AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು-ಬೆಂಗಳೂರು ವಿಮಾನ ಸಂಚಾರ ಹೆಚ್ಚಳ: ಇಲ್ಲಿದೆ ಡೀಟೇಲ್ಸ್​

ಇಂಡಿಗೋ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಸೆಪ್ಟೆಂಬರ್ 7 ರಿಂದ 6ಇ 6858 ವಿಮಾನವನ್ನು ಮರು ಪರಿಚಯಿಸಲಿದೆ. ಈ ವಿಮಾನವು ಮಂಗಳೂರಿಗೆ ಬೆಳಿಗ್ಗೆ 8.35 ಕ್ಕೆ ಬರುತ್ತದೆ. ಮತ್ತು 6ಇ 5347 ವಿಮಾನ ಬೆಳಿಗ್ಗೆ 9.10 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಹೊರಡಲಿದೆ.

ಮಂಗಳೂರು-ಬೆಂಗಳೂರು ವಿಮಾನ ಸಂಚಾರ ಹೆಚ್ಚಳ: ಇಲ್ಲಿದೆ ಡೀಟೇಲ್ಸ್​
ಇಂಡಿಗೋ ವಿಮಾನ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 05, 2023 | 10:50 AM

ಮಂಗಳೂರು: ಸೆಪ್ಟೆಂಬರ್​ 7 ರಿಂದ ಪ್ರತಿದಿನ ಮಂಗಳೂರು (Mangalore) ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (International Airport) ರಾಜ್ಯ ರಾಜಧಾನಿ ಬೆಂಗಳೂರಿಗೆ (Bengaluru) ಸಂಚರಿಸುವ ವಿಮಾನಗಳ ಸಂಖ್ಯೆ ಹೆಚ್ಚಳವಾಗಲಿದೆ. ಶನಿವಾರ ಆರು ಮತ್ತು ವಾರದ ಇತರ ಆರು ದಿನಗಳಲ್ಲಿ ಪ್ರತಿದಿನ ಐದು ವಿಮಾನಗಳು ಮಂಗಳೂರು-ಬೆಂಗಳೂರು ನಡುವೆ ಸಂಚರಿಸಲಿವೆ. ಇಂಡಿಗೋ ವಿಮಾನಯಾನ ಸಂಸ್ಥೆ ಪ್ರಸ್ತುತ ನಾಲ್ಕು ವಿಮಾನಗಳನ್ನು ನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಅಕ್ಟೋಬರ್​ 28ರವರೆಗೆ ಹೆಚ್ಚುವರಿ ವಿಮಾನ ಸೇವೆಯನ್ನು ಒದಗಿಸಲು ತಿರ್ಮಾನಿಸಿದೆ.

ಇಂಡಿಗೋ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಸೆಪ್ಟೆಂಬರ್ 7 ರಿಂದ 6ಇ 6858 ವಿಮಾನವನ್ನು ಮರು ಪರಿಚಯಿಸಲಿದೆ. ಈ ವಿಮಾನವು ಮಂಗಳೂರಿಗೆ ಬೆಳಿಗ್ಗೆ 8.35 ಕ್ಕೆ ಬರುತ್ತದೆ. ಮತ್ತು 6ಇ 5347 ವಿಮಾನ ಬೆಳಿಗ್ಗೆ 9.10 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಹೊರಡಲಿದೆ. ಬೆಳಿಗ್ಗೆ 6.50ಕ್ಕೆ 6ಇ 0255 ಕ್ಕೆ ಬೆಂಗಳೂರಿನ ಮೂಲಕ ಪಾಟ್ನಾಗೆ ಹೊರಡುತ್ತದೆ. ಈ ಮೂಲಕ ಶನಿವಾರ ಮಂಗಳೂರಿನಿಂದ ಬೆಂಗಳೂರಿಗೆ ಬರುವ ಆರನೇ ವಿಮಾನ ಇದಾಗಿದೆ.

ಇದನ್ನೂ ಓದಿ: ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಇಂಡಿಗೋ ಮಂಗಳವಾರ, ಗುರುವಾರ, ಭಾನುವಾರ ಮತ್ತು ಶನಿವಾರದಂದು ತನ್ನ ಮಂಗಳೂರು-ಪುಣೆ ವಿಮಾನದ ಕಾರ್ಯಾಚರಣೆಯ ದಿನಗಳು ಮತ್ತು ಸಮಯವನ್ನು ರಿ ಶೆಡ್ಯುಲ್​ ಮಾಡಿದೆ. ವಿಮಾನ 6ಇ 294 ಮಂಗಳೂರಿಗೆ ಸಂಜೆ 5.50 ಕ್ಕೆ ಆಗಮಿಸುತ್ತದೆ. ಮಂಗಳವಾರ, ಗುರುವಾರ ಮತ್ತು ಭಾನುವಾರದಂದು ಸಂಜೆ 6.35 ಕ್ಕೆ 6ಇ 298 ವಿಮಾನ ಪುಣೆಗೆ ಹೊರಡಲಿದೆ. ಶನಿವಾರ, 6ಇ 359 ವಿಮಾನವು ಬೆಂಗಳೂರಿನಿಂದ ಸಂಜೆ 5.50 ಕ್ಕೆ ಮಂಗಳೂರಿಗೆ ಆಗಮಿಸುತ್ತದೆ. ನಂತರ 6ಇ 298 ವಿಮಾನದಲ್ಲಿ 6.35 ಕ್ಕೆ ಪುಣೆಗೆ ಹೊರಡಲಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನಗಳನ್ನು ಪ್ರಾರಂಭಿಸಲು ಇತರ ವಿಮಾನಯಾನ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಸಕಾರಾತ್ಮಕ ಭಾವನೆ ಇದೆ. ಕ್ಟೋಬರ್ 29 ರಿಂದ ಪ್ರಾರಂಭವಾಗುವ ಚಳಿಗಾಲದ ವೇಳಾಪಟ್ಟಿಯಲ್ಲಿ ಈ ಹೊಸ ವಿಮಾನಗಳು ಕಾರ್ಯರೂಪಕ್ಕೆ ಬರುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:49 am, Tue, 5 September 23

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ