AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಐಟಿ ಪಾರ್ಕ್‌ ಸ್ಥಾಪನೆಗೆ ಸರ್ಕಾರ ಸಮ್ಮತಿ; ದಿನೇಶ್‌ ಗುಂಡೂರಾವ್‌

ಕದ್ರಿ ಪಾರ್ಕ್ ರಸ್ತೆಯಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ಹೊಸ ಮಳಿಗೆಗಳಿಗೆ ಷರತ್ತುಗಳ ಬದಲಾವಣೆಯೊಂದಿಗೆ ಹೊಸ ಟೆಂಡರ್‌ಗಳನ್ನು ಶೀಘ್ರದಲ್ಲಿಯೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಕರಡು ವಲಯ ನಿಯಮಾವಳಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರು ಐಟಿ ಪಾರ್ಕ್‌ ಸ್ಥಾಪನೆಗೆ ಸರ್ಕಾರ ಸಮ್ಮತಿ; ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌
Ganapathi Sharma
|

Updated on: Sep 11, 2023 | 9:09 PM

Share

ಮಂಗಳೂರು, ಸೆಪ್ಟೆಂಬರ್ 11: ಮಂಗಳೂರಿನ ದೇರೆಬೈಲ್‌ನಲ್ಲಿ ಐಟಿ ಪಾರ್ಕ್‌ (Mangalore IT Park) ಸ್ಥಾಪನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್‌ ಗುಂಡೂರಾವ್‌ (Dinesh Gundu Rao) ಹೇಳಿದ್ದಾರೆ. ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನ (KEONICS) ಮೂರು ಎಕರೆಗಿಂತಲೂ ಹೆಚ್ಚು ಪ್ರದೇಶದಲ್ಲಿ ಈ ಯೋಜನೆಯನ್ನು ಸರ್ಕಾರಿ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಸ್ಥಾಪಿಸಲಾಗುವುದು. ಯೋಜನೆಗೆ ಪ್ರಸ್ತಾವನೆ (RFP) ಎರಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಐಟಿ ಪಾರ್ಕ್ ಅನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಯೋಜನೆಯ ಪ್ರಸ್ತಾವಿತ ವಲಯ ನಿಯಂತ್ರಣದ ಮೇಲೆ ಪಿಪಿಪಿ ಅವಧಿಯನ್ನು 30 ವರ್ಷದಿಂದ 60 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಂಗಳೂರು ನಗರದ ಮಹಾಯೋಜನೆಗೆ ಸಂಬಂಧಿಸಿದಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಾಡಿರುವ ತಿದ್ದುಪಡಿಗಳು ಮತ್ತು ಶಿಫಾರಸುಗಳ ಕುರಿತು ಅಧ್ಯಯನ ನಡೆಸುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯಕ್ಕೆ (ಡಿಟಿಸಿಪಿ) ಸೂಚಿಸಿರುವುದಾಗಿ ಸಚಿವರು ತಿಳಿಸಿದ್ದಾರೆ.

ಕದ್ರಿ ಪಾರ್ಕ್ ರಸ್ತೆಯಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ಹೊಸ ಮಳಿಗೆಗಳಿಗೆ ಷರತ್ತುಗಳ ಬದಲಾವಣೆಯೊಂದಿಗೆ ಹೊಸ ಟೆಂಡರ್‌ಗಳನ್ನು ಶೀಘ್ರದಲ್ಲಿಯೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಕರಡು ವಲಯ ನಿಯಮಾವಳಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿ: ಬಿಕೆ ಹರಿಪ್ರಸಾದ್ ಯಾರ ಬಗ್ಗೆ ಯಾಕೆ ಟೀಕೆ ಮಾಡುತ್ತಿದ್ದಾರೆ ಅರ್ಥವಾಗುತ್ತಿಲ್ಲ: ದಿನೇಶ್ ಗುಂಡೂರಾವ್

ಗಣೇಶ ಹಬ್ಬಕ್ಕೆ ಸಾರ್ವಜನಿಕ ರಜೆ ವಿಚಾರದಲ್ಲಿ ಗೊಂದಲ

ಈ ವರ್ಷ ಗಣೇಶ ಚತುರ್ಥಿಯ ದಿನವಾದ ಸೆಪ್ಟೆಂಬರ್ 19 ರಂದು ಸಾರ್ವಜನಿಕ ರಜೆ ಇಲ್ಲ. ಬದಲಿಗೆ ಸೆಪ್ಟೆಂಬರ್ 18ರಂದು ಸರ್ಕಾರಿ ರಜೆ ಇರಲಿದೆ. ಸರ್ಕಾರಿ ಕ್ಯಾಲೆಂಡರ್ ಪ್ರಕಾರ ಸೆಪ್ಟೆಂಬರ್ 18 ರಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ, ಆದರೆ ನಿಜವಾದ ಹಬ್ಬ ಸೆಪ್ಟೆಂಬರ್ 19 ರಂದು ಆಚರಿಸಲಾಗುತ್ತದೆ. ಇದು ಕರಾವಳಿ ಪ್ರದೇಶದ ಜನರಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ.ಸೆಪ್ಟೆಂಬರ್ 19 ರಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರು ಕೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ರಾಜ್ಯ ಸರ್ಕಾರ ಮಾತ್ರ ನಿರ್ಧಾರ ಕೈಗೊಳ್ಳಲು ಸಾಧ್ಯ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ