ದಕ್ಷಿಣ ಕನ್ನಡ: ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ

ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರಿನಲ್ಲಿ ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಸಾಲ ಮರುಪಾವತಿಸದೆ ಹಿನ್ನಲೆ ಬ್ಯಾಂಕ್ ಮ್ಯಾನೇಜರ್‌ ತನ್ನ ತಂಡದೊಂದಿಗೆ ಸಾಲ ಪಡೆದುಕೊಂಡವರ ಮನೆಗೆ ಹೋದ ವೇಳೆ ಘಟನೆ ನಡೆದಿದ್ದು, ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ: ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ
ಎಸ್ಪಿ, ಬೆದರಿಕೆ ಹಾಕಿದ ಕೃಷ್ಣ ಕಿಶೋರ್, ಅಖಿಲೇಶ್
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 27, 2024 | 4:48 PM

ದಕ್ಷಿಣ ಕನ್ನಡ, ಸೆ.27: ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ
ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಕೃಷ್ಣ ಕಿಶೋರ್ ಹಾಗೂ ಅಖಿಲೇಶ್‌ ವಿರುದ್ಧ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪ ಕೇಳಿಬಂದಿದೆ. ಆರೋಪಿ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಎಂಬುವವರು ಎಸ್.ಬಿ.ಐ ಬ್ಯಾಂಕ್​ನಿಂದ 2 ಕೋಟಿ ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿಸದೆ ಹಿನ್ನಲೆ ಕೀರ್ತಿ ಅಖಿಲೇಶ್ ವಿರುದ್ಧ ಬ್ಯಾಂಕ್ ಮ್ಯಾನೇಜರ್ ಚಿನ್ಮಯ ಹಲವು ಬಾರಿ ವಕೀಲರ ಮೂಲಕ ನೋಟಿಸ್ ಕಳುಹಿಸಿದ್ದರು.

ಪಿಸ್ತೂಲ್ ತೋರಿಸಿ ಕೊಲೆ ಬೆದರಿಕೆ ಆರೋಪ

ಇಷ್ಟಾದರೂ ಅವರಿಂದ ಯಾವುದೇ ಸ್ಪಂದನೆ ಸಿಗದ ಹಿನ್ನಲೆ ಬ್ಯಾಂಕ್ ಮ್ಯಾನೇಜರ್‌ ತನ್ನ ತಂಡದೊಂದಿಗೆ ಕೀರ್ತಿ ಅಖಿಲೇಶ್ ಮನೆಗೆ ಭೇಟಿ ನೀಡಿದ್ದರು. ಬ್ಯಾಂಕ್ ಮಂದಿ ಮನೆಗೆ ಬಂದ ಕಾರಣದಿಂದ ಆಕ್ರೋಶಗೊಂಡ ಕೀರ್ತಿ ಪತಿ ಅಖಿಲೇಶ್ ಹಾಗೂ ಆತನ ತಂದೆ ಕೃಷ್ಣ ಕಿಶೋರ್​ ತಗಾದೆ(ಜಗಳ) ತೆಗದಿದ್ದು, ಈ ವೇಳೆ ಕೃಷ್ಣ ಕಿಶೋರ್ ಮನೆಯಲ್ಲಿದ್ದ ಪಿಸ್ತೂಲ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿದಾತನಿಗೆ ʼಕೈʼ ನಾಯಕಿ ಕೈಯಿಂದ ಸರಿಯಾಗಿ ಬಿತ್ತು ಗೂಸಾ

ಸರಗಳ್ಳತನ ಮಾಡ್ತಿದ್ದ ಕಳ್ಳನ ಬಂಧನ

ಬೆಂಗಳೂರು: ಸರಗಳನ್ನತನ ಮಾಡ್ತಿದ್ದವನನ್ನು ವೈಟ್ ಫೀಲ್ಡ್​ ಪೊಲೀಸರು ಬಂಧಿಸಿದ್ದಾರೆ. ಹಗದೂರು ರಸ್ತೆಯಲ್ಲಿ ಸೆ.14 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಕ್ಕರೆ ಖರೀದಿ ಮಾಡುವ ನೆಪದಲ್ಲಿ ಅಂಗಡಿಗೆ ಬಂದಿದ್ದ ಆರೋಪಿ, ಮಹಿಳೆ ಸಕ್ಕರೆ ತೂಕ ಮಾಡುವ ವೇಳೆ ಮಹಿಳೆಯ ಕತ್ತಿನಲ್ಲಿದ್ದ 48 ಗ್ರಾಂ ತೂಕದ ಸರ ಎಗರಿಸಿ ಪರಾರಿಯಾಗಿದ್ದ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದು, ಬಂಧಿತನಿಂದ 5 ಲಕ್ಷ ಮೌಲ್ಯದ 77 ಗ್ರಾಂನ 02 ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ 1 ಬೈಕ್​ ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us