AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Special Train: ಇಂದೋರ್ – ಮಂಗಳೂರು, ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು; ಇಲ್ಲಿದೆ ವಿವರ

ಇಂದೋರ್ ಹಾಗೂ ಮಂಗಳೂರು ನಡುವೆ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಮೇ 11ರಂದು ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ ಎಂದು ಭಾರತೀಯ ರೈಲ್ವೆ ಬುಧವಾರ ತಿಳಿಸಿದೆ.

Special Train: ಇಂದೋರ್ - ಮಂಗಳೂರು, ಮುರುಡೇಶ್ವರ - ಯಶವಂತಪುರ ಮಧ್ಯೆ ವಿಶೇಷ ರೈಲು; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 10, 2023 | 3:15 PM

Share

ಮಂಗಳೂರು: ಇಂದೋರ್ ಹಾಗೂ ಮಂಗಳೂರು ನಡುವೆ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಮೇ 11ರಂದು ವಿಶೇಷ ರೈಲು (Special Train) ಸೌಲಭ್ಯ ಕಲ್ಪಿಸಲಾಗಿದೆ ಎಂದು ಭಾರತೀಯ ರೈಲ್ವೆ ಬುಧವಾರ ತಿಳಿಸಿದೆ. 09302 ಸಂಖ್ಯೆಯ ರೈಲು ಗುರುವಾರ ಬೆಳಿಗ್ಗೆ 11.15ಕ್ಕೆ ಇಂದೋರ್ (Indore) ​ನಿಂದ ಹೊರಡಲಿದ್ದು, ಶುಕ್ರವಾರ ಸಂಜೆ 4.15ಕ್ಕೆ ಮಂಗಳೂರು (Mangalore) ತಲುಪಲಿದೆ. ಈ ರೈಲಿಗೆ ದೀವಸ್, ಉಜ್ಜೈನ್ ಜಂಕ್ಷನ್, ನಗ್ಡಾ ಜಂಕ್ಷನ್, ಸೂರತ್, ವಲ್ಸದ್​, ವಾಪಿ, ಪಾಲ್ಘರ್, ವಾಸವಿ ರಸ್ತೆ, ಪನ್ವೆಲ್, ರೋಹಾ, ರತ್ನಗಿರಿ, ರಾಜಪುರ ರಸ್ತೆ, ಕುಡಲ್, ತಿವಿಮ್, ಕರ್ಮಲಿ, ಮಡಗಾಂವ್ ಜಂಕ್ಷನ್, ಕಾರವಾರ ಹಾಗೂ ಉಡುಪಿ ಸ್ಟೇಷನ್​ಗಳಲ್ಲಿ ನಿಲುಗಡೆ ಇರಲಿದೆ.

ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು

ನೈಋತ್ಯ ರೈಲ್ವೆಯ ವಿಶೇಷ ಸಹಯೋಗದೊಂದಿಗೆ ಯಶವಂತಪುರ – ಮುರುಡೇಶ್ವರ ಹಾಗೂ ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು (ಸಂಖ್ಯೆ 06587/06588) ಸಂಚರಿಸಲಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ರೈಲು ಸಂಖ್ಯೆ 06588 ಮುರುಡೇಶ್ವರದಿಂದ ಬುಧವಾರ ಮಧ್ಯಾಹ್ನ 1.30ಕ್ಕೆ ಹೊರಟು ಗುರುವಾರ ಬೆಳಿಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ.

ಈ ರೈಲಿಗೆ ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೋಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರಸ್ತೆ, ಬೈಂದೂರು ಹಾಗೂ ಭಟ್ಕಳಗಳಲ್ಲಿ ನಿಲುಗಡೆ ಇರಲಿದೆ.

ಇದನ್ನೂ ಓದಿ: Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೂಡ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಆಯೋಜಿಸಿತ್ತು. ಈ ರೈಲುಗಳು ಈಗಾಗಲೇ ಪ್ರಯಾಣ ಬೆಳೆಸಿವೆ. ಇದೀಗ ಬೇಸಗೆ ರಜಾ ಅವಧಿಯ ನಿಮಿತ್ತ ಮಂಗಳೂರು – ಇಂದೋರ್ ಹಾಗೂ ಯಶವಂತಪುರ – ಮುರುಡೇಶ್ವರ ಮಧ್ಯೆ ವಿಶೇಷ ರೈಲು ಸೌಲಭ್ಯ ಕಲ್ಪಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್