AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 48 ಗಂಟೆಗಳ ಕಾಲ ಈ ಜಿಲ್ಲೆಗಳ ಜನರೇ ಎಚ್ಚರ!: ಹವಾಮಾನ ಇಲಾಖೆಯಿಂದ ಹಠಾತ್ ‘ಯೆಲ್ಲೋ ಅಲರ್ಟ್’ ಘೋಷಣೆ

ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಒಳನಾಡು ಮತ್ತು ಬೆಂಗಳೂರಿಗೆ ಮೇ 30-31ರಂದು ಭಾರೀ ಮಳೆಯ ಮುನ್ಸೂಚನೆ ನೀಡಿ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಸಿಡಿಲು, ಬಿರುಗಾಳಿ ಸಹಿತ 64.5mm ನಿಂದ 115.5mm ಮಳೆಯಾಗುವ ಸಾಧ್ಯತೆಯಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗುವ ಆತಂಕವಿದೆ. ಮರಗಳು, ವಿದ್ಯುತ್ ಕಂಬಗಳ ಸಮೀಪ ನಿಲ್ಲದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಈ ಜಿಲ್ಲೆಗಳ ಜನರೇ ಎಚ್ಚರ!: ಹವಾಮಾನ ಇಲಾಖೆಯಿಂದ ಹಠಾತ್ ‘ಯೆಲ್ಲೋ ಅಲರ್ಟ್’ ಘೋಷಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 30, 2026 | 5:17 PM

Share

ಬೆಂಗಳೂರು, ಮೇ.30: ರಾಜ್ಯದ ಹವಾಮಾನದಲ್ಲಿ ಏಕಾಏಕಿ ಪ್ರಮುಖ ಬದಲಾವಣೆಯಾಗಿದ್ದು, ಇಂದಿನಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೇ 30 ಮತ್ತು ಮೇ 31 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ.

ಹವಾಮಾನ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಿಡಿಲು ಮತ್ತು ಬಿರುಗಾಳಿ ಸಹಿತ 64.5 ಮಿಲಿಮೀಟರ್‌ನಿಂದ 115.5 ಮಿಲಿಮೀಟರ್‌ ವರೆಗೆ ಭಾರೀ ಪ್ರಮಾಣದ ಮಳೆಯಾಗುವ ದಟ್ಟ ಸಾಧ್ಯತೆಗಳಿವೆ. ಹಠಾತ್ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಮತ್ತು ವಾಹನ ಸಂಚಾರಕ್ಕೆ ಅಡಚಣೆಯಾಗುವ ಆತಂಕ ಎದುರಾಗಿದೆ.

ಧಾರಾಕಾರ ಮಳೆಯ ಮುನ್ಸೂಚನೆ ಇರುವ ಕಾರಣ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಮಳೆ ಮತ್ತು ಗಾಳಿ ಇರುವ ಸಮಯದಲ್ಲಿ ಮರಗಳ ಕೆಳಗೆ ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ. ಹವಾಮಾನದ ಏರುಪೇರಿನ ಮೇಲೆ ನಿರಂತರ ನಿಗಾ ಇರಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಗೆ ಸಜ್ಜಾಗಿರಲು ಸ್ಥಳೀಯ ಆಡಳಿತಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಅವರಿಗೆ ಅಧಿಕಾರದ ಚಿಂತೆ ನಮಗೆ ಮಳೆಗೆ ಬೆಂಗಳೂರು ರಸ್ತೆಯ ಚಿಂತೆ; ಮಂತ್ರಿಗಿರಿಗಾಗಿ ಲಾಬಿ ಮತ್ತೆ ಮಾಡಿ ಮೊದಲು ನಮ್ಮ ಕಷ್ಟ ನೋಡಿ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಗಲಿಡೀ ಭಾಗಶಃ ಮೋಡ ಕವಿದ ವಾತಾವರಣ ಇದೆ. ರಾತ್ರಿಯ ವೇಳೆಗೆ ಆಕಾಶವು ಸಂಪೂರ್ಣವಾಗಿ ಕಪ್ಪು ಮೋಡಗಳಿಂದ ಆವೃತವಾಗಲಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ. ವೀಕೆಂಡ್ ಆರಂಭದ ಹೊತ್ತಿನಲ್ಲೇ ವರುಣನ ಆರ್ಭಟ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ನಗರದ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ಅತ್ಯಂತ ಅಪಾಯಕಾರಿ ಎನ್ನಬಹುದಾದ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಬಲವಾದ ಗಾಳಿ ಅಪ್ಪಳಿಸಲಿದೆ. ಬಿರುಗಾಳಿಯ ತೀವ್ರತೆಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳುವ ಆತಂಕ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ. ಸಂಜೆ ಕಚೇರಿ ಮುಗಿಸಿ ಮನೆಗೆ ಮರಳುವ ವಾಹನ ಸವಾರರು ಜಾಗರೂಕರಾಗಿರಬೇಕು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Sat, 30 May 26

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More