ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಆಜಾನ್​​ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ -ಈಶ್ವರಪ್ಪ ಸ್ಪಷ್ಟನೆ

ಕೆ.ಎಸ್​.ಈಶ್ವರಪ್ಪ ತಮ್ಮ ವಿವಾದಾತ್ಮಕ ಹೇಳಿಕೆ‌ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಧಾರ್ಮಿಕ ನಿಂದನೆ ಮಾಡಿಲ್ಲ. ಆದ್ರೆ ಆಜಾನ್​​ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ ಎಂದರು.

ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಆಜಾನ್​​ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ -ಈಶ್ವರಪ್ಪ ಸ್ಪಷ್ಟನೆ
ಕೆಎಸ್ ಈಶ್ವರಪ್ಪ
Follow us
|

Updated on:Mar 13, 2023 | 12:03 PM

ಮಂಗಳೂರು: ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದು ಆಜಾನ್‌ ಬಗ್ಗೆ ಕೆ.ಎಸ್​.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ‌ ನೀಡಿದ್ದರು. ಈ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನಾನು ಧಾರ್ಮಿಕ ನಿಂದನೆ ಮಾಡಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ನಾನು ಧಾರ್ಮಿಕ ನಿಂದನೆ ಮಾಡಿಲ್ಲ. ಆದ್ರೆ ಆಜಾನ್​​ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ ಎಂದು ಮಂಗಳೂರು ನಗರದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯ ಸಂಕಲ್ಪ ಯಾತ್ರೆ ಸಂಬಂಧ ಈಶ್ವರಪ್ಪ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಅವರು ಆಜಾನ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದರು. ಅಲ್ಲಾನಿಗೆ ಕಿವಿ ಇದೆ ಇಲ್ವಾ ಅಂತಾ ನಾನು ಹೇಳಿದ್ದು ನಿಜ. ಇದು ಧಾರ್ಮಿಕ ನಿಂದನೆ ಮಾಡಿದಂತೆ ಆಗಿಲ್ಲ. ಅದನ್ನು ರಾಜ್ಯದ ಜನರು ತೀರ್ಮಾನ ಮಾಡ್ತಾರೆ. ಸುಪ್ರೀಂ ಕೋರ್ಟ್ ತೀರ್ಪು ಇದ್ರೂ ಜಾರಿ ಆಗಿಲ್ಲ ಎಂದರು.

ಇದನ್ನೂ ಓದಿ: ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಆಜಾನ್‌ ಬಗ್ಗೆ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್ ಪಕ್ಷ ನಂಬಿದರೆ ಮುಸಲ್ಮಾನರಿಗೆ ಉಳಿಗಾಲ ಇಲ್ಲ

ಇನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಮುಂದಿನ ಚುನಾವಣೆಯಲ್ಲಿ BJP ಪೂರ್ಣ ಬಹುಮತ ಪಡೆಯಲಿದೆ. ಭ್ರಷ್ಟಾಚಾರ ಆರೋಪ ಕಾಂಗ್ರೆಸ್ ಮಾಡ್ತಾ ಇದೆ. ಯಾಕಂದ್ರೆ ಅವರ ಮೇಲೆ ಭ್ರಷ್ಟಾಚಾರ ಆರೋಪ ಇದೆ. ಡಿಕೆ ಶಿವಕುಮಾರ್ ದೆಹಲಿ ಮನೆಯಲ್ಲಿ ಸಿಕ್ಕ ಹಣ ಎಷ್ಟು ಅಂತ ಜನ ನೋಡಿದ್ದಾರೆ. ತಿಹಾರ್ ಜೈಲಿಗೆ ಹೋಗಿ ಈಗ ಜಾಮೀನಿನಲ್ಲಿ ಇದ್ದಾರೆ. ಮತ್ತೆ ಯಾವಾಗ ಜೈಲಿಗೆ ಹೋಗ್ತಾರೆ ಗೊತ್ತಿಲ್ಲ. ಅರ್ಕಾವತಿ ಡಿ ನೋಟಿಫಿಕೇಷನ್ ಅವ್ಯವಹಾರ ಸಾಬೀತಾಗಿದೆ. 40% ವಿಚಾರವಾಗಿ ಒಂದೇ ಒಂದು ಕೇಸ್ ಕೂಡಾ ಹಾಕಿಲ್ಲ. ಕೆಂಪಣ್ಣ ಕಾಂಗ್ರೆಸ್ ಏಜೆಂಟ್ ಅಂತ ಕೇಸ್ ಹಾಕಲಾಗಿದೆ. ಈ ಚುನಾವಣೆಯಲ್ಲಿ ಎಲ್ಲವನ್ನೂ ಜನರೇ ತೀರ್ಮಾನ ಮಾಡ್ತಾರೆ. ಮಾಡಳ್ ಅವರು ಜೈಲಿನಿಂದ ಬಂದಾಗ ಮೆರವಣಿಗೆ ಮಾಡಿದ್ದು ತಪ್ಪು. ಹಿಂದೆ ಡಿಕೆಶಿ ತಿಹಾರ್ ಜೈಲಿನಿಂದ ಬಂದಾಗ ಮೆರವಣಿಗೆ ಮಾಡಿದ್ರು. ಚುನಾವಣೆಯಲ್ಲಿ ಏನು ಪರಿಣಾಮ ಬೀರೊತ್ತೆ ಅಂತ ನಾವು ಸಿದ್ದಾಂತ ಬಿಡಲಾರೆವು.

ಅಭಿವೃದ್ಧಿ ವಿಚಾರದ ಬಗ್ಗೆಯೂ ಸಭೆಯಲ್ಲಿ ಮಾತನಾಡಿದ್ದೇವೆ. ರಾಜಕೀಯ ಲಾಭ ಮಾತ್ರ ನಮ್ಮ ಉದ್ದೇಶ ಅಲ್ಲ. ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿದ್ದು ಲಾಭಕ್ಕೆ ಅಲ್ಲ. ಕೇವಲ ರಾಜಕಾರಣ ಮಾಡಲ್ಲ ಹಾಗಂತ ನಾವು ಸನ್ಯಾಸಿಗಳಲ್ಲ. ನಾನು ಶಾಸಕನಾಗಿ ಮುಸ್ಲಿಮರಿಗೆ ಸಹಾಯ ಮಾಡುತ್ತಿದ್ದೇನೆ. ನನ್ನ ಮನೆಗೆ ಹಲವು ಮುಸ್ಲಿಂ ಮಹಿಳೆಯರು ಬರ್ತಾರೆ. ಅವರಿಗೆ ಸಹಾಯ ಮಾಡುವುದರಲ್ಲಿ ಧರ್ಮ ನೋಡಿಲ್ಲ. ಕಾಂಗ್ರೆಸ್ ಪಕ್ಷ ನಂಬಿದ್ರೆ ಮುಸಲ್ಮಾನರಿಗೆ ಉಳಿಗಾಲ ಇಲ್ಲ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:03 pm, Mon, 13 March 23

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​