AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ

ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಭೀಕರ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ
ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 07, 2024 | 3:48 PM

Share

ದಕ್ಷಿಣ ಕನ್ನಡ, ಸೆ.07: ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ.  ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರಿಗೆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ನವದಂಪತಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿ ಹಾರಿ ಕೆಎಸ್ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇನ್ನು ಇದೇ ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಾಸ್​ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ರಾಯಚೂರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು, ಕೈಕಾಲು ಛಿದ್ರಗೊಂಡ ಮಕ್ಕಳ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪೋಷಕರು

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಯಿಲ್ ಲೀಕ್​ನಿಂದ ಸರಣಿ ಅಪಘಾತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಯಿಲ್ ಲೀಕ್​ನಿಂದ ಸರಣಿ ಅಪಘಾತ ಸಂಭವಿಸಿದ್ದು, ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಿಂದ ಮರವಂತೆವರೆಗೆ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರವನ್ನು ಬಂದ್ ಮಾಡಿ, ಪೂರ್ವ ಭಾಗದ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಟ್ಯಾಂಕರ್ ನಿಂದ ಆಯಿಲ್ ಲೀಕಾದ ಹಿನ್ನೆಲೆಯಲ್ಲಿ ರಸ್ತೆ ಜಾರುತ್ತಿದ್ದು, ಬೈಕ್ ಸವಾರರ ಬೈಕ್ ಟೈಯರ್​ಗೆ ಆಯಿಲ್ ತಗುಲಿ ಜಾರಿ ಬೀಳುತ್ತಿದ್ದಾರೆ. ಇಂದು ಮುಂಜಾನೆ 7:30 ಸುಮಾರಿಗೆ ಟ್ಯಾಂಕರ್ ಒಂದರಿಂದ ಆಯಿಲ್ ಲೀಕ್ ಆಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕೋಟೇಶ್ವರದ ಬಳಿ ಅಗ್ನಿಶಾಮಕ ದಳದವರು ರೋಡ್ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Sat, 7 September 24

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?