ಮದ್ಯದ ಅಮಲಿನಲ್ಲಿ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ; ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ(Belthangady) ತಾಲೂಕಿನ ಮುಂಡಾಜೆ ಸೀಟು ಬಳಿ ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬಳಿಕ ವಾಹನದ ಸಮೇತ ಪರಾರಿಯಾಗುತ್ತಿದ್ದವರನ್ನು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಸ್ಥಳೀಯರು ಹಿಡಿದಿದ್ದಾರೆ.

ಮದ್ಯದ ಅಮಲಿನಲ್ಲಿ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ; ಬಾಲಕಿ ಸಾವು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 27, 2024 | 6:46 PM

ದಕ್ಷಿಣ ಕನ್ನಡ, ಜು.27: ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ(Belthangady) ತಾಲೂಕಿನ ಮುಂಡಾಜೆ ಸೀಟು ಬಳಿ ನಡೆದಿದೆ. ಕಲ್ಮಂಜ ಗ್ರಾಮದ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಗಾನವಿ ಪುತ್ರಿಯಾದ ಅನರ್ಘ್ಯ ಮೃತ ಬಾಲಕಿ. ಇನ್ನು ಅಪಘಾತ ಬಳಿಕ ವಾಹನದ ಸಮೇತ ಪರಾರಿಯಾಗುತ್ತಿದ್ದವರನ್ನು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಸ್ಥಳೀಯರು ಹಿಡಿದಿದ್ದಾರೆ.

ಆರನೇ ತರಗತಿಯಲ್ಲಿ ಓದುತ್ತಿದ್ದ ಮೃತ ವಿದ್ಯಾರ್ಥಿ ಅನರ್ಘ್ಯ

ಇನ್ನು ಮೃತ ಅನರ್ಘ್ಯ, ಉಜಿರೆ ಎಸ್‌ಡಿಎಂ ಶಾಲೆಯ ಆರನೇ ತರಗತಿಯಲ್ಲಿ ಓದುತ್ತಿದ್ದರು. ಇಂದು ಬೈಕ್​ನಲ್ಲಿ ತೆರಳುತ್ತಿದ್ದಾಗ ಡಿಕ್ಕಿ ಹೊಡೆದ ಬೊಲೆರೊ 30 ಮೀಟರ್ ಎಳೆದುಕೊಂಡು ಹೋಗಿದೆ. ಪರಿಣಾಮ ಸ್ಥಳದಲ್ಲೇ ಅನರ್ಘ್ಯ ಕೊನೆಯುಸಿರೆಳೆದಿದ್ದಾಳೆ. ಅಪಘಾತ ಬಳಿಕ ಬೊಲೆರೊ ವಾಹನ ಸಮೇತ ಪರಾರಿ ಆಗ್ತಿದ್ದ ನಾಲ್ವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ಈ ವೇಳೆ ಓರ್ವ ಎಸ್ಕೇಫ್​ ಆಗಿದ್ದಾನೆ. ಬೊಲೆರೊ ವಾಹನದಲ್ಲಿ ತೆರಳುತ್ತಿದ್ದ ನಾಲ್ವರೂ ಮದ್ಯ ಸೇವಿಸಿದ್ದು, ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ ಒಂದು ಕೋಟಿ ಪರಿಹಾರ

ಟೋಲ್​ನಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ; ಚಾಲಕ ಸಾವು

ಧಾರವಾಡ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಧಾರವಾಡ ಹೊರವಲಯದ ನರೇಂದ್ರ ಟೋಲ್‌ನಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಲಾರಿ ಚಾಲಕ ಕೊನೆಯುಸಿರೆಳೆದಿದ್ದಾರೆ. ಜು. 25 ರ ಬೆಳಿಗ್ಗೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೀರಾಲಾಲ್ (30), ಮೃತ ಚಾಲಕ. ಟೋಲ್​​ನಲ್ಲಿ ನಿಂತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಚಾಲಕನಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Sat, 27 July 24

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್