AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಎಡಮಂಗಲದಲ್ಲಿ ಮರುಕಳಿಸಿದ ‘ಕಾಂತಾರ’ ಸನ್ನಿವೇಶ; ದೈವ ನುಡಿಗೆ ತಲೆ ಬಾಗಿದ ಜನ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದಲ್ಲಿ ತುಳುನಾಡಿನ ದೈವದ ಕಥಾ ಹಂದರ ಇರುವ ಕಾಂತಾರ ಚಿತ್ರವನ್ನು ನೆನಪಿಸುವಂತಹ ಘಟನೆ ನಡೆದಿದೆ. ಪ್ರಶ್ನಾಚಿಂತನೆಯಲ್ಲಿ ಮೃತ ಕಾಂತು ಅಜಿಲರ ಮಕ್ಕಳನ್ನೇ ಮುಂದಿನ ದೈವನರ್ತಕರಾಗಿಸಿಬೇಕು ಎಂದು ದೈವ ಸೂಚನೆ ನೀಡಿದೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 27, 2024 | 3:56 PM

Share

ಮಂಗಳೂರು, ಜ.27: ಕಾಂತಾರ. ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರ. ತುಳುನಾಡಿನ ದೈವಾರಾಧನೆಯ ಕಥಾ ಕಂದರ ಇರುವ ಈ ಸಿನಿಮಾವನ್ನೇ ನೆನಪಿಸುವ ಘಟನೆ ಮತ್ತೆ ಕರಾವಳಿಯ ಮಣ್ಣಿನಲ್ಲಿ ನಡೆದಿದೆ. ದೈವ ನರ್ತಿಸುತ್ತಾ ದೇವರ ಪಾದ ಸೇರಿದ ದೈವ ನರ್ತಕನ ಮಗ ದೈವ ಚಾಕರಿಯ ದೈವ ಬೂಳ್ಯ ಹಿಡಿದು ಜವಾಬ್ದಾರಿ ಹೊತ್ತ ಅಪರೂಪದ ದೃಶ್ಯ ಇದು. ಕಾಂತಾರದ ದೃಶ್ಯವೊಂದನ್ನು ನೆನಪಿಸುವ ಮತ್ತು ತುಳುನಾಡಿನ ದೈವಾರಾಧನೆಗೆ ಸಂಬಂಧಪಟ್ಟಂತೆ ಚಿತ್ರದಲ್ಲಿ ಮೂಡಿಬಂದ ಎಲ್ಲವೂ ವಾಸ್ತವಕ್ಕೆ ಅತ್ಯಂತ ಹತ್ತಿರವಿರುವ ಸಂಗತಿ. ಇದೀಗ ಅಂತಹದ್ದೇ ಒಂದು ಸನ್ನಿವೇಶ ರೂಪಿಸುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ‌.

ಕಳೆದ 2023ರ ಮಾರ್ಚ್ 30 ರಂದು ದೈವದ ನರ್ತನ ಮಾಡುತ್ತಿದ್ದ ಸಂದರ್ಭದಲ್ಲಿ ದೈವ ನರ್ತಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿ ಭಾರೀ ಸುದ್ಧಿ ಮಾಡಿತ್ತು. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಎಡಮಂಗಲದ ಶಿರಾಡಿ ದೈವಸ್ಥಾನದ ವಾರ್ಷಿಕ ಜಾತ್ರೆ ನಡೆಯುತ್ತಿದ್ದು ಈ‌ ಸಂದರ್ಭ ಉಳ್ಳಾಕುಲು ದೈವ ಹಾಗೂ ನಾಗಬ್ರಹ್ಮ ದೈವದ ನರ್ತನ ಸೇವೆ ನಡೆಯುತ್ತಿತ್ತು. ಈ ವೇಳೆ ಉಳ್ಳಾಕುಲು ದೈವದ ನರ್ತಕರಾಗಿದ್ದ ಎಡಮಂಗಲ ನಿವಾಸಿ 60 ವರ್ಷದ ಕಾಂತು ಅಜಿಲ ದೈವದ ನರ್ತನ‌ ಮಾಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದರು. ದೈವ ನರ್ತಕ ಕಾಂತು ಅಜಿಲ ಅಕಾಲಿಕ ಸಾವನ್ನಪ್ಪಿದ ಬಳಿಕ ಆ ಗ್ರಾಮದ ಜನ ದೈವದ ನರ್ತಕನ ಹುಡುಕಾಟದಲ್ಲಿ ತೊಡಗಿದ್ದರು. ದೈವಜ್ಞರ ಪ್ರಶ್ನಾ ಚಿಂತನೆ ನಡೆಸಲಾಯಿತು. ಪ್ರಶ್ನಾ ಚಿಂತನೆಯಲ್ಲಿ ದೈವ ನರ್ತಿಸುತ್ತಾ ಸಾವನ್ನಪ್ಪಿದ ಕಾಂತು ಅಜಿಲರ ಮಕ್ಕಳಾದ ಮೋನಪ್ಪ ಮತ್ತು ದಿನೇಶ್ ಅವರೇ ಮುಂದೆ ದೈವ ನರ್ತನದ ಜವಾಬ್ದಾರಿ ಹೊರಬೇಕು ಅಂತ ಕಂಡು ಬಂದಿದೆ. ಬಳಿಕ, ಶಿರಾಡಿ ದೈವದ ಒಪ್ಪಿಗೆಯನ್ನೂ ಪಡೆಯಲಾಗಿತ್ತು.ಹೀಗಾಗಿ ಈ ವರ್ಷದ ಶಿರಾಡಿ ದೈವದ ನೇಮೋತ್ಸವದ ದಿನ ಇಬ್ಬರೂ ಯುವಕರನ್ನು ದೈವದ ಮುಂದೆ ನಿಲ್ಲಿಸಿ, ದೈವ ಇಬ್ಬರಿಗೂ ಯಾವ ರೀತಿಯಲ್ಲಿ ದೈವದ ಸೇವೆಯನ್ನು ಮಾಡಬೇಕು ಅನ್ನೋದನ್ನು ಸವಿವರವಾಗಿ ತಿಳಿಸುವ ಪ್ರಕ್ರಿಯೆ ನಿಜಕ್ಕೂ ರೋಮಾಂಚನಕಾರಿಯಾಗಿದೆ.

ದೈವದ ನರ್ತನ ಜವಾಬ್ದಾರಿ ಪಡೆದ ಯುವಕರ ಕಣ್ಣಲ್ಲಿ ಆನಂದಭಾಷ್ಪ ಕಂಡರೆ, ಕುಟುಂಬದ ಸದಸ್ಯರಲ್ಲಿ ಧನ್ಯತೆಯ ಭಾವ ಕಂಡು ಬಂದಿತ್ತು. ದೈವ ನರ್ತಕನ ದೀಕ್ಷೆ ಬೂಳ್ಯ ಪಡೆಯುವ ಮೊದಲು ಶುದ್ಧವಾಗಿ ಮಡಿ ಬಟ್ಟೆಯನ್ನು ಸುತ್ತಿ ಮನೆ ಮಂದಿಯ ಹಾಗೂ ಗ್ರಾಮದ ಹಿರಿಯರ ಆಶೀರ್ವಾದ ಪಡೆದ ಬಳಿಕ ಒಂಬತ್ತು ದಿಕ್ಕಿಗೆ ಸೇರಿದ ಜನರ ಸಮ್ಮುಖದಲ್ಲಿ ದೀಕ್ಷೆ ಬೂಳ್ಯವನ್ನು ನೀಡಲಾಗುತ್ತದೆ. ದೈವ ತನ್ನ ನರ್ತಕನಿಗೆ ತನ್ನ ಸೇವೆ ಮಾಡುವಂತೆ ನೀಡುವ ಈ ದೀಕ್ಷೆ ದೈವಾರಾಧನೆಯಲ್ಲಿ ಅತ್ಯಂತ ಮಹತ್ವದ ವಿಚಾರವೂ ಆಗಿದೆ. ದೈವ ತನ್ನ ಅವಾಹನೆಯನ್ನು ಹೊಸದಾಗಿ ನೇಮಕವಾದ ದೈವ ನರ್ತಕರ ಮೂಲಕ ತೋರ್ಪಡಿಸಲಿದೆ ಎನ್ನುವುದು ದೀಕ್ಷೆ ಬೂಳ್ಯದ ಹಿಂದಿರುವ ತತ್ವವಾಗಿದೆ.

ದೀಕ್ಷೆ ಪಡೆದ ಬಳಿಕ ದೈವ ನರ್ತಕ ನಾಲ್ಕು ಗ್ರಾಮಕ್ಕೆ ಸಂಬಂಧಪಟ್ಟ ದೈವಗಳ ಸೇವೆಯ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತುಕೊಳ್ಳುತ್ತಾನೆ. ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳಲು ಊರ ಹಾಗೂ ಪರವೂರಿನ ದೈವಭಕ್ತರು ಭಾಗವಹಿಸಿದರು. ಒಟ್ಟಿನಲ್ಲಿ ಕಾಂತಾರ ಸಿನಿಮಾದ ಕಥೆಯಂತೆ ತುಳುನಾಡಿನ ದೈವಾರಾಧನೆಯಲ್ಲೂ ದೈವೀ ಘಟನೆ ನಡೆದಿದ್ದು ದೈವಗಳ ನಂಬಿಕೆ ಮತ್ತಷ್ಟು ಇಮ್ಮುಡಿಗೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:58 pm, Sat, 27 January 24

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ