AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್​​: 16 ಇನ್ಸ್ಟಾಗ್ರಾಮ್ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಸಂದೇಶಗಳು ಇನ್ಸ್ಟಾಗ್ರಾಮ್​​ನಲ್ಲಿ ಹರಿದಾಡುತ್ತಿವೆ. ಆರೋಪಿ ಭರತ್ ಕುಮ್ಡೇಲ್​ಗೆ ಬೆದರಿಕೆ ಹಾಕಿರುವ 16 ಇನ್ಸ್ಟಾಗ್ರಾಮಮ್​​ ಖಾತೆಗಳ ವಿರುದ್ಧ ಮಂಗಳೂರು ಪೊಲೀಸರು FIR ದಾಖಲಿಸಿದ್ದಾರೆ. ಇಂತಹ ಪ್ರಚೋದನಕಾರಿ ಪೋಸ್ಟ್‌ಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್​​: 16 ಇನ್ಸ್ಟಾಗ್ರಾಮ್ ಖಾತೆ ವಿರುದ್ಧ FIR
ಇನ್ಸ್ಟಾಗ್ರಾಮ್ ಪೋಸ್ಟ್​​ಗಳು
ಅಶೋಕ್​ ಪೂಜಾರಿ
| Edited By: |

Updated on: Dec 09, 2025 | 4:13 PM

Share

ಮಂಗಳೂರು, ಡಿಸೆಂಬರ್​ 09: ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಈ ಮೂಲಕ ಎಚ್ಚರಿಕೆ ನೀಡಲಾಗಿದೆ.

16 ಇನ್ಸ್ಟಾಗ್ರಾಮ್​​ ಖಾತೆಗಳ ಮೇಲೆ ಎಫ್​ಐಆರ್​

Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್​​ ಪೋಸ್ಟ್​ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್​​ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್​​ ಖಾತೆಗಳ ವಿರುದ್ಧ ಎಫ್​ಐಆರ್​ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್​​ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.

ಇದನ್ನೂ ಓದಿ: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ಭರತ್ ಕುಮ್ಡೇಲು ಶರಣಾಗತಿ

ಈ ಹಿಂದೆಯೂ ಭರತ್ ಕುಮ್ಡೇಲ್​​ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್‌ ಕುಮ್ಡೇಲ್​​​ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್​​ ಮಾಡಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!