AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಕೋಟಿ ಚೆನ್ನಯ್ಯರ ಕಟಕಟೆ ತಲುಪಿದ ಕೋಳಿ ಅಂಕ ವಿವಾದ: ದೈವ ಕೊಟ್ಟ ಅಭಯವೇನು?

ಮಂಗಳೂರಿನ ಕಂಕನಾಡಿ ಗರೋಡಿ ದೈವಸ್ಥಾನದ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಪೊಲೀಸರು ತಡೆ ಒಡ್ಡಿದ್ದು, ಗರೋಡಿ ಆಡಳಿತ ಸಮಿತಿ ಕೋಟಿ ಚೆನ್ನಯ್ಯ ದೈವಗಳ ಮೊರೆ ಹೋಗಿದೆ. ಜೂಜು ಮತ್ತು ಪ್ರಾಣಿ ಹಿಂಸೆ ನೆಪವೊಡ್ಡಿ ನಿಷೇಧಿಸಿದ್ದರೂ, ದೈವಗಳು ಕೋಳಿ ಅಂಕ ನಡೆಯಲಿದೆ ಎಂದು ಅಭಯ ನೀಡಿವೆ. 150 ವರ್ಷಗಳ ಇತಿಹಾಸವಿರುವ ಈ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಬಾರದು ಎಂದು ಭಕ್ತರು ಆಗ್ರಹಿಸಿದ್ದಾರೆ.

Mangaluru: ಕೋಟಿ ಚೆನ್ನಯ್ಯರ ಕಟಕಟೆ ತಲುಪಿದ ಕೋಳಿ ಅಂಕ ವಿವಾದ: ದೈವ ಕೊಟ್ಟ ಅಭಯವೇನು?
ಕೋಳಿ ಅಂಕ (ಸಾಂದರ್ಭಿಕ ಚಿತ್ರ)
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Jan 04, 2026 | 10:21 AM

Share

ಮಂಗಳೂರು, ಜನವರಿ 04: ಕಾನೂನಿನ ನೆಪವೊಡ್ಡಿ ಪ್ರಸಿದ್ಧ ಕಂಕನಾಡಿ ಗರೋಡಿ ದೈವಸ್ಥಾನದ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಖಾಕಿ ತಡೆ ವಿಚಾರವೀಗ ಕೋಟಿ ಚೆನ್ನಯ್ಯರ ಕಟಕಟೆ ತಲುಪಿದೆ. ಜೂಜು, ಪ್ರಾಣಿ ಹಿಂಸೆ ಕಾರಣ ನೀಡಿ ಕೋಳಿ ಅಂಕಕ್ಕೆ ಮಂಗಳೂರು ಪೊಲೀಸರು ಅನುಮತಿ ನಿರಾಕರಣೆ ಬೆನ್ನಲ್ಲೇ ಗರೋಡಿ ಆಡಳಿತ ಸಮಿತಿ ದೈವಗಳ ಮೊರೆ ಹೋಗಿದೆ. ಈ ವೇಳೆ ಅಭy ನೀಡಿರುವ ದೈವ, ‘ಹಿಂದೆ ಕೋಳಿ ಅಂಕ ನಿಲ್ಲಲು ಬಿಟ್ಟಿಲ್ಲ, ಮುಂದೆಯೂ ಬಿಡುವುದಿಲ್ಲ’ ಎಂದು ತಿಳಿಸಿದೆ.

ವಿಟ್ಲ ಕೇಪು ಉಳ್ಳಾಲ್ತಿ ಬಳಿಕ ಇದೀಗ, 150 ವರ್ಷಗಳ ಇತಿಹಾಸವಿರುವ ಕಂಕನಾಡಿ ಗರೋಡಿ ಜಾತ್ರೆಯ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಅನುಮತಿ ನಿರಾಕರಿಸಲಾಗಿದೆ. ಹಲವು ಬಾರಿ ಮನವಿ, ಮನವರಿಕೆ ಮಾಡಿದರೂ ಪೊಲೀಸರು ಒಪ್ಪಿಲ್ಲ. ಹೀಗಾಗಿ ಬೇರೆ ದಾರಿ ಕಾಣದೆ ಗರೋಡಿ ಆಡಳಿತ ಸಮಿತಿ ಕೋಟಿ ಚೆನ್ನಯ್ಯ ದೈವಗಳ ಮೊರೆ ಹೋಗಿದೆ. ದೈವವೇ ದಾರಿ ತೋರಿಸಿಕೊಡಬೇಕು ಎಂದು ಪ್ರಾರ್ಥನೆ ಸಲ್ಲಿಸಿದೆ. ಯಾಕೆ ಈ ಬಾರಿ ಕೋಳಿ ಅಂಕ ನಡೆದಿಲ್ಲ ಎಂದು ದರ್ಶನದ ವೇಳೆ ದೈವಗಳು ಪ್ರಶ್ನೆ ಮಾಡಿದ್ದು, ಪೊಲೀಸ್‌ ಇಲಾಖೆಯಿಂದ ಕೋಳಿ ಅಂಕಕ್ಕೆ ತಡೆ ಎಂದು ಭಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಕೋಳಿ ಅಂಕ; ಕಾಂಗ್ರೆಸ್ ಶಾಸಕ ಆಯ್ತು ಈಗ ಬಿಜೆಪಿ ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಸೇರಿ 27 ಜನರ ವಿರುದ್ಧ ಕೇಸ್

ಇನ್ನು ಕೋಳಿ ಅಂಕಕ್ಕೆ ತಡೆ ವಿಚಾರವಾಗಿ ಗರಡಿ ಕ್ಷೇತ್ರದ ಟ್ರಸ್ಟಿ ಚಂದ್ರನಾಥ್ ಅತ್ತಾವರ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಾರ್ಣಿಕದ ಕತೆ ಬಹಳ ಇದ್ದು,1997ರ ಆಯೋಧ್ಯೆ ರಾಮ ಮಂದಿರ ವಿವಾದದ ಕರ್ಫ್ಯೂ ವೇಳೆಯೂ ಇಲ್ಲಿ ಕೋಳಿ ಅಂಕ ನಡೆಸಲಾಗಿತ್ತು. ಕೊರೊನಾ ಸಂದರ್ಭದಲ್ಲೂ ಆಯೋಜಿಸಲಾಗಿತ್ತು. ದೈವಗಳಿಗೆ ಪ್ರಾರ್ಥನೆ ಬೆನ್ನಲ್ಲೆ ಎಲ್ಲಾ ಅಡೆತಡೆಗಳು ಪರಿಹಾರವಾಗಿತ್ತು. ಇದೀಗ ಮತ್ತೆ ಕೋಳಿ ಅಂಕವನ್ನ ಸುಸೂತ್ರವಾಗಿ ನಡೆಸೋದಾಗಿ  ದೈವ ನುಡಿ ಕೊಟ್ಟಿದೆ. ಜೂಜು ನಡೆದರೆ ಪೊಲೀಸರು ಕ್ರಮ ಕೈಗೊಳಲಿ. ಆದ್ರೆ ಭಕ್ತರ ಧಾರ್ಮಿಕ ನಂಬಿಕೆಗೆ ಅಡ್ಡಿಪಡಿಸಬಾರದು ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:21 am, Sun, 4 January 26

Follow Us
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!