ಮಂಗಳೂರು: ಧರ್ಮ ದ್ವೇಷದ ಭಾಷಣ ಆರೋಪ; ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲು

ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಿರುವ ಡಾ. ಅರುಣ್ ಉಳ್ಳಾಲ್ ವಿರುದ್ದ ಧರ್ಮ ದ್ವೇಷದ ಭಾಷಣ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಇನ್ನೊಂದು ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನಲೆ ಕೇಸ್​ ದಾಖಲಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಮಂಗಳೂರು: ಧರ್ಮ ದ್ವೇಷದ ಭಾಷಣ ಆರೋಪ; ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲು
ಅರುಣ್ ಉಳ್ಳಾಲ್
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2024 | 9:35 PM

ದಕ್ಷಿಣ ಕನ್ನಡ, ಅ.05: ಧರ್ಮ ದ್ವೇಷದ ಭಾಷಣ ಆರೋಪದಡಿ ಮಂಗಳೂರಿನ(Mangalore) ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು, ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಬೇರೆ ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನಲೆ ಕೇಸ್​ ದಾಖಲಾಗಿದೆ.

ಭಾಷಣದಲ್ಲಿ ಹೇಳಿದ್ದೇನು?

ಬಾಷಣ ಮಾಡುತ್ತಾ ‘ಹಿಂದುಗಳು ಹಿಂದು ಮಾಲಿಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು. ಹಿಂದು ಮಾಲಿಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಅವರು ಹೇಳಿದ್ದರು.

ಇದನ್ನೂ ಓದಿ:ಮೈಸೂರು ದಸರಾದಲ್ಲೂ ಧರ್ಮ ದಂಗಲ್: ಗುಂಬಜ್ ಮಾದರಿಯ ದೀಪಾಲಂಕಾರಕ್ಕೆ ಅಪಸ್ವರ

ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಿರುವ ಅರುಣ್ ಉಳ್ಳಾಲ್

ಈ ಹಿನ್ನಲೆ ಧರ್ಮ ದ್ವೇಷದ ಭಾಷಣ ಮಾಡಿದ ಅರೋಪದಡಿ ಡಾ. ಅರುಣ್ ಉಳ್ಳಾಲ್ ವಿರುದ್ದ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND 196, 351 (BNS), 2023 ರಂತೆ ಪ್ರಕರಣ ದಾಖಲಾಗಿದೆ. ಇನ್ನು ಅರುಣ್ ಉಳ್ಳಾಲ್ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಿದ್ದು, ಭಾಷಣದ ವಿಡಿಯೋ ವೈರಲ್ ಬೆನ್ನಲ್ಲೇ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಎಡಪಂಥೀಯರು ಹಾಗೂ ಅನ್ಯ ಧರ್ಮೀಯ ಸಂಘಟನೆಗಳಿಂದ ವಿರೋಧದ ಬೆನ್ನಲ್ಲೇ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us