AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡು, ಕೊಡಗಿನಲ್ಲಿ ತುಂಬಾ ಖುಷಿ ಅಥವಾ ದುಃಖ ಆದಾಗ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಭಯೋತ್ಪಾದಕ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು. ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೇಂದ್ರ ಸರ್ಕಾರದ ಜತೆ ಚರ್ಚಿಸಿ ಈ ಕುರಿತು ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮಲೆನಾಡು, ಕೊಡಗಿನಲ್ಲಿ ತುಂಬಾ ಖುಷಿ ಅಥವಾ ದುಃಖ ಆದಾಗ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ ಮತ್ತು ಭಗವಂತ ಖೂಬಾ
TV9 Web
| Edited By: |

Updated on:Aug 20, 2021 | 5:48 PM

Share

ಮಂಗಳೂರು: ಮಲೆನಾಡು ಹಾಗೂ ಕೊಡಗಿನಲ್ಲಿ ತುಂಬಾ ಖುಷಿಯಾದಾಗ ಅಥವಾ ದುಃಖವಾದಾಗ ಗಾಳಿಯಲ್ಲಿ ಗುಂಡು ಹಾರಿಸುವ ಸಂಸ್ಕೃತಿಯಿದೆ. ಕೇಂದ್ರ ಸಚಿವ ಭಗವಂತ ಖೂಬಾ ಆಗಮಿಸಿದಾಗ ಅವರ ಬೆಂಬಲಿಗರು ಖುಷಿಗೆ ಗಾಳಿಯಲ್ಲಿ ಗುಂಡುಹಾರಿಸಿರಬಹುದು. ಆದರೆ ಸಾರ್ವಜನಿಕವಾಗಿ ಈ ರೀತಿ ಮಾಡಿರುವುದು ತಪ್ಪು ಎಂದು ಮಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಯಾದಗಿರಿ ತಾಲೂಕಿನ ಯರಗೋಳ್ ಬಳಿ ನಡೆದಿದ್ದ ಈ ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮೂವರು ಪಿಸಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ನನಗೆ ಯಾವುದೇ ರೀತಿಯ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆಂದು ಬಳ್ಳಾರಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಈಗಾ ತಿಳಿಸಿದ್ದಾರೆ.

ಬಂದೂಕು ಹಿಡಿದು ಅಟ್ಟಹಾಸಗೈದಿದ್ದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮತ್ತು ಇತರೆ ಬಿಜೆಪಿ ಮುಖಂಡರು, ಆದರೆ ಪೊಲೀಸರು ಬಂಧಿಸಿದ್ದು ಕೇವಲ ಕಾರ್ಯಕರ್ತರನ್ನ ಮಾತ್ರ. ಮಾಜಿ ಸಚಿವರ ಮೇಲೆ ಕೇಸ್ ದಾಖಲಿಸಿ, ಬಂಧಿಸದಿರುವುದೇಕೆ? ರಾಜಕೀಯ ಹಿತಾಸಕ್ತಿಗೆ ಅಮಾಯಕ ಕಾರ್ಯಕರ್ತರನ್ನು ಬಲಿ ಕೊಡುವುದು ತಾಲಿಬಾನ್ ಸಂಸ್ಕೃತಿ. ತಾಲಿಬಾನ್ ಸಂಸ್ಕೃತಿಯ ಬಿಜೆಪಿಗೆ ಇದು ಹಳೆಯ ಚಾಳಿ ಎಂದು ರಾಜ್ಯ ಕಾಂಗ್ರೆಸ್ ಟೀಕೆ ಮಾಡಿದೆ.

ಮಂಗಳೂರಿನಲ್ಲಿ ಎನ್​ಐಎ ಕಚೇರಿ ಮಂಗಳೂರಿನಲ್ಲಿ NIA ಕೇಂದ್ರ ಸ್ಥಾಪನೆ ಮಾಡುವ ವಿಚಾರವಾಗಿಯೂ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು. ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೇಂದ್ರ ಸರ್ಕಾರದ ಜತೆ ಚರ್ಚಿಸಿ ಈ ಕುರಿತು ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: 

ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರ ಸ್ವಾಗತ ಕೇಸ್; ಮೂವರು ಪಿಸಿಗಳು ಸಸ್ಪೆಂಡ್, ಈ ಬಗ್ಗೆ ಮಾಹಿತಿ ಇಲ್ಲ ಎಂದ ಭಗವಂತ ಖೂಬಾ

ಇಂದಿರಾ ಕ್ಯಾಂಟೀನ್​ಗೆ ಅನ್ನಪೂರ್ಣೇಶ್ವರಿ ಹೆಸರು ಇಡುವುದರಿಂದ ಕಾಂಗ್ರೆಸ್​ನವರಿಗೆ ಏನು ಸಮಸ್ಯೆ? ಸಂಸದ ಭಗವಂತ ಖೂಬಾ

(Karnataka Home Minister Araga Jnanendra says Malnad and Kodagu people Shoot in the air when they are very happy or sad about Minister Bhagwanth Khuba case)

Published On - 5:41 pm, Fri, 20 August 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ