AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕಾಣಿಕೆ ಹುಂಡಿ ಎಣಿಕೆ ವೇಳೆ ಟ್ರಸ್ಟಿಯಿಂದಲೇ ಕಳ್ಳತನ ಆರೋಪ; ಕದ್ದಿಲ್ಲ, ಆಣೆ ಪ್ರಮಾಣಕ್ಕೂ ಸಿದ್ಧ ಎಂದು ಆಡಿಯೋ ರಿಲೀಸ್

ಕದ್ರಿ ಮಂಜುನಾಥ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯೆ ವಿರುದ್ಧ ತೇಜ್‌ಪಾಲ್ ಸುವರ್ಣ ಎಂಬವರು ಸಿಸಿಟಿವಿ ದೃಶ್ಯ ಸಮೇತ ದೂರು ನೀಡಿದ್ದರು. ಧಾರ್ಮಿಕ ದತ್ತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರು, ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿತ್ತು.

ಮಂಗಳೂರು: ಕಾಣಿಕೆ ಹುಂಡಿ ಎಣಿಕೆ ವೇಳೆ ಟ್ರಸ್ಟಿಯಿಂದಲೇ ಕಳ್ಳತನ ಆರೋಪ; ಕದ್ದಿಲ್ಲ, ಆಣೆ ಪ್ರಮಾಣಕ್ಕೂ ಸಿದ್ಧ ಎಂದು ಆಡಿಯೋ ರಿಲೀಸ್
TV9 Web
| Updated By: ganapathi bhat|

Updated on: Mar 23, 2022 | 11:40 AM

Share

ಮಂಗಳೂರು: ಹುಂಡಿ ಕಾಣಿಕೆ ಎಣಿಕೆ ವೇಳೆ ಕಳ್ಳತನ ಆರೋಪ ವಿಚಾರಕ್ಕೆ ಸಂಬಂಧಿಸಿ ಅರೋಪ ಹೊತ್ತ ನಿವೇದಿತಾ ಶೆಟ್ಟಿಯಿಂದ ಆಡಿಯೋ ಬಿಡುಗಡೆ ಮಾಡಲಾಗಿದೆ. ನಾನು ಕಳ್ಳತನ ಮಾಡಿಲ್ಲ ಎಂದು ಆಣೆ ಪ್ರಮಾಣ ಮಾಡುತ್ತೇನೆ. ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ನಾನು ಆಣೆ ಮಾಡುತ್ತೇನೆ. ಆರೋಪಿಸಿದ ಪುರುಷೋತ್ತಮ್​ಗೆ ಆಣೆ ಪ್ರಮಾಣಕ್ಕೆ ಆಹ್ವಾನಿಸುತ್ತೇನೆ. ಇಬ್ಬರು ಒಟ್ಟಿಗೆ ನಿಂತು ಆಣೆ ಪ್ರಮಾಣ ಮಾಡೋಣ ಎಂದು ಹೇಳಿದ್ದಾರೆ. ಅವರು ಹೇಳಿಕೆ ನೀಡಿರುವ ಆಡಿಯೋ ಬಿಡುಗಡೆ ಮಾಡಲಾಗಿದೆ. ಹುಂಡಿ ಕಾಣಿಕೆ ಎಣಿಕೆ ವೇಳೆ ನಾನು ಕಳ್ಳತನ ಮಾಡಿಲ್ಲ. ಸೀರೆ ಸರಿಮಾಡಿಕೊಳ್ಳುವ ದೃಶ್ಯವನ್ನಿಟ್ಟುಕೊಂಡ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮಂಗಳೂರಿನ ಕದ್ರಿ ಮಂಜುನಾಥ ದೇಗುಲದಲ್ಲಿ ನಡೆದಿದ್ದ ಹುಂಡಿ ಎಣಿಕೆ ಕಾರ್ಯದಲ್ಲಿ ಘಟನೆ ನಡೆದಿದೆ. ಫೆಬ್ರವರಿ 24ರಂದು ಹುಂಡಿ ಎಣಿಕಾ ಕಾರ್ಯ ನಡೆದಿತ್ತು. ಮಂಗಳೂರಿನ ಕದ್ರಿ ಮಂಜುನಾಥ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ ವೇಳೆ ಕಳ್ಳತನ ಮಾಡಿದ ಆರೋಪದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಿವೇದಿತಾ ಶೆಟ್ಟಿ ವಿರುದ್ಧ ದೂರು ನೀಡಲಾಗಿತ್ತು. ಕದ್ರಿ ಮಂಜುನಾಥ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯೆ ವಿರುದ್ಧ ತೇಜ್‌ಪಾಲ್ ಸುವರ್ಣ ಎಂಬವರು ಸಿಸಿಟಿವಿ ದೃಶ್ಯ ಸಮೇತ ದೂರು ನೀಡಿದ್ದರು. ಧಾರ್ಮಿಕ ದತ್ತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರು, ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿತ್ತು. ಫೆಬ್ರವರಿ 24ರಂದು ನಡೆದಿದ್ದ ಹುಂಡಿ ಎಣಿಕಾ ಕಾರ್ಯದಲ್ಲಿ ಘಟನೆ ನಡೆದಿತ್ತು.

ರಾಮನಗರ: ಕಳಪೆ ಕಾಮಗಾರಿ ಬಗ್ಗೆ ದೂರು ನೀಡಿದ್ದಕ್ಕೆ ಹಲ್ಲೆ ಆರೋಪ

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಗ್ರಾಮ ಪಂಚಾಯತ್ ಸದಸ್ಯ ರಘು ವಿರುದ್ಧ ಕಳಪೆ ಕಾಮಗಾರಿ ಬಗ್ಗೆ ದೂರು ನೀಡಿದ್ದಕ್ಕೆ ಹಲ್ಲೆ ಆರೋಪ ಕೇಳಿಬಂದಿದೆ. ಹನುಮಂತೇಗೌಡ ಎಂಬವರು ಆರೋಪ ಮಾಡಿದ್ದಾರೆ. ಸಿಸಿ ರಸ್ತೆ ಕಾಮಗಾರಿ ಬಗ್ಗೆ ನಿರ್ಮಿತಿ ಕೇಂದ್ರಕ್ಕೆ ದೂರು ನೀಡಲಾಗಿತ್ತು. ಹನುಮಂತೇಗೌಡ ನಿರ್ಮಿತಿ ಕೇಂದ್ರಕ್ಕೆ ದೂರು ನೀಡಿದ್ದರು. ಇದರಿಂದ ಕುಪಿತಗೊಂಡು ರಘು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಹನುಮಂತೇಗೌಡಗೆ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಾಸನ: ಚಲಿಸುತ್ತಿದ್ದ ಬೈಕ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಚಲಿಸುತ್ತಿದ್ದ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ – ಬೇಲೂರು ರಸ್ತೆಯ ಕಡದರವಳ್ಳಿ ಕ್ರಾಸ್ ಬಳಿ ನಡೆದಿದೆ. ನೋಡ ನೋಡುತ್ತಿದ್ದಂತೆ ಕೆಟಿಎಂ ಬೈಕ್ ಹೊತ್ತಿ ಉರಿದಿದೆ. ಬೆಂಕಿಯಲ್ಲಿ ಬೆಂಗಳೂರು ಮೂಲದ ಯುವಕನ ಬೈಕ್ ಸಂಪೂರ್ಣ ಸುಟ್ಟುಹೋಗಿದೆ. ಬೆಂಗಳೂರಿನಿಂದ ಬೇಲೂರಿನ ಕಡೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ಚಲಿಸುತ್ತಿದ್ದ ಬೈಕ್ ನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬೈಕ್ ನಿಲ್ಲಿಸಿ ಬೈಕ್ ಸವಾರ ದೂರ ಸರಿದಿದ್ದಾರೆ. ಬೈಕ್ ಸವಾರನ ಕಣ್ಣೆದುರಿಗೇ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ವಿಜಯಪುರ: ಕುಡಿಯೋ ನೀರಿಗಾಗಿ ಮಹಿಳೆಯರ ಪ್ರತಿಭಟನೆ

ಕುಡಿಯುವ ನೀರಿಗಾಗಿ ಮಹಿಳೆಯರು ಪ್ರತಿಭಟನೆ ಮಾಡಿದ ಘಟನೆ ವಿಜಯಪುರ ನಗರದ ತೇಕಡೆ ಗಲ್ಲಿಯಲ್ಲಿ ನಡೆದಿದೆ. ರಸ್ತೆಯ ಮೇಲೆ ಖಾಲಿ ಕೊಡಗಳನಿಟ್ಟು, ಕಟ್ಟಿಗೆ ಹಾಕಿ ರಸ್ತೆ ತಡೆ‌ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಕಳೆದ 10 ದಿನದಿಂದ ನೀರು ಬಿಟ್ಟಿಲ್ಲವೆಂದು ಮಹಿಳೆಯರ ಆಕ್ರೋಶ ಕೇಳಿಬಂದಿದೆ. ಅಧಿಕಾರಿಗಳು ಆಗಮಿಸಿ ಸಮಸ್ಯೆ ಬಗೆ ಹರಿಸಬೇಕೆಂದು ಒತ್ತಾಯ ಮಾಡಲಾಗಿದೆ.

ಇದನ್ನೂ ಓದಿ: ಕನಕಾಚಲಪತಿ ಗರುಡೋತ್ಸವ, ಶಿವಮೊಗ್ಗ ಕೋಟೆ ಮಾರಿಕಾಂಬ, ಮಂಗಳೂರು ಬಪ್ಪನಾಡು ಜಾತ್ರೆ ಆರಂಭ

ಇದನ್ನೂ ಓದಿ: ಅಜ್ಮೀರ್ಗೆ ಹೋಗ್ತೀನಿ ಅಂತಾ ದುಬೈಗೆ ಹಾರಿದ್ದ ಮಂಗಳೂರು ಇನ್ಸ್ಪೆಕ್ಟರ್ ಷರೀಫ್ ಸೀದಾ ಮನೆಗೆ: ಕಮಿಷನರ್ ಶಶಿಕುಮಾರ್ ಆದೇಶ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!