AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Service: ವಿಜಯಪುರ – ಮಂಗಳೂರು ರೈಲು ಸಂಚಾರ ಜೂನ್ 4ರ ವರೆಗೆ ರದ್ದು

ಹಾಸನ ಜಿಲ್ಲೆಯ ಕಡಗರವಳ್ಳಿ ಮತ್ತು ಯಡಕುಮೇರಿ ಮಧ್ಯೆ ರೈಲು ಹಳಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ - ಮಂಗಳೂರು ನಡುವೆ ಸಂಚರಿಸುವ ರೈಲು ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

Train Service: ವಿಜಯಪುರ - ಮಂಗಳೂರು ರೈಲು ಸಂಚಾರ ಜೂನ್ 4ರ ವರೆಗೆ ರದ್ದು
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 22, 2023 | 2:51 PM

Share

ಮಂಗಳೂರು: ಹಾಸನ ಜಿಲ್ಲೆಯ ಕಡಗರವಳ್ಳಿ ಮತ್ತು ಯಡಕುಮೇರಿ ಮಧ್ಯೆ ರೈಲು ಹಳಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ – ಮಂಗಳೂರು (Vijayapura – Mangaluru Train) ನಡುವೆ ಸಂಚರಿಸುವ ರೈಲು ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ರೈಲು ಸಂಚಾರ ರದ್ದುಗೊಳಿಸುವುದರಿಂದ ಪ್ರಯಾಣಿಕರಿಗೆ ಕೆಲ ದಿನಗಳ ಕಾಲ ತೊಂದರೆಯಾಗಲಿದೆ. ಇದರಿಂದ, ಗೋವಾದಲ್ಲಿ ಕುಲೈಮ್-ವಾಸ್ಕೋ ಡ ಗಾಮಾ ಸರಕು ಸಾಗಣೆ ರೈಲು ಸಂಚಾರದ ಮೇಲೂ ಪರಿಣಾಮವಾಗಲಿದೆ.

ಮಂಗಳೂರು – ವಿಜಯಪುರ ನಡುವಣ ದೈನಂದಿನ ರೈಲು ಸಂಚಾರ ಮೇ 21 ರಿಂದ ಜೂನ್ 4 ರವರೆಗೆ ರದ್ದಾಗಲಿದೆ. ಇದು ಗೋವಾದಲ್ಲಿ ಮರ್ಜೋಡ ಮತ್ತು ವಾಸ್ಕೋ ಡ ಗಾಮಾ ವಿಭಾಗದಲ್ಲಿ ಸರಕುಗಳ ಸಾಗಾಟದ ಮೇಲೂ ಪರಿಣಾಮ ಬಿರಲಿದೆ. ಕುಲೇಮ್ – ವಾಸ್ಕೋ ಡ ಗಾಮಾ ರೈಲು ಮೇ 22, 24, 26 ರಂದು ರದ್ದಾಗಲಿದೆ. ಈ ರೈಲು ಸಂಚಾರವನ್ನು ಮೇ 28, 30, ಜೂನ್ 1 ಮತ್ತು 3 ರಂದೂ ರದ್ದಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಅದೇ ರೀತಿ, ಮಂಗಳೂರು-ವಿಜಯಪುರ ರೈಲು (07378) ಮೇ 22ರಿಂದ ಜುಲೈ 5ರವರೆಗೆ ಮಂಗಳೂರು ಬದಲು ಹಾಸನದಿಂದ ಸಂಚರಿಸಲಿದೆ.

ಇದನ್ನೂ ಓದಿ: Video: ಕೋಲಾರ ಬಳಿ ಹಳಿ ತಪ್ಪಿದ ರೈಲು: ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಈ ಮಧ್ಯೆ, ಬೆಳಗಾವಿ- ಸಿಕಂದರಾಬಾದ್‌ ನಡುವೆ ಸಂಚರಿಸುವ ಡೈಲಿ ಎಕ್ಸ್​​​ಪ್ರೆಸ್ ವಿಶೇಷ ರೈಲಿನ (07335) ಕಾಜಿಪೇಟ- ಮಣುಗೂರು ನಿಲ್ದಾಣಗಳ ನಡುವಣ ಸಂಚಾರವನ್ನು ಮೇ 20ರಿಂದ ಜೂನ್‌ 6ರವರೆಗೆ ಭಾಗಶಃ ರದ್ದುಗೊಳಿಸಲಾಗಿದೆ. ಅದೇ ರೀತಿ, ಮಣುಗೂರು-ಬೆಳಗಾವಿ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲಿನ (07336) ಮಣುಗೂರು ಮತ್ತು ಕಾಜಿಪೇಟ ನಿಲ್ದಾಣಗಳ ನಡುವಣ ಸಂಚಾರವನ್ನು ಮೇ 21ರಿಂದ ಜೂನ್‌ 7ರವರೆಗೆ ಭಾಗಶಃ ರದ್ದುಗೊಳಿಸಲಾಗಿದೆ ಎಂದು ಎಂದು ರೈಲ್ವೆಯ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ