AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟ ಸಿಗದಿದ್ರೂ ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ -ಸ್ಪೀಕರ್ ಯು.ಟಿ.ಖಾದರ್

ಊಟ ಸಿಗದಿದ್ರು ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ. ನ್ಯಾಯ ಕೊಡದೆ ತಮ್ಮ ಉದ್ದೇಶ ಅಂತಾ ಪೊಲೀಸರು ಕರ್ತವ್ಯ ನಿರ್ಹಹಿಸಬೇಕು. 90% ಒಳ್ಳೆಯವರಿದ್ದು, ಹತ್ತು ಪರ್ಸೆಂಟ್ ಕೆಟ್ವವರಿದ್ರೆ ಈ 90% ಪೊಲೀಸರಿಗೆ ಕೆಟ್ಟ ಹೆಸರು ಬರುತ್ತೆ. ಆದ್ರಿಂದ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸರಿಯಾಗಿ ಕೆಸಲ ಮಾಡಿ ಎಂದು ಯು.ಟಿ.ಖಾದರ್ ಹೇಳಿದರು.

ಊಟ ಸಿಗದಿದ್ರೂ ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ -ಸ್ಪೀಕರ್ ಯು.ಟಿ.ಖಾದರ್
ಯು.ಟಿ.ಖಾದರ್
TV9 Web
| Edited By: |

Updated on: Oct 29, 2023 | 2:25 PM

Share

ಮಂಗಳೂರು, ಅ.29: ಊಟ ಸಿಗದಿದ್ರೂ ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ. ಪೊಲೀಸರು ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಮಂಗಳೂರಿನ ಪಿಲಿಕುಳದಲ್ಲಿ ನಡೆಯುತ್ತಿರುವ ಪೊಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್ (UT Khader) ಹೇಳಿದರು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರಿಂದ ನೂತನ ಬಜ್ಪೆ ಪೊಲೀಸ್ ಠಾಣೆ, ಮಂಗಳೂರು ಗ್ರಾಮಾಂತರ ಠಾಣೆ, ಸಿಎಆರ್ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಶಾಸಕ ಭರತ್ ಶೆಟ್ಟಿ ಭಾಗಿ, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಉಪಸ್ಥಿತರಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಪೀಕರ್​​ ಯು.ಟಿ.ಖಾದರ್, ಊಟ ಸಿಗದಿದ್ರು ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ ಎಂದರು.

ನ್ಯಾಯ ಕೊಡದೆ ತಮ್ಮ ಉದ್ದೇಶ ಅಂತಾ ಪೊಲೀಸರು ಕರ್ತವ್ಯ ನಿರ್ಹಹಿಸಬೇಕು. 90% ಒಳ್ಳೆಯವರಿದ್ದು, ಹತ್ತು ಪರ್ಸೆಂಟ್ ಕೆಟ್ವವರಿದ್ರೆ ಈ 90% ಪೊಲೀಸರಿಗೆ ಕೆಟ್ಟ ಹೆಸರು ಬರುತ್ತೆ. ಆದ್ರಿಂದ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸರಿಯಾಗಿ ಕೆಸಲ ಮಾಡಿ. ಒಂದು ಠಾಣಾ ವ್ಯಾಪ್ತಿಯಲ್ಲಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಇದ್ರೆ. ಆ ಲಿಮಿಟ್ಸ್ ನಲ್ಲಿ ಯಾವುದೇ ತೊಂದರೆ ಆಗೋದಿಲ್ಲ ಎಂದು ಯು.ಟಿ.ಖಾದರ್ ಪೊಲೀಸರಿಗೆ ಪ್ರಾಮಾಣಿಕತೆಯ ಪಾಠ ಮಾಡಿದರು

ಇದನ್ನೂ ಓದಿ: ಬೆರಳು ಕೊಟ್ಟರೆ ಹಸ್ತ ನುಂಗಿದ್ರಾ? ಸಿಎಂ, ಸಚಿವರಿಗೆ ಮಾಹಿತಿ ನೀಡಿದೇ ವರ್ಗಾವಣೆ ಪಟ್ಟಿ ತಯಾರಿಸಿದ ಅಧಿಕಾರಿಗಳು

ರಾಜ್ಯದಲ್ಲಿ ಮೂರ್ನಾಲ್ಕು ತಿಂಗಳಿಂದ ಕ್ರೈಂ ರೇಟ್ ಕಡಿಮೆಯಾಗಿದೆ

ಇನ್ನು ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್, ರಾಜ್ಯದಲ್ಲಿ ಮೂರ್ನಾಲ್ಕು ತಿಂಗಳಿಂದ ಕ್ರೈಂ ರೇಟ್ ಕಡಿಮೆಯಾಗಿದೆ. ಆದರೆ ವೈಟ್ ಕಾಲರ್ ಕ್ರೈಂ ಆದ ಸೈಬರ್ ಕ್ರೈಂ ಹೆಚ್ಚಾಗಿದೆ. ಅದಕ್ಕಾಗಿ ಏನು ಕ್ರಮ ಆಗಬೇಕು ಅದನ್ನು ಮಾಡುತ್ತಿದ್ದೇವೆ. ದ.ಕನ್ನಡ ಜಿಲ್ಲೆಯಲ್ಲಿ ಕಮಿಷನರ್​, SPಗೆ ಟಾರ್ಗೆಟ್ ಕೊಟ್ಟಿದ್ದೇನೆ‌. ಕರಾವಳಿ ಭಾಗದಲ್ಲಿ ಶಾಂತಿ ಕಾಪಾಡಬೇಕು ಅಂತಾ ಹೇಳಿದ್ದೇನೆ. ಇಲ್ಲದಿದ್ರೆ ನಿಮ್ಮನ್ನು ಟಾರ್ಗೆಟ್ ಮಾಡುತ್ತೇನೆ ಅಂತಾ ಹೇಳಿದ್ದೇನೆ. ಠಾಣೆಗೆ ಬರುವವರ ಜೊತೆ ಸಮಾಧಾನವಾಗಿ ವ್ಯವಹರಿಸಬೇಕು. ನ್ಯಾಯ ಸಿಗುತ್ತೆ ಅಂತಾ ಅನ್ನಿಸಿ ಅವರು ವಾಪಸ್ ಹೋಗಬೇಕು. ರಾಜ್ಯದಲ್ಲಿ ಸೆಂಟ್ರಲ್ ಕಮಾಂಡ್ ಸೆಂಟರ್ ಸ್ಥಾಪಿಸುತ್ತಿದ್ದೇವೆ. 134 ಕೋಟಿ ವೆಚ್ಚದಲ್ಲಿ ಕಟ್ಟಡ ಮತ್ತು ಇನ್ಫಾಸ್ಟ್ರಕ್ಚರ್ ತಯಾರಾಗಿದೆ. ಇಡೀ ರಾಜ್ಯದ ಯಾವ ಪೊಲೀಸ್ ಠಾಣೆಯಲ್ಲಿ ಏನು ನಡೀತಾ ಇದೆ ಎಂಬ ಬಗ್ಗೆ ಬೆಂಗಳೂರಿನ ಒಂದೇ ಕಟ್ಟಡದಲ್ಲಿ ಗೊತ್ತಾಗಲಿದೆ. ಶೀಘ್ರದಲ್ಲೇ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದೇವೆ ಎಂದರು.

ಜಿ.ಪರಮೇಶ್ವರ್ ಎದುರಲ್ಲೇ ಸಿಎಂ ಆಗಿ ಬನ್ನಿ ಎಂದ ಶಾಸಕ

ಕಾಂಗ್ರೆಸ್​ನ ಮುಖ್ಯಮಂತ್ರಿ ಗಾದಿಯ ಬೆಂಕಿಗೆ ಬಿಜೆಪಿ ಶಾಸಕ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಗೃಹ ಸಚಿವರಿಗೆ, ನೀವು ಸಿಎಂ ಆಗಿ ಮಂಗಳೂರಿಗೆ ಬನ್ನಿ ಎಂದು ಭಾಷಣದ ವೇಳೆ ಶಾಸಕ ಭರತ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ಡಾ.ಜಿ.ಪರಮೇಶ್ವರ್ ನಕ್ಕು ಸುಮ್ಮನಾದರು.

ಕರ್ನಾಟಕದಲ್ಲಿ ಹೈ ಅಲರ್ಟ್​ಗೆ ಜಿ.ಪರಮೇಶ್ವರ್ ಸೂಚನೆ

ಕೇರಳದ ಎರ್ನಾಕುಲಮ್​ನಲ್ಲಿ ಸರಣಿ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು ಕರ್ನಾಟಕದಲ್ಲೂ ಹೈಅಲರ್ಟ್​ ಇರುವಂತೆ ಅಧಿಕಾರಿಗಳಿಗೆ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್  ಸೂಚನೆ ನೀಡಿದ್ದಾರೆ. ಎಲ್ಲೆಡೆ ಕಟ್ಟೆಚ್ಚರವಹಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?