AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್​​: 16 ಇನ್ಸ್ಟಾಗ್ರಾಮ್ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಸಂದೇಶಗಳು ಇನ್ಸ್ಟಾಗ್ರಾಮ್​​ನಲ್ಲಿ ಹರಿದಾಡುತ್ತಿವೆ. ಆರೋಪಿ ಭರತ್ ಕುಮ್ಡೇಲ್​ಗೆ ಬೆದರಿಕೆ ಹಾಕಿರುವ 16 ಇನ್ಸ್ಟಾಗ್ರಾಮಮ್​​ ಖಾತೆಗಳ ವಿರುದ್ಧ ಮಂಗಳೂರು ಪೊಲೀಸರು FIR ದಾಖಲಿಸಿದ್ದಾರೆ. ಇಂತಹ ಪ್ರಚೋದನಕಾರಿ ಪೋಸ್ಟ್‌ಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್​​: 16 ಇನ್ಸ್ಟಾಗ್ರಾಮ್ ಖಾತೆ ವಿರುದ್ಧ FIR
ಇನ್ಸ್ಟಾಗ್ರಾಮ್ ಪೋಸ್ಟ್​​ಗಳು
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Dec 09, 2025 | 4:13 PM

Share

ಮಂಗಳೂರು, ಡಿಸೆಂಬರ್​ 09: ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಈ ಮೂಲಕ ಎಚ್ಚರಿಕೆ ನೀಡಲಾಗಿದೆ.

16 ಇನ್ಸ್ಟಾಗ್ರಾಮ್​​ ಖಾತೆಗಳ ಮೇಲೆ ಎಫ್​ಐಆರ್​

Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್​​ ಪೋಸ್ಟ್​ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್​​ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್​​ ಖಾತೆಗಳ ವಿರುದ್ಧ ಎಫ್​ಐಆರ್​ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್​​ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.

ಇದನ್ನೂ ಓದಿ: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ಭರತ್ ಕುಮ್ಡೇಲು ಶರಣಾಗತಿ

ಈ ಹಿಂದೆಯೂ ಭರತ್ ಕುಮ್ಡೇಲ್​​ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್‌ ಕುಮ್ಡೇಲ್​​​ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್​​ ಮಾಡಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್