AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲ್ಸ್ ​ ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ರೇಪ್, ಬೆತ್ತಲೆ ಫೋಟೋ ಇಟ್ಕೊಂಡು ಬ್ಲಾಕ್​ಮೇಲ್

ನಿನ್ನೆಯಷ್ಟೇ ಚಾಮರಾಜನಗರ ಜಿಲ್ಲೆಯ ಹನೂರು(Hanur)ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುತ್ರ ವೈದೇಶ್​ ಎಂಬಾತ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಇದೀಗ ಪೈಲ್ಸ್ ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ(Mangaluru) ಎ.ಜೆ.ಆಸ್ಪತ್ರೆಯಲ್ಲಿ ನಡೆದಿದೆ.

ಪೈಲ್ಸ್ ​ ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ರೇಪ್, ಬೆತ್ತಲೆ ಫೋಟೋ ಇಟ್ಕೊಂಡು ಬ್ಲಾಕ್​ಮೇಲ್
ಪ್ರಾತಿನಿಧಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 29, 2024 | 6:00 PM

Share

ದಕ್ಷಿಣ ಕನ್ನಡ, ಮೇ.29: ಪೈಲ್ಸ್  ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ(Mangaluru) ಎ.ಜೆ.ಆಸ್ಪತ್ರೆಯಲ್ಲಿ ನಡೆದಿದೆ. ಬಳಿಕ ಸಂತ್ರಸ್ಥೆಯ ನಗ್ನ ಫೋಟೋವನ್ನು ತೆಗೆದುಕೊಂಡು ಬ್ಲಾಕ್ ಮೇಲೆ ಮಾಡಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಈ ಹಿನ್ನಲೆ ಇದೀಗ ಕೇರಳ ಮೂಲದ ಆರೋಪಿ ಸಜಿತ್ ಎಂಬಾತನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ

ಇನ್ನು ಆರೋಪಿ, ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್​ನಲ್ಲಿ ಕೃತ್ಯವೆಸಗಿದ್ದು, ಪೈಲ್ಸ್ ​ಗೆ ಚಿಕಿತ್ಸೆ ಕೊಡಿಸುವುದಾಗಿ ಮೊದಲು ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಬಳಿಕ ನಗರದ ಮಹಾರಾಜ ಹೋಟೆಲ್, ಫಾದರ್ ಮುಲ್ಲರ್ಸ್ ಆಸ್ಪತ್ರೆ ಸೇರಿ ಹಲವೆಡೆ ಫೋಟೋ ಇಟ್ಟುಕೊಂಡು ಬ್ಲ್ಯಾಕ್​​ಮೇಲ್​ ಮಾಡಿ ಕೃತ್ಯ ಎಸಗಿದ್ದಾನೆ.

ಇದನ್ನೂ ಓದಿ:ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಗ್ರಾ.ಪಂಚಾಯತಿ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ಅತ್ಯಾಚಾರ

ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ

ಚಾಮರಾಜನಗರ: ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುತ್ರ ವೈದೇಶ್​ ಎಂಬಾತ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿತ್ತು. ‘ಗ್ರಾಮ ಪಂಚಾಯತಿ ವತಿಯಿಂದ ಮನೆ ಕಟ್ಟಿಸಿ ಕೊಡಬೇಕೆಂದರೆ ನನ್ನ ಜೊತೆ ಮಲಗಬೇಕೆಂದು ಆರೋಪಿ ಹೇಳಿದ್ದ. ಆತನ ಕಾಟ ತಾಳಲಾರದೆ ವೈದೇಶ್​ನನ್ನ ಸಂತ್ರಸ್ಥೆ ಮನೆಗೆ ಕರೆದಿದ್ದಾರೆ. ಈ ವೇಳೆ ಸಂತ್ರಸ್ಥೆ ಮನೆ ಒಳ ಹೊಕ್ಕಿ ಆಕೆಯನ್ನು ವಿವಸ್ತ್ರ ಗೊಳಿಸಿ, ಫೋಟೋ ಹಾಗೂ ವಿಡಿಯೋವನ್ನ ಮೊಬೈಲ್​ನಲ್ಲಿ ಸೆರೆ ಹಿಡಿದು, ಪದೇ ಪದೇ ಮಹಿಳೆಯನ್ನ ಮಂಚಕ್ಕೆ ಕರೆದು ಪೀಡಿಸುತ್ತಿದ್ದ. ಸಹಕರಿಸದಿದ್ರೆ ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್ ಮಾಡೋದಾಗಿ ಧಮ್ಕಿ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದ.

ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಮಾಡಿದ್ದಾನೆ. ಮನನೊಂದ ಮಹಿಳೆ ಘಟನೆ ಕುರಿತು ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರ ಬೆನ್ನಲ್ಲೇ ವೈದೇಶ್ ಹಾಗೂ ವೀಡಿಯೋ ವೈರಲ್ ಮಾಡಿದ ಬಸಮಣಿ , ಶಿವಮ್ಮ ಎಂಬುವರ ವಿರುದ್ದ ಐಪಿಸಿ ಸೆಕ್ಷನ್ 376, 384, 417, 509 ಮತ್ತು ಐಟಿ ಕಾಯ್ದೆ 66(ಇ), 67, 67(ಎ) ಅನ್ವಯ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಂಗಳೂರಿನಲ್ಲೂ ಇಂತಹುದೇ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ