ದಕ್ಷಿಣ ಕನ್ನಡ: ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ

ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರಿನಲ್ಲಿ ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಸಾಲ ಮರುಪಾವತಿಸದೆ ಹಿನ್ನಲೆ ಬ್ಯಾಂಕ್ ಮ್ಯಾನೇಜರ್‌ ತನ್ನ ತಂಡದೊಂದಿಗೆ ಸಾಲ ಪಡೆದುಕೊಂಡವರ ಮನೆಗೆ ಹೋದ ವೇಳೆ ಘಟನೆ ನಡೆದಿದ್ದು, ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ: ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ
ಎಸ್ಪಿ, ಬೆದರಿಕೆ ಹಾಕಿದ ಕೃಷ್ಣ ಕಿಶೋರ್, ಅಖಿಲೇಶ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 27, 2024 | 4:48 PM

ದಕ್ಷಿಣ ಕನ್ನಡ, ಸೆ.27: ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಕೃಷ್ಣ ಕಿಶೋರ್ ಹಾಗೂ ಅಖಿಲೇಶ್‌ ವಿರುದ್ಧ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪ ಕೇಳಿಬಂದಿದೆ. ಆರೋಪಿ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಎಂಬುವವರು ಎಸ್.ಬಿ.ಐ ಬ್ಯಾಂಕ್​ನಿಂದ 2 ಕೋಟಿ ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿಸದೆ ಹಿನ್ನಲೆ ಕೀರ್ತಿ ಅಖಿಲೇಶ್ ವಿರುದ್ಧ ಬ್ಯಾಂಕ್ ಮ್ಯಾನೇಜರ್ ಚಿನ್ಮಯ ಹಲವು ಬಾರಿ ವಕೀಲರ ಮೂಲಕ ನೋಟಿಸ್ ಕಳುಹಿಸಿದ್ದರು.

ಪಿಸ್ತೂಲ್ ತೋರಿಸಿ ಕೊಲೆ ಬೆದರಿಕೆ ಆರೋಪ

ಇಷ್ಟಾದರೂ ಅವರಿಂದ ಯಾವುದೇ ಸ್ಪಂದನೆ ಸಿಗದ ಹಿನ್ನಲೆ ಬ್ಯಾಂಕ್ ಮ್ಯಾನೇಜರ್‌ ತನ್ನ ತಂಡದೊಂದಿಗೆ ಕೀರ್ತಿ ಅಖಿಲೇಶ್ ಮನೆಗೆ ಭೇಟಿ ನೀಡಿದ್ದರು. ಬ್ಯಾಂಕ್ ಮಂದಿ ಮನೆಗೆ ಬಂದ ಕಾರಣದಿಂದ ಆಕ್ರೋಶಗೊಂಡ ಕೀರ್ತಿ ಪತಿ ಅಖಿಲೇಶ್ ಹಾಗೂ ಆತನ ತಂದೆ ಕೃಷ್ಣ ಕಿಶೋರ್​ ತಗಾದೆ(ಜಗಳ) ತೆಗದಿದ್ದು, ಈ ವೇಳೆ ಕೃಷ್ಣ ಕಿಶೋರ್ ಮನೆಯಲ್ಲಿದ್ದ ಪಿಸ್ತೂಲ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿದಾತನಿಗೆ ʼಕೈʼ ನಾಯಕಿ ಕೈಯಿಂದ ಸರಿಯಾಗಿ ಬಿತ್ತು ಗೂಸಾ

ಸರಗಳ್ಳತನ ಮಾಡ್ತಿದ್ದ ಕಳ್ಳನ ಬಂಧನ

ಬೆಂಗಳೂರು: ಸರಗಳನ್ನತನ ಮಾಡ್ತಿದ್ದವನನ್ನು ವೈಟ್ ಫೀಲ್ಡ್​ ಪೊಲೀಸರು ಬಂಧಿಸಿದ್ದಾರೆ. ಹಗದೂರು ರಸ್ತೆಯಲ್ಲಿ ಸೆ.14 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಕ್ಕರೆ ಖರೀದಿ ಮಾಡುವ ನೆಪದಲ್ಲಿ ಅಂಗಡಿಗೆ ಬಂದಿದ್ದ ಆರೋಪಿ, ಮಹಿಳೆ ಸಕ್ಕರೆ ತೂಕ ಮಾಡುವ ವೇಳೆ ಮಹಿಳೆಯ ಕತ್ತಿನಲ್ಲಿದ್ದ 48 ಗ್ರಾಂ ತೂಕದ ಸರ ಎಗರಿಸಿ ಪರಾರಿಯಾಗಿದ್ದ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದು, ಬಂಧಿತನಿಂದ 5 ಲಕ್ಷ ಮೌಲ್ಯದ 77 ಗ್ರಾಂನ 02 ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ 1 ಬೈಕ್​ ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ