AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲ್ಸ್ ​ ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ರೇಪ್, ಬೆತ್ತಲೆ ಫೋಟೋ ಇಟ್ಕೊಂಡು ಬ್ಲಾಕ್​ಮೇಲ್

ನಿನ್ನೆಯಷ್ಟೇ ಚಾಮರಾಜನಗರ ಜಿಲ್ಲೆಯ ಹನೂರು(Hanur)ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುತ್ರ ವೈದೇಶ್​ ಎಂಬಾತ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಇದೀಗ ಪೈಲ್ಸ್ ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ(Mangaluru) ಎ.ಜೆ.ಆಸ್ಪತ್ರೆಯಲ್ಲಿ ನಡೆದಿದೆ.

ಪೈಲ್ಸ್ ​ ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ರೇಪ್, ಬೆತ್ತಲೆ ಫೋಟೋ ಇಟ್ಕೊಂಡು ಬ್ಲಾಕ್​ಮೇಲ್
ಪ್ರಾತಿನಿಧಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 29, 2024 | 6:00 PM

Share

ದಕ್ಷಿಣ ಕನ್ನಡ, ಮೇ.29: ಪೈಲ್ಸ್  ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ(Mangaluru) ಎ.ಜೆ.ಆಸ್ಪತ್ರೆಯಲ್ಲಿ ನಡೆದಿದೆ. ಬಳಿಕ ಸಂತ್ರಸ್ಥೆಯ ನಗ್ನ ಫೋಟೋವನ್ನು ತೆಗೆದುಕೊಂಡು ಬ್ಲಾಕ್ ಮೇಲೆ ಮಾಡಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಈ ಹಿನ್ನಲೆ ಇದೀಗ ಕೇರಳ ಮೂಲದ ಆರೋಪಿ ಸಜಿತ್ ಎಂಬಾತನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ

ಇನ್ನು ಆರೋಪಿ, ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್​ನಲ್ಲಿ ಕೃತ್ಯವೆಸಗಿದ್ದು, ಪೈಲ್ಸ್ ​ಗೆ ಚಿಕಿತ್ಸೆ ಕೊಡಿಸುವುದಾಗಿ ಮೊದಲು ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಬಳಿಕ ನಗರದ ಮಹಾರಾಜ ಹೋಟೆಲ್, ಫಾದರ್ ಮುಲ್ಲರ್ಸ್ ಆಸ್ಪತ್ರೆ ಸೇರಿ ಹಲವೆಡೆ ಫೋಟೋ ಇಟ್ಟುಕೊಂಡು ಬ್ಲ್ಯಾಕ್​​ಮೇಲ್​ ಮಾಡಿ ಕೃತ್ಯ ಎಸಗಿದ್ದಾನೆ.

ಇದನ್ನೂ ಓದಿ:ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಗ್ರಾ.ಪಂಚಾಯತಿ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ಅತ್ಯಾಚಾರ

ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ

ಚಾಮರಾಜನಗರ: ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುತ್ರ ವೈದೇಶ್​ ಎಂಬಾತ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿತ್ತು. ‘ಗ್ರಾಮ ಪಂಚಾಯತಿ ವತಿಯಿಂದ ಮನೆ ಕಟ್ಟಿಸಿ ಕೊಡಬೇಕೆಂದರೆ ನನ್ನ ಜೊತೆ ಮಲಗಬೇಕೆಂದು ಆರೋಪಿ ಹೇಳಿದ್ದ. ಆತನ ಕಾಟ ತಾಳಲಾರದೆ ವೈದೇಶ್​ನನ್ನ ಸಂತ್ರಸ್ಥೆ ಮನೆಗೆ ಕರೆದಿದ್ದಾರೆ. ಈ ವೇಳೆ ಸಂತ್ರಸ್ಥೆ ಮನೆ ಒಳ ಹೊಕ್ಕಿ ಆಕೆಯನ್ನು ವಿವಸ್ತ್ರ ಗೊಳಿಸಿ, ಫೋಟೋ ಹಾಗೂ ವಿಡಿಯೋವನ್ನ ಮೊಬೈಲ್​ನಲ್ಲಿ ಸೆರೆ ಹಿಡಿದು, ಪದೇ ಪದೇ ಮಹಿಳೆಯನ್ನ ಮಂಚಕ್ಕೆ ಕರೆದು ಪೀಡಿಸುತ್ತಿದ್ದ. ಸಹಕರಿಸದಿದ್ರೆ ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್ ಮಾಡೋದಾಗಿ ಧಮ್ಕಿ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದ.

ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಮಾಡಿದ್ದಾನೆ. ಮನನೊಂದ ಮಹಿಳೆ ಘಟನೆ ಕುರಿತು ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರ ಬೆನ್ನಲ್ಲೇ ವೈದೇಶ್ ಹಾಗೂ ವೀಡಿಯೋ ವೈರಲ್ ಮಾಡಿದ ಬಸಮಣಿ , ಶಿವಮ್ಮ ಎಂಬುವರ ವಿರುದ್ದ ಐಪಿಸಿ ಸೆಕ್ಷನ್ 376, 384, 417, 509 ಮತ್ತು ಐಟಿ ಕಾಯ್ದೆ 66(ಇ), 67, 67(ಎ) ಅನ್ವಯ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಂಗಳೂರಿನಲ್ಲೂ ಇಂತಹುದೇ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?