದ ಮಾದರಿ ಹಸಿರು ಬಣ್ಣ ಬಳಿದು 786 ಬರೆದ ಕಿಡಿಕೇಡಿಗಳು

ಮೊದಲ ಮಗುವಾದ ಬಳಿಕ ಮಿಸ್ರೀಯಾ ವಿದೇಶದಲ್ಲಿ ಪತಿ ಜೊತೆ ನೆಲೆಸಿದ್ದರು. ಎರಡನೇ ಮಗುವಿನ ಹೆರಿಗೆಗೆ ಬಂದಾಗ ಮನಸ್ತಾಪ ತಲೆದೋರಿದೆ ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಮೂರು ಬಾರಿ ತಲಾಖ್ ಸಂದೇಶ ಸಾಲದು ಅಂತಾ, ಮತ್ತೆ ಕರೆ ಮಾಡಿ ಪುನರುಚ್ಚರಿಸಿದ್ದ ಭೂಪ!

ಮಂಗಳೂರು: ವಿದೇಶದಲ್ಲಿ ಕುಳಿತು ಹೆಂಡತಿಗೆ ತ್ರಿಬಲ್ ತಲಾಖ್ ನೀಡಿದ ಪ್ರಕರಣ ಆರೋಪಿ ವಿರುದ್ಧ ‘ದಿ ಮುಸ್ಲಿಂ ವುಮೆನ್ ಆ್ಯಕ್ಟ್ 2019’ ರಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಸುಳ್ಯ ಠಾಣೆ ಪೊಲೀಸರು ಐಪಿಸಿ 504, 506 ಸೆಕ್ಷನ್ ನಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೂನ್ 5ರಂದೇ ತ್ರಿಬಲ್ ತಲಾಖ್ ಹೇಳಿದ್ದ ಆರೋಪಿ ಅಬ್ದುಲ್ ರಷೀದ್ ಫೋನ್ ಕರೆ ಹಾಗೂ ವಾಟ್ಸಪ್ ಮೂಲಕ ತಲಾಖ್ ಸಂದೇಶ ರವಾನೆ ಮಾಡಿದ್ದಾನೆ. ಸಾಲದು ಅಂತಾ ಆರೋಪಿ ಗಂಡ, ಜುಲೈ 7ರಂದು ತ್ರಿಬಲ್ ತಲಾಖ್ ನೀಡಿದರ ಬಗ್ಗೆ ಪುನರುಚ್ಚರಿಸಿದ್ದಾನೆ.

ನೀನು‌ ನಿನ್ನ ತಾಯಿಯೊಂದಿಗೆ ಜೀವಿಸು. ಇನ್ನು ನೀನು ನನಗೆ ಬೇಡ ಎಂದಿದ್ದಾನೆ ಆರೋಪಿ‌ ರಷೀದ್. ಸದ್ಯ ಸಂತ್ರಸ್ಥ ಮಹಿಳೆ ಮಿಸ್ರೀಯಾ ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:23 am, Wed, 20 September 23

ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ