AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಕೋಟೆಪುರದಲ್ಲಿ ಬಾಡಿಗೆ ಮನೆಯಲ್ಲಿದ್ದ ದೆಹಲಿ ಮಹಿಳೆಯ ಕೊಲೆ; ಜತೆಗಿದ್ದ ವ್ಯಕ್ತಿ ನಾಪತ್ತೆ

ದೆಹಲಿ ಮೂಲದ ಮಹಿಳೆಯೊಬ್ಬರ ಮೃತದೇಹ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಮಂಗಳೂರಿನ ಕೋಟೆಪುರದ ಮನೆಯೊಂದರಲ್ಲಿ ಪತ್ತೆಯಾಗಿದೆ.

Mangaluru: ಕೋಟೆಪುರದಲ್ಲಿ ಬಾಡಿಗೆ ಮನೆಯಲ್ಲಿದ್ದ ದೆಹಲಿ ಮಹಿಳೆಯ ಕೊಲೆ; ಜತೆಗಿದ್ದ ವ್ಯಕ್ತಿ ನಾಪತ್ತೆ
ಸಾಂದರ್ಭಿಕ ಚಿತ್ರImage Credit source: pixabay
ಗಣಪತಿ ಶರ್ಮಾ
|

Updated on:Mar 17, 2023 | 8:19 PM

Share

ಮಂಗಳೂರು: ದೆಹಲಿ ಮೂಲದ ಮಹಿಳೆಯೊಬ್ಬರ (Delhi Women) ಮೃತದೇಹ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಮಂಗಳೂರಿನ (Mangaluru) ಕೋಟೆಪುರದ ಮನೆಯೊಂದರಲ್ಲಿ ಗುರುವಾರ ಪತ್ತೆಯಾಗಿದೆ. ಕೊಲೆಯಾದ ಮಹಿಳೆ ಸುಮಾರು 35-40 ವರ್ಷ ವಯಸ್ಸಿನವಳಾಗಿದ್ದು, ಆಕೆಯ ಕುರಿತ ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಿದೆ. ಆಕೆಯೊಂದಿಗಿದ್ದ ದೆಹಲಿಯ ನಯೀಮ್ (30) ಎಂಬ ಯುವಕ ಸದ್ಯ ತಲೆಮರೆಸಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ನಯೀಮ್ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ. ಕೋಟೆಪುರಕ್ಕೆ ಬಂದಿದ್ದ ಮಹಿಳೆ ಹಾಗೂ ನಯೀಮ್ ಸ್ಥಳೀಯ ಸಲೂನ್ ಮಾಲೀಕರ ಮೂಲಕ ಮನೆ ಬಾಡಿಗೆಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇಬ್ಬರೂ ಮಕ್ಕಳ ಬಟ್ಟೆಗಳ ಚಿಲ್ಲರೆ ಮಾರಾಟಗಾರರು ಎಂದು ಪರಿಚಯಿಸಿಕೊಂಡಿದ್ದರು ಎಂದು ಮೂಲಗಳು ಹೇಳಿವೆ.

ಪರಿಸರದಲ್ಲಿ ಇಬ್ಬರೂ ಕಾಣದಿದ್ದಾಗ ಮತ್ತು ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗದೇ ಇದ್ದುದರಿಂದ ಸ್ಥಳೀಯ ನಿವಾಸಿಯೊಬ್ಬರು ಒಳಗೆ ಹೋಗಿ ನೋಡಿದ್ದಾರೆ. ಆಗ ಶೌಚಾಲಯದಲ್ಲಿ ಮಹಿಳೆಯ ಶವ ಬಿದ್ದಿರುವುದು ಕಂಡು ಬಂದಿದೆ. ಕೃತ್ಯಕ್ಕೆ ಬಳಸಿದ ಚಾಕು ಕೂಡ ಸ್ಥಳದಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: Mangaluru News: ಕಳ್ಳತನವಾಗಿದ್ದ 124 ಪೈಕಿ 39 ಮೊಬೈಲ್​ಗಳು CEIR ಪೋರ್ಟಲ್​ ಮೂಲಕ ಪತ್ತೆ, ಮಾಲೀಕರಿಗೆ ವಾಪಸ್

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಹಾಗೂ ಬೆರಳಚ್ಚು ತಜ್ಞರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಬಾಡಿಗೆಗೆ ಮನೆ ನೀಡುವಾಗ ಬಾಡಿಗೆದಾರರ ಗುರುತಿನ ಚೀಟಿಯನ್ನು ಮಾಲೀಕರು ಕೇಳಿರಲಿಲ್ಲ ಎಂದು ತಿಳಿದುಬಂದಿದೆ. ಮನೆಯಲ್ಲಿ ದೊರೆತ ಆಧಾರ್ ಕಾರ್ಡ್​ ಆಧರಿಸಿ ನಾಪತ್ತೆಯಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Fri, 17 March 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ