AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Service: ವಿಜಯಪುರ – ಮಂಗಳೂರು ರೈಲು ಸಂಚಾರ ಜೂನ್ 4ರ ವರೆಗೆ ರದ್ದು

ಹಾಸನ ಜಿಲ್ಲೆಯ ಕಡಗರವಳ್ಳಿ ಮತ್ತು ಯಡಕುಮೇರಿ ಮಧ್ಯೆ ರೈಲು ಹಳಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ - ಮಂಗಳೂರು ನಡುವೆ ಸಂಚರಿಸುವ ರೈಲು ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

Train Service: ವಿಜಯಪುರ - ಮಂಗಳೂರು ರೈಲು ಸಂಚಾರ ಜೂನ್ 4ರ ವರೆಗೆ ರದ್ದು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 22, 2023 | 2:51 PM

ಮಂಗಳೂರು: ಹಾಸನ ಜಿಲ್ಲೆಯ ಕಡಗರವಳ್ಳಿ ಮತ್ತು ಯಡಕುಮೇರಿ ಮಧ್ಯೆ ರೈಲು ಹಳಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ – ಮಂಗಳೂರು (Vijayapura – Mangaluru Train) ನಡುವೆ ಸಂಚರಿಸುವ ರೈಲು ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ರೈಲು ಸಂಚಾರ ರದ್ದುಗೊಳಿಸುವುದರಿಂದ ಪ್ರಯಾಣಿಕರಿಗೆ ಕೆಲ ದಿನಗಳ ಕಾಲ ತೊಂದರೆಯಾಗಲಿದೆ. ಇದರಿಂದ, ಗೋವಾದಲ್ಲಿ ಕುಲೈಮ್-ವಾಸ್ಕೋ ಡ ಗಾಮಾ ಸರಕು ಸಾಗಣೆ ರೈಲು ಸಂಚಾರದ ಮೇಲೂ ಪರಿಣಾಮವಾಗಲಿದೆ.

ಮಂಗಳೂರು – ವಿಜಯಪುರ ನಡುವಣ ದೈನಂದಿನ ರೈಲು ಸಂಚಾರ ಮೇ 21 ರಿಂದ ಜೂನ್ 4 ರವರೆಗೆ ರದ್ದಾಗಲಿದೆ. ಇದು ಗೋವಾದಲ್ಲಿ ಮರ್ಜೋಡ ಮತ್ತು ವಾಸ್ಕೋ ಡ ಗಾಮಾ ವಿಭಾಗದಲ್ಲಿ ಸರಕುಗಳ ಸಾಗಾಟದ ಮೇಲೂ ಪರಿಣಾಮ ಬಿರಲಿದೆ. ಕುಲೇಮ್ – ವಾಸ್ಕೋ ಡ ಗಾಮಾ ರೈಲು ಮೇ 22, 24, 26 ರಂದು ರದ್ದಾಗಲಿದೆ. ಈ ರೈಲು ಸಂಚಾರವನ್ನು ಮೇ 28, 30, ಜೂನ್ 1 ಮತ್ತು 3 ರಂದೂ ರದ್ದಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಅದೇ ರೀತಿ, ಮಂಗಳೂರು-ವಿಜಯಪುರ ರೈಲು (07378) ಮೇ 22ರಿಂದ ಜುಲೈ 5ರವರೆಗೆ ಮಂಗಳೂರು ಬದಲು ಹಾಸನದಿಂದ ಸಂಚರಿಸಲಿದೆ.

ಇದನ್ನೂ ಓದಿ: Video: ಕೋಲಾರ ಬಳಿ ಹಳಿ ತಪ್ಪಿದ ರೈಲು: ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಈ ಮಧ್ಯೆ, ಬೆಳಗಾವಿ- ಸಿಕಂದರಾಬಾದ್‌ ನಡುವೆ ಸಂಚರಿಸುವ ಡೈಲಿ ಎಕ್ಸ್​​​ಪ್ರೆಸ್ ವಿಶೇಷ ರೈಲಿನ (07335) ಕಾಜಿಪೇಟ- ಮಣುಗೂರು ನಿಲ್ದಾಣಗಳ ನಡುವಣ ಸಂಚಾರವನ್ನು ಮೇ 20ರಿಂದ ಜೂನ್‌ 6ರವರೆಗೆ ಭಾಗಶಃ ರದ್ದುಗೊಳಿಸಲಾಗಿದೆ. ಅದೇ ರೀತಿ, ಮಣುಗೂರು-ಬೆಳಗಾವಿ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲಿನ (07336) ಮಣುಗೂರು ಮತ್ತು ಕಾಜಿಪೇಟ ನಿಲ್ದಾಣಗಳ ನಡುವಣ ಸಂಚಾರವನ್ನು ಮೇ 21ರಿಂದ ಜೂನ್‌ 7ರವರೆಗೆ ಭಾಗಶಃ ರದ್ದುಗೊಳಿಸಲಾಗಿದೆ ಎಂದು ಎಂದು ರೈಲ್ವೆಯ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ