AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 8 ರಿಂದ ಕುವೈತ್-ಮಂಗಳೂರು ನಡುವೆ ವಿಮಾನಯಾನ ಆರಂಭ, ಇಲ್ಲಿದೆ ವೇಳಾಪಟ್ಟಿ

Kuwait-Mangaluru Flight: ಏಪ್ರಿಲ್ 8ರಿಂದ ಮಂಗಳೂರು ಮತ್ತು ಕುವೈತ್ ನಡುವೆ ಜಜೀರಾ ಏರ್‌ವೇಸ್ ವಿಮಾನಯಾನ ಸೇವೆ ಆರಂಭಿಸಲಿದೆ. ದಮ್ಮಮ್ ಮೂಲಕ ಸಾಗುವ ಈ ವಿಮಾನವು ವಾರಕ್ಕೆ ಎರಡು ದಿನ ಲಭ್ಯವಿದ್ದು, ಕರಾವಳಿ ಭಾಗದ ಅನಿವಾಸಿ ಭಾರತೀಯರಿಗೆ ತವರು ನಗರಕ್ಕೆ ಬರಲು ಇದು ದೊಡ್ಡ ಅನುಕೂಲ ಮಾಡಿಕೊಡಲಿದೆ.

ಕರಾವಳಿ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 8 ರಿಂದ ಕುವೈತ್-ಮಂಗಳೂರು ನಡುವೆ ವಿಮಾನಯಾನ ಆರಂಭ, ಇಲ್ಲಿದೆ ವೇಳಾಪಟ್ಟಿ
ಜಜೀರಾ ಏರ್‌ವೇಸ್Image Credit source: jazeeraairways.com
ಗಣಪತಿ ಶರ್ಮಾ
|

Updated on: Apr 02, 2026 | 12:40 PM

Share

ಮಂಗಳೂರು, ಏಪ್ರಿಲ್ 2: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದ ಜನರಿಗೆ ಜಜೀರಾ ಏರ್‌ವೇಸ್ (Jazeera Airways) ಭರ್ಜರಿ ಸಿಹಿ ಸುದ್ದಿ ನೀಡಿದೆ. ಏಪ್ರಿಲ್ 8ರಿಂದ ಸೌದಿ ಅರೇಬಿಯಾದ ದಮ್ಮಮ್ ಮೂಲಕ ಕುವೈತ್ ಮತ್ತು ಮಂಗಳೂರು (Mangalore) ನಡುವೆ ವಾರಕ್ಕೆ ಎರಡು ಬಾರಿ ವಿಶೇಷ ವಿಮಾನಯಾನ ಸೇವೆ ಆರಂಭವಾಗಲಿದೆ.

ಭಾರತದ ನಾಲ್ಕು ನಗರಗಳಿಗೂ ಹೊಸ ವಿಮಾನಯಾನ ಸಂಪರ್ಕ

ಜಜೀರಾ ಏರ್‌ವೇಸ್ ಭಾರತದ ನಾಲ್ಕು ಪ್ರಮುಖ ನಗರಗಳಾದ ಮಂಗಳೂರು, ಕೋಝಿಕ್ಕೋಡ್ (ಕ್ಯಾಲಿಕಟ್), ತಿರುಚಿರಾಪಳ್ಳಿ ಮತ್ತು ಕಣ್ಣೂರಿಗೆ ದಮ್ಮಮ್ ವಿಮಾನ ನಿಲ್ದಾಣದ ಮೂಲಕ ಹೊಸ ವಿಮಾನ ಸೇವೆಗಳನ್ನು ಘೋಷಿಸಿದೆ. ಮಂಗಳೂರಿಗೆ ಏಪ್ರಿಲ್ 9ರಿಂದ ಪ್ರತಿ ಸೋಮವಾರ ಮತ್ತು ಗುರುವಾರ ವಿಮಾನಗಳು ಸಂಚರಿಸಲಿವೆ.

ಮಂಗಳೂರು ಕುವೈತ್ ವಿಮಾನ ಸಂಚಾರ ವೇಳಾಪಟ್ಟಿ

ವಿಮಾನ ಜೆ9 3417 ಕುವೈತ್‌ನಿಂದ ಸ್ಥಳೀಯ ಕಾಲಮಾನ ಬೆಳಿಗ್ಗೆ 8:40ಕ್ಕೆ ಹೊರಟು, ದಮ್ಮಮ್ ಮೂಲಕ ಸಂಜೆ 4:10ಕ್ಕೆ ಮಂಗಳೂರು ತಲುಪಲಿದೆ. ಹಿಂದಿರುಗುವ ವಿಮಾನ ಜೆ9 3418 ಮಂಗಳೂರಿನಿಂದ ಸಂಜೆ 4:55ಕ್ಕೆ ಹೊರಟು, ಸ್ಥಳೀಯ ಕಾಲಮಾನ ರಾತ್ರಿ 7:40ಕ್ಕೆ ಕುವೈತ್ ತಲುಪಲಿದೆ. ಇಡೀ ಪ್ರಯಾಣದ ಅವಧಿ ಸುಮಾರು 6 ಗಂಟೆಗಳು ಇಲಿದೆ.

12 ನಗರಗಳಿಗೆ ವಿಮಾನಯಾನ ವಿಸ್ತರಣೆ

ಕೋವಿಡ್ ಸಮಯದಲ್ಲಿ ಮಂಗಳೂರಿಗೆ ವಿಶೇಷ ವಿಮಾನಗಳ ಸೇವೆ ಒದಗಿಸಿದ್ದ ಜಜೀರಾ ಏರ್‌ವೇಸ್, ಈಗ ಮಧ್ಯಪ್ರಾಚ್ಯದ ಪ್ರಸ್ತುತ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಸೇವೆ ಪುನರಾರಂಭಿಸಲು ನಿರ್ಧರಿಸಿದೆ. ಈ ಹೊಸ ಮಾರ್ಗಗಳ ಸೇರ್ಪಡೆಯೊಂದಿಗೆ ಭಾರತದಲ್ಲಿ ಜಜೀರಾ ಏರ್‌ವೇಸ್‌ನ ಜಾಲವು ಒಟ್ಟು 12 ನಗರಗಳಿಗೆ ವಿಸ್ತರಿಸಿದಂತಾಗಿದೆ. ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್, ಕೊಚ್ಚಿ, ಮುಂಬೈ ಮತ್ತು ತಿರುವನಂತಪುರಂಗೆ ಈಗಾಗಲೇ ಸಂಸ್ಥೆಯು ವಿಮಾನಯಾನ ಸೇವೆ ಒದಗಿಸುತ್ತಿದೆ.

ಇದನ್ನೂ ಓದಿ: ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ದಕ್ಷಿಣ ಭಾರತದ ಪ್ರಯಾಣಿಕರಿಗೆ ತಮ್ಮ ತವರು ನಗರಗಳಿಗೆ ಹತ್ತಿರವಾಗಲು ಈ ವಿಮಾನಯಾನ ಸೇವೆ ವಿಸ್ತರಣೆ ಸಹಕಾರಿಯಾಗಲಿದೆ ಎಂದು ಜಜೀರಾ ಏರ್‌ವೇಸ್ ಸಿಇಒ ಭರತನ್ ಪಶುಪತಿ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us