AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಕೋಟೆಪುರದಲ್ಲಿ ಬಾಡಿಗೆ ಮನೆಯಲ್ಲಿದ್ದ ದೆಹಲಿ ಮಹಿಳೆಯ ಕೊಲೆ; ಜತೆಗಿದ್ದ ವ್ಯಕ್ತಿ ನಾಪತ್ತೆ

ದೆಹಲಿ ಮೂಲದ ಮಹಿಳೆಯೊಬ್ಬರ ಮೃತದೇಹ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಮಂಗಳೂರಿನ ಕೋಟೆಪುರದ ಮನೆಯೊಂದರಲ್ಲಿ ಪತ್ತೆಯಾಗಿದೆ.

Mangaluru: ಕೋಟೆಪುರದಲ್ಲಿ ಬಾಡಿಗೆ ಮನೆಯಲ್ಲಿದ್ದ ದೆಹಲಿ ಮಹಿಳೆಯ ಕೊಲೆ; ಜತೆಗಿದ್ದ ವ್ಯಕ್ತಿ ನಾಪತ್ತೆ
ಸಾಂದರ್ಭಿಕ ಚಿತ್ರImage Credit source: pixabay
ಗಣಪತಿ ಶರ್ಮಾ
|

Updated on:Mar 17, 2023 | 8:19 PM

Share

ಮಂಗಳೂರು: ದೆಹಲಿ ಮೂಲದ ಮಹಿಳೆಯೊಬ್ಬರ (Delhi Women) ಮೃತದೇಹ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಮಂಗಳೂರಿನ (Mangaluru) ಕೋಟೆಪುರದ ಮನೆಯೊಂದರಲ್ಲಿ ಗುರುವಾರ ಪತ್ತೆಯಾಗಿದೆ. ಕೊಲೆಯಾದ ಮಹಿಳೆ ಸುಮಾರು 35-40 ವರ್ಷ ವಯಸ್ಸಿನವಳಾಗಿದ್ದು, ಆಕೆಯ ಕುರಿತ ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಿದೆ. ಆಕೆಯೊಂದಿಗಿದ್ದ ದೆಹಲಿಯ ನಯೀಮ್ (30) ಎಂಬ ಯುವಕ ಸದ್ಯ ತಲೆಮರೆಸಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ನಯೀಮ್ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ. ಕೋಟೆಪುರಕ್ಕೆ ಬಂದಿದ್ದ ಮಹಿಳೆ ಹಾಗೂ ನಯೀಮ್ ಸ್ಥಳೀಯ ಸಲೂನ್ ಮಾಲೀಕರ ಮೂಲಕ ಮನೆ ಬಾಡಿಗೆಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇಬ್ಬರೂ ಮಕ್ಕಳ ಬಟ್ಟೆಗಳ ಚಿಲ್ಲರೆ ಮಾರಾಟಗಾರರು ಎಂದು ಪರಿಚಯಿಸಿಕೊಂಡಿದ್ದರು ಎಂದು ಮೂಲಗಳು ಹೇಳಿವೆ.

ಪರಿಸರದಲ್ಲಿ ಇಬ್ಬರೂ ಕಾಣದಿದ್ದಾಗ ಮತ್ತು ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗದೇ ಇದ್ದುದರಿಂದ ಸ್ಥಳೀಯ ನಿವಾಸಿಯೊಬ್ಬರು ಒಳಗೆ ಹೋಗಿ ನೋಡಿದ್ದಾರೆ. ಆಗ ಶೌಚಾಲಯದಲ್ಲಿ ಮಹಿಳೆಯ ಶವ ಬಿದ್ದಿರುವುದು ಕಂಡು ಬಂದಿದೆ. ಕೃತ್ಯಕ್ಕೆ ಬಳಸಿದ ಚಾಕು ಕೂಡ ಸ್ಥಳದಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: Mangaluru News: ಕಳ್ಳತನವಾಗಿದ್ದ 124 ಪೈಕಿ 39 ಮೊಬೈಲ್​ಗಳು CEIR ಪೋರ್ಟಲ್​ ಮೂಲಕ ಪತ್ತೆ, ಮಾಲೀಕರಿಗೆ ವಾಪಸ್

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಹಾಗೂ ಬೆರಳಚ್ಚು ತಜ್ಞರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಬಾಡಿಗೆಗೆ ಮನೆ ನೀಡುವಾಗ ಬಾಡಿಗೆದಾರರ ಗುರುತಿನ ಚೀಟಿಯನ್ನು ಮಾಲೀಕರು ಕೇಳಿರಲಿಲ್ಲ ಎಂದು ತಿಳಿದುಬಂದಿದೆ. ಮನೆಯಲ್ಲಿ ದೊರೆತ ಆಧಾರ್ ಕಾರ್ಡ್​ ಆಧರಿಸಿ ನಾಪತ್ತೆಯಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Fri, 17 March 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ