AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023-24ರ ಅವಧಿಯಲ್ಲಿ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ 450 ಕೋಟಿ ರೂ. ಲಾಭ; ನಿರೀಕ್ಷೆ

2023-24ರ ಅವಧಿಯಲ್ಲಿ ನವಮಂಗಳೂರು ಬಂದರು ಪ್ರಾಧಿಕಾರವು 450 ಕೋಟಿ ರೂ. ಲಾಭ ಗಳಿಸುವ ನಿರೀಕ್ಷೆ ಇದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎ.ವಿ.ರಮಣ ಅವರು ಹೇಳಿದರು. ಬಂದರಿಗೆ ಬಂದು ಇಳಿದ ಪ್ರವಾಸಿಗರಿಗೆ ಹೆಲಿ (ಹೆಲಿಕಾಪ್ಟರ್) ಟ್ಯಾಕ್ಸಿ ಸೇವೆಯನ್ನು ಒದಗಿಸಲು ಪ್ರಾಧಿಕಾರ ರಾಜ್ಯ ಸರ್ಕಾರದೊಂದಿಗೆ ಕೆಲಸ ಮಾಡುತ್ತಿದೆ ಎಂದರು.

2023-24ರ ಅವಧಿಯಲ್ಲಿ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ 450 ಕೋಟಿ ರೂ. ಲಾಭ; ನಿರೀಕ್ಷೆ
ನವಮಂಗಳೂರು ಬಂದರು ಪ್ರಾಧಿಕಾರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 21, 2023 | 11:39 AM

Share

ನವದೆಹಲಿ: 2023-24ರ ಅವಧಿಯಲ್ಲಿ ನವಮಂಗಳೂರು ಬಂದರು ಪ್ರಾಧಿಕಾರವು (NMPA) 450 ಕೋಟಿ ರೂ. ಲಾಭ ಗಳಿಸುವ ನಿರೀಕ್ಷೆ ಇದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎ.ವಿ.ರಮಣ ಅವರು ಹೇಳಿದರು. ದೆಹಲಿಯಲ್ಲಿ ನಡೆದ ಮೂರು ದಿನಗಳ 2023 ರ ಜಾಗತಿಕ ಸಾಗರ ಭಾರತ ಶೃಂಗಸಭೆಯ ಕರ್ನಾಟಕ ಪ್ರದೇಶ ಪೂರ್ವಭಾವಿ ಕಾರ್ಯಕ್ರಮ (GMIS) ನಲ್ಲಿ ಮಾತನಾಡಿದ ಅವರು 2022-23ರಲ್ಲಿ ಪ್ರಾಧಿಕಾರಕ್ಕೆ 375 ಕೋಟಿ ರೂ. ನಿವ್ವಳ ಲಾಭ ಬಂದಿದೆ ಎಂದು ಹೇಳಿದರು.

ಇನ್ನು ಬಂದರಿಗೆ ಬಂದು ಇಳಿದ ಪ್ರವಾಸಿಗರಿಗೆ ಹೆಲಿ (ಹೆಲಿಕಾಪ್ಟರ್) ಟ್ಯಾಕ್ಸಿ ಸೇವೆಯನ್ನು ಒದಗಿಸಲು ಪ್ರಾಧಿಕಾರ ರಾಜ್ಯ ಸರ್ಕಾರದೊಂದಿಗೆ ಕೆಲಸ ಮಾಡುತ್ತಿದೆ. ಪ್ರವಾಸಿಗರನ್ನು ಇಲ್ಲಿಂದ ಟೇಕ್ ಆಫ್ ಮಾಡಿಕೊಂಡು ಹತ್ತಿರದ ಪ್ರವಾಸಿ ತಾಣಗಳಿಗೆ ಶೀಘ್ರದಲ್ಲೇ ತಲುಪಿಸಬಹುದು. ಅವರು ಪ್ರವಾಸಿ ತಾಣಗಳನ್ನು ಸುತ್ತಾಡಿಕೊಂಡು ಸಂಜೆಯ ವೇಳೆಗೆ ಹಡಗಿಗೆ ಮರಳಲು ಅನುಕೂಲವಾಗಲಿದೆ. ಪ್ರವಾಸಿಗರು, ಪ್ರವಾಸಿ ತಾಣಗಳಿಗೆ ಹೋಗುವುದಿಂದ ಸ್ಥಳೀಯ ಆರ್ಥಿಕತೆಯ ಬೆಳವಣಿಗೆಯಾಗುತ್ತದೆ ಎಂದು ಹೇಳಿದರು.

ಬಂದರಿಗೆ ರಸ್ತೆ ಸಂಪರ್ಕ ಸಮಸ್ಯೆಯಾಗಿದ್ದು, ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಬಿ.ಸಿ.ರೋಡ್ ಮತ್ತು ಹಾಸನ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಅಗಲಿಕರಣ ಕಾಮಗಾರಿ ಬಾಕಿ ಉಳಿದಿದೆ. 2024ರ ಫೆಬ್ರವರಿ ಒಳಗೆ ಇದು ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದರು.

ಇದನ್ನೂ ಓದಿ: ಮಂಗಳೂರು: ಪೊಲೀಸ್ ಹಾಗೂ RAW ಅಧಿಕಾರಿ ಎಂದು ಕಾಲೇಜಿನಲ್ಲಿ ಬಿಲ್ಡಪ್ ಕೊಡ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

ಕರ್ನಾಟಕದಲ್ಲಿ ಪ್ರವಾಸೋದ್ಯಮದ ಹೆಬ್ಬಾಗಿಲು ಮಂಗಳೂರು ಆಗಬೇಕು. ಮಂಗಳೂರನ್ನು ಬಂದರು, ಕಡಲ ಸಂಶೋಧನೆ ಮತ್ತು ಕೈಗಾರಿಕೆಗಳ ಶ್ರೇಷ್ಠ ಕೇಂದ್ರವಾಗಿ ಉತ್ತೇಜಿಸಬೇಕು. ನಗರವನ್ನು ಮಲ್ಟಿ ಮಾದರಿ ಲಾಜಿಸ್ಟಿಕ್ ಹಬ್ ಆಗಿ ಅಭಿವೃದ್ಧಿಪಡಿಸಲು ವಾತಾವರಣ ಸೃಷ್ಠಿಯಾಗಬೇಕೆಂದು ದಕ್ಷಿಣ ಕನ್ನಡ ಸಂಸದ ಮುಲ್ಲೈ ಮುಹಿಲನ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಎ.ರಾಘವೇಂದ್ರರಾವ್, ಸಿಐಐನ ಮಂಗಳೂರು ವಿಭಾಗದ ಅಧ್ಯಕ್ಷ ಪ್ರವೀಣ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Mon, 21 August 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್