AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಕೋಟೆಪುರದಲ್ಲಿ ಬಾಡಿಗೆ ಮನೆಯಲ್ಲಿದ್ದ ದೆಹಲಿ ಮಹಿಳೆಯ ಕೊಲೆ; ಜತೆಗಿದ್ದ ವ್ಯಕ್ತಿ ನಾಪತ್ತೆ

ದೆಹಲಿ ಮೂಲದ ಮಹಿಳೆಯೊಬ್ಬರ ಮೃತದೇಹ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಮಂಗಳೂರಿನ ಕೋಟೆಪುರದ ಮನೆಯೊಂದರಲ್ಲಿ ಪತ್ತೆಯಾಗಿದೆ.

Mangaluru: ಕೋಟೆಪುರದಲ್ಲಿ ಬಾಡಿಗೆ ಮನೆಯಲ್ಲಿದ್ದ ದೆಹಲಿ ಮಹಿಳೆಯ ಕೊಲೆ; ಜತೆಗಿದ್ದ ವ್ಯಕ್ತಿ ನಾಪತ್ತೆ
ಸಾಂದರ್ಭಿಕ ಚಿತ್ರImage Credit source: pixabay
Follow us
Ganapathi Sharma
|

Updated on:Mar 17, 2023 | 8:19 PM

ಮಂಗಳೂರು: ದೆಹಲಿ ಮೂಲದ ಮಹಿಳೆಯೊಬ್ಬರ (Delhi Women) ಮೃತದೇಹ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಮಂಗಳೂರಿನ (Mangaluru) ಕೋಟೆಪುರದ ಮನೆಯೊಂದರಲ್ಲಿ ಗುರುವಾರ ಪತ್ತೆಯಾಗಿದೆ. ಕೊಲೆಯಾದ ಮಹಿಳೆ ಸುಮಾರು 35-40 ವರ್ಷ ವಯಸ್ಸಿನವಳಾಗಿದ್ದು, ಆಕೆಯ ಕುರಿತ ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಿದೆ. ಆಕೆಯೊಂದಿಗಿದ್ದ ದೆಹಲಿಯ ನಯೀಮ್ (30) ಎಂಬ ಯುವಕ ಸದ್ಯ ತಲೆಮರೆಸಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ನಯೀಮ್ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ. ಕೋಟೆಪುರಕ್ಕೆ ಬಂದಿದ್ದ ಮಹಿಳೆ ಹಾಗೂ ನಯೀಮ್ ಸ್ಥಳೀಯ ಸಲೂನ್ ಮಾಲೀಕರ ಮೂಲಕ ಮನೆ ಬಾಡಿಗೆಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇಬ್ಬರೂ ಮಕ್ಕಳ ಬಟ್ಟೆಗಳ ಚಿಲ್ಲರೆ ಮಾರಾಟಗಾರರು ಎಂದು ಪರಿಚಯಿಸಿಕೊಂಡಿದ್ದರು ಎಂದು ಮೂಲಗಳು ಹೇಳಿವೆ.

ಪರಿಸರದಲ್ಲಿ ಇಬ್ಬರೂ ಕಾಣದಿದ್ದಾಗ ಮತ್ತು ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗದೇ ಇದ್ದುದರಿಂದ ಸ್ಥಳೀಯ ನಿವಾಸಿಯೊಬ್ಬರು ಒಳಗೆ ಹೋಗಿ ನೋಡಿದ್ದಾರೆ. ಆಗ ಶೌಚಾಲಯದಲ್ಲಿ ಮಹಿಳೆಯ ಶವ ಬಿದ್ದಿರುವುದು ಕಂಡು ಬಂದಿದೆ. ಕೃತ್ಯಕ್ಕೆ ಬಳಸಿದ ಚಾಕು ಕೂಡ ಸ್ಥಳದಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: Mangaluru News: ಕಳ್ಳತನವಾಗಿದ್ದ 124 ಪೈಕಿ 39 ಮೊಬೈಲ್​ಗಳು CEIR ಪೋರ್ಟಲ್​ ಮೂಲಕ ಪತ್ತೆ, ಮಾಲೀಕರಿಗೆ ವಾಪಸ್

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಹಾಗೂ ಬೆರಳಚ್ಚು ತಜ್ಞರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಬಾಡಿಗೆಗೆ ಮನೆ ನೀಡುವಾಗ ಬಾಡಿಗೆದಾರರ ಗುರುತಿನ ಚೀಟಿಯನ್ನು ಮಾಲೀಕರು ಕೇಳಿರಲಿಲ್ಲ ಎಂದು ತಿಳಿದುಬಂದಿದೆ. ಮನೆಯಲ್ಲಿ ದೊರೆತ ಆಧಾರ್ ಕಾರ್ಡ್​ ಆಧರಿಸಿ ನಾಪತ್ತೆಯಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Fri, 17 March 23

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ