AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Special Train: ಇಂದೋರ್ – ಮಂಗಳೂರು, ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು; ಇಲ್ಲಿದೆ ವಿವರ

ಇಂದೋರ್ ಹಾಗೂ ಮಂಗಳೂರು ನಡುವೆ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಮೇ 11ರಂದು ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ ಎಂದು ಭಾರತೀಯ ರೈಲ್ವೆ ಬುಧವಾರ ತಿಳಿಸಿದೆ.

Special Train: ಇಂದೋರ್ - ಮಂಗಳೂರು, ಮುರುಡೇಶ್ವರ - ಯಶವಂತಪುರ ಮಧ್ಯೆ ವಿಶೇಷ ರೈಲು; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 10, 2023 | 3:15 PM

Share

ಮಂಗಳೂರು: ಇಂದೋರ್ ಹಾಗೂ ಮಂಗಳೂರು ನಡುವೆ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಮೇ 11ರಂದು ವಿಶೇಷ ರೈಲು (Special Train) ಸೌಲಭ್ಯ ಕಲ್ಪಿಸಲಾಗಿದೆ ಎಂದು ಭಾರತೀಯ ರೈಲ್ವೆ ಬುಧವಾರ ತಿಳಿಸಿದೆ. 09302 ಸಂಖ್ಯೆಯ ರೈಲು ಗುರುವಾರ ಬೆಳಿಗ್ಗೆ 11.15ಕ್ಕೆ ಇಂದೋರ್ (Indore) ​ನಿಂದ ಹೊರಡಲಿದ್ದು, ಶುಕ್ರವಾರ ಸಂಜೆ 4.15ಕ್ಕೆ ಮಂಗಳೂರು (Mangalore) ತಲುಪಲಿದೆ. ಈ ರೈಲಿಗೆ ದೀವಸ್, ಉಜ್ಜೈನ್ ಜಂಕ್ಷನ್, ನಗ್ಡಾ ಜಂಕ್ಷನ್, ಸೂರತ್, ವಲ್ಸದ್​, ವಾಪಿ, ಪಾಲ್ಘರ್, ವಾಸವಿ ರಸ್ತೆ, ಪನ್ವೆಲ್, ರೋಹಾ, ರತ್ನಗಿರಿ, ರಾಜಪುರ ರಸ್ತೆ, ಕುಡಲ್, ತಿವಿಮ್, ಕರ್ಮಲಿ, ಮಡಗಾಂವ್ ಜಂಕ್ಷನ್, ಕಾರವಾರ ಹಾಗೂ ಉಡುಪಿ ಸ್ಟೇಷನ್​ಗಳಲ್ಲಿ ನಿಲುಗಡೆ ಇರಲಿದೆ.

ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು

ನೈಋತ್ಯ ರೈಲ್ವೆಯ ವಿಶೇಷ ಸಹಯೋಗದೊಂದಿಗೆ ಯಶವಂತಪುರ – ಮುರುಡೇಶ್ವರ ಹಾಗೂ ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು (ಸಂಖ್ಯೆ 06587/06588) ಸಂಚರಿಸಲಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ರೈಲು ಸಂಖ್ಯೆ 06588 ಮುರುಡೇಶ್ವರದಿಂದ ಬುಧವಾರ ಮಧ್ಯಾಹ್ನ 1.30ಕ್ಕೆ ಹೊರಟು ಗುರುವಾರ ಬೆಳಿಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ.

ಈ ರೈಲಿಗೆ ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೋಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರಸ್ತೆ, ಬೈಂದೂರು ಹಾಗೂ ಭಟ್ಕಳಗಳಲ್ಲಿ ನಿಲುಗಡೆ ಇರಲಿದೆ.

ಇದನ್ನೂ ಓದಿ: Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೂಡ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಆಯೋಜಿಸಿತ್ತು. ಈ ರೈಲುಗಳು ಈಗಾಗಲೇ ಪ್ರಯಾಣ ಬೆಳೆಸಿವೆ. ಇದೀಗ ಬೇಸಗೆ ರಜಾ ಅವಧಿಯ ನಿಮಿತ್ತ ಮಂಗಳೂರು – ಇಂದೋರ್ ಹಾಗೂ ಯಶವಂತಪುರ – ಮುರುಡೇಶ್ವರ ಮಧ್ಯೆ ವಿಶೇಷ ರೈಲು ಸೌಲಭ್ಯ ಕಲ್ಪಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್