AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಂದ ರಾಜ್ಯ ಸಾಹಿತ್ಯ ಅಧಿವೇಶನದ ಉದ್ಘಾಟನೆ

ಭಾರತದಲ್ಲಿ ಹಲವಾರು ಭಾಷೆಗಳಿದ್ದರೂ ಭಾರತ ಏಕರೂಪವಾಗಿದೆ. ಭಾಷೆಗಳ ಸಂಘಟನೆಗೆ ಸಾಹಿತ್ಯ ಬುನಾದಿಯಾಗಿದೆ. ಯುವಕರು ಸಾಹಿತ್ಯ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು. ಆದ್ದರಿಂದ ಸಮಗ್ರ ಜ್ಞಾನ ಚಿಂತನೆಯ ಒಂದು ಯುವ ಪೀಳಿಗೆ‌ಯ ಸೃಷ್ಟಿ ಸಾಧ್ಯ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಂದ ರಾಜ್ಯ ಸಾಹಿತ್ಯ ಅಧಿವೇಶನದ ಉದ್ಘಾಟನೆ
ರಾಜ್ಯ ಸಾಹಿತ್ಯ ಅಧಿವೇಶನದ ಉದ್ಘಾಟನೆ
TV9 Web
| Edited By: |

Updated on:Mar 19, 2022 | 7:24 PM

Share

ದಕ್ಷಿಣ ಕನ್ನಡ: ಅಖಿಲ ಭಾರತೀಯ ಸಾಹಿತ್ಯ ಪರಿಷತ್​ ಆಯೋಜಿಸಿರುವ ನುಡಿಸಾಮ್ರಾಜ್ಯದಲ್ಲಿ ಸ್ವರಾಜ್ಯ 3ನೆಯ ರಾಜ್ಯ ಅಧಿವೇಶನವನ್ನು ಇಂದು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು(D. Veerendra Heggade) ಉದ್ಘಾಟನೆ ಮಾಡಿದ್ದಾರೆ. ಉದ್ಘಾಟನೆ (Inauguration) ಬಳಿಕ ಮಾತನಾಡಿದ ಅವರು, ಭಾರತದಲ್ಲಿ ಹಲವಾರು ಭಾಷೆಗಳಿದ್ದರೂ ಭಾರತ ಏಕರೂಪವಾಗಿದೆ. ಭಾಷೆಗಳ ಸಂಘಟನೆಗೆ ಸಾಹಿತ್ಯ (Literature) ಬುನಾದಿಯಾಗಿದೆ. ಯುವಕರು ಸಾಹಿತ್ಯ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು. ಆದ್ದರಿಂದ ಸಮಗ್ರ ಜ್ಞಾನ ಚಿಂತನೆಯ ಒಂದು ಯುವ ಪೀಳಿಗೆ‌ಯ ಸೃಷ್ಟಿ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಅಧಿವೇಶನದ ಸರ್ವಾಧ್ಯಕ್ಷ ಡಾ. ನಾ. ಮೊಗಸಾಲೆ ಮಾತನಾಡಿದ್ದು, ಭಾಷೆ, ಭಾಷೆಗಳಿಗಿರುವ ವೈಶಿಷ್ಟ್ಯ ಮತ್ತು ವಿಸ್ತಾರ, ಧಾರ್ಮಿಕ ಸಾಮರಸ್ಯದಲ್ಲಿ ಕಾಣಬಹುದಾದ ಭಾರತೀಯತೆಯ ಸೊಬಗು, ರಾಷ್ಟ್ರೀಯತೆಯ ಪರಂಪರೆ ವಿಷಯಗಳ ಕುರಿತು ಸುವಿಸ್ತಾರ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಅಧಿವೇಶನ ಸಮಿತಿಯ ಕಾರ್ಯಾಧ್ಯಕ್ಷ ಎ. ಶಾಂತಾರಾಮ ಶೆಟ್ಟಿ, ಅಭಾಸಾಪ ರಾಜ್ಯ ಉಪಾಧ್ಯಕ್ಷ ಹರಿಪ್ರಕಾಶ್ ಕೋಣೆಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾ.ವಿಜಯಕುಮಾರ್ ನಿರ್ವಹಿಸಿದರು. ಅಧಿವೇಶನವು ಮಾರ್ಚ್ 19 ಮತ್ತು 20 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆಯುತ್ತಿದ್ದು, ಸಾಹಿತ್ಯಾಸಕ್ತರು ಆಗಮಿಸಬಹುದಾಗಿದೆ.

ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಕೆರೆ ಹೂಳೆತ್ತುವ ಕಾರ್ಯ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ: ಡಾ.ವೀರೇಂದ್ರ ಹೆಗ್ಗಡೆ

ಹುಬ್ಬಳ್ಳಿಯಲ್ಲಿ ನೂತನ ಎಫ್​.ಎಸ್​.ಎಲ್ ಲ್ಯಾಬ್ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

Published On - 7:23 pm, Sat, 19 March 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ